ಸಲೇಂಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪಕ್ಷದ ಅಭ್ಯರ್ಥಿ ರಾಮ್ ಶಂಕರ್ ವಿದ್ಯಾರ್ಥಿ ಪರ ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ‘ಕೇಂದ್ರದಲ್ಲಿ ‘ಇಂಡಿಯಾ’ ಒಕ್ಕೂಟ ಸರ್ಕಾರ ರಚಿಸಲಿದೆ ಮತ್ತು ಜೂನ್ 4ರ ನಂತರ ಕೇಂದ್ರ ಸಂಪುಟ ಮತ್ತು ಮಾಧ್ಯಮಗಳು ಬದಲಾಗಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಇಂಡಿಯಾ’ ಸರ್ಕಾರ ರಚನೆಯಾದರೆ ‘ಅಗ್ನಿವೀರ್’ ಯೋಜನೆಯನ್ನು ರದ್ದುಗೊಳಿಸುವುದಾಗಿ ಪುನರುಚ್ಚರಿಸಿದರು.
ಉತ್ತರ ಪ್ರದೇಶದ ಪಶ್ಚಿಮ ಭಾಗದಿಂದ ಎದ್ದಿರುವ ಜಯದ ಅಲೆಯು ಏಳನೇ ಹಂತದ ಮತದಾನದವರೆಗೂ ತಲುಪುತ್ತಿದೆ ಎಂದು ಹೇಳಿದರು.
‘ಮೋದಿ ಸರ್ಕಾರವು ಉದ್ಯಮಿಗಳ ₹25 ಲಕ್ಷ ಕೋಟಿಯ ಸಾಲ ಮನ್ನಾ ಮಾಡಿದೆ. ‘ಇಂಡಿಯಾ’ ಸರ್ಕಾರವು ರೈತರ ಸಾಲವನ್ನು ಮನ್ನಾ ಮಾಡಲಿದೆ ಮತ್ತು ಎಂಎಸ್ಪಿಗೆ ಕಾನೂನಿನ ಖಾತರಿ ನೀಡಲಿದೆ’ ಎಂದು ಅಖಿಲೇಶ್ ಭರವಸೆ ನೀಡಿದರು.