<p><strong>ನವದೆಹಲಿ</strong>: ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗಳಲ್ಲಿ ಗೆಲ್ಲಲು ಮತಗಳ್ಳತನದಲ್ಲಿ ತೊಡಗಿದ್ದಾರೆ ಎಂಬ ವಿರೋಧ ಪಕ್ಷಗಳ ಆರೋಪಗಳಿಗೆ ಬಿಜೆಪಿ ಸಂಸದೆ ಕಂಗನಾ ರನೌತ್ ತಿರುಗೇಟು ನೀಡಿದ್ದಾರೆ.</p><p>ಲೋಕಸಭೆಯಲ್ಲಿ ಚುನಾವಣೆಗಳ ಕುರಿತು ನಡೆಸಿದ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಜನರ ಹೃದಯಗಳನ್ನು ಕದ್ದಿದ್ದಾರೆ ಹೊರತು ಚುನಾವಣೆಗಳಲ್ಲಿ ಮತಗಳನ್ನಲ್ಲ. ಮೋದಿ ಜನರ ಮನಸ್ಸಿನಲ್ಲಿದ್ದಾರೆ ಹೀಗಾಗಿ ಅವರು ಮತಗಳನ್ನು ಕದಿಯುವ ಅವಶ್ಯಕತೆಯೇ ಇಲ್ಲ ಎಂದು ವಿರೋಧ ಪಕ್ಷಗಳಿಗೆ ಕುಟುಕಿದ್ದಾರೆ.</p>.ಸುಂದರ ವದನ, ಮೆಷಿನ್ ಗನ್ನಂತಹ ತುಟಿ: ಟ್ರಂಪ್ ಹೊಗಳಿದ ಈ ಚೆಲುವೆ ಯಾರು?.ಸವಣೂರು|ವಿದ್ಯಾರ್ಥಿನಿ ಮೇಲೆ ದೌರ್ಜನ್ಯ: ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ. <p>ಸದನದಲ್ಲಿ ಚರ್ಚೆ ನಡೆಸಲು ವಿರೋಧ ಪಕ್ಷಗಳು ಅಡ್ಡಿಪಡಿಸುತ್ತಿವೆ. ಆದರೆ, ವಾಸ್ತವವಾಗಿ ಚುನಾವಣೆಗಳಲ್ಲಿ ಬಿಜೆಪಿ ಗೆಲುವನ್ನು ಸಹಿಸಲು ಆಗದೇ, ತಮಗಾದ ಸೋಲನ್ನು ಒಪ್ಪಿಕೊಳ್ಳದೇ ವಿರೋಧ ಪಕ್ಷಗಳು ಅತಂತ್ರ ಸ್ಥಿತಿಯಲ್ಲಿವೆ ಎಂದು ವ್ಯಂಗ್ಯವಾಡಿದ್ದಾರೆ.</p><p>ವಿರೋಧ ಪಕ್ಷಗಳು ಮಹಿಳೆಯರನ್ನು ಅವಮಾನಿಸುತ್ತ ಬಂದಿವೆ. ಆದರೆ, ಮೋದಿ ಸರ್ಕಾರ ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದೆ ಎಂದು ಹೇಳಿದ್ದಾರೆ.</p><p>ಸರ್ಕಾರ ’ಭೂತಕಾಲವನ್ನು’ ಬಿಟ್ಟುಬಿಡಬೇಕು ಎಂಬ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೇಳಿಕೆಗೆ ತಿರುಗೇಟು ನೀಡಿರುವ ರನೌತ್, ಕಾಂಗ್ರೆಸ್ ತನ್ನದೇ ಆದ ಇತಿಹಾಸದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಭಾರತೀಯ ಪೌರತ್ವ ಪಡೆಯುವ ಮುನ್ನವೇ ಚುನಾವಣೆಯಲ್ಲಿ ಮತ ಚಲಾಯಿಸಿದ್ದರು ಎಂದು ಆರೋಪಿಸಿದ್ದಾರೆ.</p>.ಗಿಂಬಳ ಪಡೆಯದೇ ಸಂಬಳಕ್ಕಷ್ಟೇ ಕೆಲಸ ಮಾಡುವ ಅಧಿಕಾರಿಯನ್ನು ನೋಡಿಲ್ಲ: ಎಂ.ನಾಗರಾಜು.ಚಿತ್ರದುರ್ಗ | ರೇಣುಕಸ್ವಾಮಿ ಸಮಾಧಿ ಧ್ವಂಸವಾಗಿಲ್ಲ: ಕಾಶಿನಾಥಯ್ಯ ಸ್ಪಷ್ಟನೆ.ಶಿವಣ್ಣನ ಕಂಠದಲ್ಲಿ ಮೂಡಿ ಬಂತು ಅಯ್ಯಪ್ಪನ ಭಕ್ತಿಗೀತೆ: ವಿಡಿಯೊ ನೋಡಿ.ಚಿಕ್ಕ ವಯಸ್ಸಿನಲ್ಲೆ ಬಿಳಿ ಕೂದಲಿನ ಸಮಸ್ಯೆಯೇ? ಚಿಂತೆಬಿಡಿ, ಈ ಕ್ರಮಗಳನ್ನು ಪಾಲಿಸಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗಳಲ್ಲಿ ಗೆಲ್ಲಲು ಮತಗಳ್ಳತನದಲ್ಲಿ ತೊಡಗಿದ್ದಾರೆ ಎಂಬ ವಿರೋಧ ಪಕ್ಷಗಳ ಆರೋಪಗಳಿಗೆ ಬಿಜೆಪಿ ಸಂಸದೆ ಕಂಗನಾ ರನೌತ್ ತಿರುಗೇಟು ನೀಡಿದ್ದಾರೆ.</p><p>ಲೋಕಸಭೆಯಲ್ಲಿ ಚುನಾವಣೆಗಳ ಕುರಿತು ನಡೆಸಿದ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಜನರ ಹೃದಯಗಳನ್ನು ಕದ್ದಿದ್ದಾರೆ ಹೊರತು ಚುನಾವಣೆಗಳಲ್ಲಿ ಮತಗಳನ್ನಲ್ಲ. ಮೋದಿ ಜನರ ಮನಸ್ಸಿನಲ್ಲಿದ್ದಾರೆ ಹೀಗಾಗಿ ಅವರು ಮತಗಳನ್ನು ಕದಿಯುವ ಅವಶ್ಯಕತೆಯೇ ಇಲ್ಲ ಎಂದು ವಿರೋಧ ಪಕ್ಷಗಳಿಗೆ ಕುಟುಕಿದ್ದಾರೆ.</p>.ಸುಂದರ ವದನ, ಮೆಷಿನ್ ಗನ್ನಂತಹ ತುಟಿ: ಟ್ರಂಪ್ ಹೊಗಳಿದ ಈ ಚೆಲುವೆ ಯಾರು?.ಸವಣೂರು|ವಿದ್ಯಾರ್ಥಿನಿ ಮೇಲೆ ದೌರ್ಜನ್ಯ: ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ. <p>ಸದನದಲ್ಲಿ ಚರ್ಚೆ ನಡೆಸಲು ವಿರೋಧ ಪಕ್ಷಗಳು ಅಡ್ಡಿಪಡಿಸುತ್ತಿವೆ. ಆದರೆ, ವಾಸ್ತವವಾಗಿ ಚುನಾವಣೆಗಳಲ್ಲಿ ಬಿಜೆಪಿ ಗೆಲುವನ್ನು ಸಹಿಸಲು ಆಗದೇ, ತಮಗಾದ ಸೋಲನ್ನು ಒಪ್ಪಿಕೊಳ್ಳದೇ ವಿರೋಧ ಪಕ್ಷಗಳು ಅತಂತ್ರ ಸ್ಥಿತಿಯಲ್ಲಿವೆ ಎಂದು ವ್ಯಂಗ್ಯವಾಡಿದ್ದಾರೆ.</p><p>ವಿರೋಧ ಪಕ್ಷಗಳು ಮಹಿಳೆಯರನ್ನು ಅವಮಾನಿಸುತ್ತ ಬಂದಿವೆ. ಆದರೆ, ಮೋದಿ ಸರ್ಕಾರ ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದೆ ಎಂದು ಹೇಳಿದ್ದಾರೆ.</p><p>ಸರ್ಕಾರ ’ಭೂತಕಾಲವನ್ನು’ ಬಿಟ್ಟುಬಿಡಬೇಕು ಎಂಬ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೇಳಿಕೆಗೆ ತಿರುಗೇಟು ನೀಡಿರುವ ರನೌತ್, ಕಾಂಗ್ರೆಸ್ ತನ್ನದೇ ಆದ ಇತಿಹಾಸದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಭಾರತೀಯ ಪೌರತ್ವ ಪಡೆಯುವ ಮುನ್ನವೇ ಚುನಾವಣೆಯಲ್ಲಿ ಮತ ಚಲಾಯಿಸಿದ್ದರು ಎಂದು ಆರೋಪಿಸಿದ್ದಾರೆ.</p>.ಗಿಂಬಳ ಪಡೆಯದೇ ಸಂಬಳಕ್ಕಷ್ಟೇ ಕೆಲಸ ಮಾಡುವ ಅಧಿಕಾರಿಯನ್ನು ನೋಡಿಲ್ಲ: ಎಂ.ನಾಗರಾಜು.ಚಿತ್ರದುರ್ಗ | ರೇಣುಕಸ್ವಾಮಿ ಸಮಾಧಿ ಧ್ವಂಸವಾಗಿಲ್ಲ: ಕಾಶಿನಾಥಯ್ಯ ಸ್ಪಷ್ಟನೆ.ಶಿವಣ್ಣನ ಕಂಠದಲ್ಲಿ ಮೂಡಿ ಬಂತು ಅಯ್ಯಪ್ಪನ ಭಕ್ತಿಗೀತೆ: ವಿಡಿಯೊ ನೋಡಿ.ಚಿಕ್ಕ ವಯಸ್ಸಿನಲ್ಲೆ ಬಿಳಿ ಕೂದಲಿನ ಸಮಸ್ಯೆಯೇ? ಚಿಂತೆಬಿಡಿ, ಈ ಕ್ರಮಗಳನ್ನು ಪಾಲಿಸಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>