ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಭಾರತವು ಪ್ರತಿವರ್ಷವೂ ವಿಶ್ವದ ಗಣ್ಯರನ್ನು ಆಹ್ವಾನಿಸುತ್ತದೆ. ಕೊರೊನಾ ಕಾರಣಕ್ಕೆ 2021 ಮತ್ತು 2022ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡಿರಲಿಲ್ಲ. 2020ರಲ್ಲಿ ಬ್ರೆಜಿಲ್ನ ಆಗಿನ ಅಧ್ಯಕ್ಷ ಜೇರ್ ಬೊಲ್ಸೊನಾರೊ ಅವರನ್ನು ಆಹ್ವಾನಿಸಲಾಗಿತ್ತು. 2019ರಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೊಸಾ, 2018ರಲ್ಲಿ ಆಸಿಯಾನ್ ರಾಷ್ಟ್ರಗಳ ಎಲ್ಲ ನಾಯಕರು ಭಾಗವಹಿಸಿದ್ದರು.