<p><strong>ನವದೆಹಲಿ</strong>: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಮೋದಿ ಸರ್ಕಾರ ಜನರಿಂದ ಸುಲಿಗೆ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಖರ್ಗೆ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಕನಿಷ್ಠ ಮಟ್ಟಕ್ಕೆ ಕುಸಿದಿವೆ. ಆದರೆ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಕಡಿಮೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಪ್ಯಾಂಕ್ರಿಯಾಸ್ ಕ್ಯಾನ್ಸರ್ಗೆ ಲಸಿಕೆ: ಭಾರತೀಯ ಡಾ.ವಿನೋದ್ ತಂಡದ ಯಶಸ್ವಿ ಪ್ರಯೋಗ.ಕೃಷ್ಣನ ಬೋಧನೆಗಳು ಶಕ್ತಿ ನೀಡುತ್ತವೆ ಎಂದ US ಗುಪ್ತಚರ ವಿಭಾಗದ ನಿರ್ದೇಶಕಿ ತುಳಸಿ. <p>ಕಚ್ಚಾ ತೈಲ ಬೆಲೆ ನಿರಂತರವಾಗಿ ಕುಸಿಯುತ್ತಿದೆ. ಆದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏಕೆ ಕಡಿಮೆ ಆಗಿಲ್ಲ?, ಮೋದಿ ಸರ್ಕಾರ ಜನರನ್ನು ನಿರ್ಭಯವಾಗಿ ದೋಚುತ್ತಿದೆ ಎಂದು ಖರ್ಗೆ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮವು ಏಕಪಕ್ಷೀಯವಾಗಿದೆ. ಆದರೆ ಜನರು ಹಣದುಬ್ಬರದಿಂದಾಗಿ ತತ್ತರಿಸಿದ್ದಾರೆ, ಕಣ್ಣೀರು ಸುರಿಸುತ್ತಿದ್ದಾರೆ ಎಂದು ಖರ್ಗೆ ಟೀಕಿಸಿದ್ದಾರೆ</p><p>ಕಚ್ಚಾ ತೈಲದ ಬೆಲೆಯಲ್ಲಿ ಶೇ. 34ರಷ್ಟು ಕುಸಿದಿದೆ. ಕಳೆದ ಹತ್ತು ವರ್ಷಗಳಲ್ಲಿ ಮೋದಿ ಸರ್ಕಾರ ಸುಮಾರು ₹36 ಲಕ್ಷ ಕೋಟಿ ದೋಚಿದೆ. ಹೀಗೆ ಆದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಯಾವಾಗ ಕಡಿಮೆಯಾಗುತ್ತದೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.</p>.ಧರ್ಮದ ಆಧಾರದ ಮೇಲೆ ಸಮಾಜವನ್ನು ವಿಭಜಿಸಲು ಹೊರಟಿರುವ ಸಿಎಂ, ಡಿಸಿಎಂ: ಅಶೋಕ ಕಿಡಿ.IPL ಸಲುವಾಗಿ ಪಾಕಿಸ್ತಾನ ಲೀಗ್ನಿಂದ ಹಿಂದೆ ಸರಿದ ಆಟಗಾರನಿಗೆ PCB ನೋಟಿಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಮೋದಿ ಸರ್ಕಾರ ಜನರಿಂದ ಸುಲಿಗೆ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಖರ್ಗೆ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಕನಿಷ್ಠ ಮಟ್ಟಕ್ಕೆ ಕುಸಿದಿವೆ. ಆದರೆ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಕಡಿಮೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಪ್ಯಾಂಕ್ರಿಯಾಸ್ ಕ್ಯಾನ್ಸರ್ಗೆ ಲಸಿಕೆ: ಭಾರತೀಯ ಡಾ.ವಿನೋದ್ ತಂಡದ ಯಶಸ್ವಿ ಪ್ರಯೋಗ.ಕೃಷ್ಣನ ಬೋಧನೆಗಳು ಶಕ್ತಿ ನೀಡುತ್ತವೆ ಎಂದ US ಗುಪ್ತಚರ ವಿಭಾಗದ ನಿರ್ದೇಶಕಿ ತುಳಸಿ. <p>ಕಚ್ಚಾ ತೈಲ ಬೆಲೆ ನಿರಂತರವಾಗಿ ಕುಸಿಯುತ್ತಿದೆ. ಆದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏಕೆ ಕಡಿಮೆ ಆಗಿಲ್ಲ?, ಮೋದಿ ಸರ್ಕಾರ ಜನರನ್ನು ನಿರ್ಭಯವಾಗಿ ದೋಚುತ್ತಿದೆ ಎಂದು ಖರ್ಗೆ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮವು ಏಕಪಕ್ಷೀಯವಾಗಿದೆ. ಆದರೆ ಜನರು ಹಣದುಬ್ಬರದಿಂದಾಗಿ ತತ್ತರಿಸಿದ್ದಾರೆ, ಕಣ್ಣೀರು ಸುರಿಸುತ್ತಿದ್ದಾರೆ ಎಂದು ಖರ್ಗೆ ಟೀಕಿಸಿದ್ದಾರೆ</p><p>ಕಚ್ಚಾ ತೈಲದ ಬೆಲೆಯಲ್ಲಿ ಶೇ. 34ರಷ್ಟು ಕುಸಿದಿದೆ. ಕಳೆದ ಹತ್ತು ವರ್ಷಗಳಲ್ಲಿ ಮೋದಿ ಸರ್ಕಾರ ಸುಮಾರು ₹36 ಲಕ್ಷ ಕೋಟಿ ದೋಚಿದೆ. ಹೀಗೆ ಆದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಯಾವಾಗ ಕಡಿಮೆಯಾಗುತ್ತದೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.</p>.ಧರ್ಮದ ಆಧಾರದ ಮೇಲೆ ಸಮಾಜವನ್ನು ವಿಭಜಿಸಲು ಹೊರಟಿರುವ ಸಿಎಂ, ಡಿಸಿಎಂ: ಅಶೋಕ ಕಿಡಿ.IPL ಸಲುವಾಗಿ ಪಾಕಿಸ್ತಾನ ಲೀಗ್ನಿಂದ ಹಿಂದೆ ಸರಿದ ಆಟಗಾರನಿಗೆ PCB ನೋಟಿಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>