<p><strong>ಕ್ವಾಲಾಲಂಪುರ:</strong> ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಇಲ್ಲಿರುವ ಭಾರತೀಯ ರಾಷ್ಟ್ರೀಯ ಸೇನೆಯ (ಆಜಾದ್ ಹಿಂದ್ ಫೌಜ್) ನಿವೃತ್ತ ಯೋಧ ಜಯರಾಜ್ ರಾಜಾ ರಾವ್ ಅವರನ್ನು ಭೇಟಿ ಮಾಡಿದ್ದಾರೆ.</p><p>ಈ ಸಂದರ್ಭದಲ್ಲಿ ಅವರು, ಐಎನ್ಎಯ ಅಸಾಧಾರಣ ಧೈರ್ಯ, ಪರಂಪರೆ ಮತ್ತು ತ್ಯಾಗಕ್ಕಾಗಿ ಎಲ್ಲಾ ಭಾರತೀಯರ ಪರವಾಗಿ ಕೃತಜ್ಞತೆ ತಿಳಿಸಿದ್ದಾರೆ.</p><p>‘ಭಾರತದ ಭವಿಷ್ಯ ರೂಪಿಸಲು ಸಹಾಯ ಮಾಡಿದ ಐಎನ್ಎಯ ಧೈರ್ಯಶಾಲಿ ಮಹಿಳೆಯರು, ಪುರುಷರು ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ನಾವು ಎಂದೆಂದಿಗೂ ಋಣಿಯಾಗಿರುತ್ತೇವೆ’ ಎಂದು ಪ್ರಧಾನಿ ಮೋದಿಯವರು ಸಭೆಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. </p><p>ಐಎನ್ಎ ಅನುಭವಿ ರಾವ್ ಅವರನ್ನು ಭೇಟಿಯಾಗಿರುವುದು ತುಂಬಾ ವಿಶೇಷ ಎಂದು ಮೋದಿ ತಿಳಿಸಿದ್ದಾರೆ.</p>.ಕೌಲಾಲಂಪುರದಲ್ಲಿ ಮೋದಿ: ಭಾರತ–ಮಲೇಷ್ಯಾ ನಡುವೆ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ.ಡೀಪ್ ಫೇಕ್ ಚಿತ್ರ ರಚಿಸಿದ ಆರೋಪ: ಗ್ರೋಕ್ AI ನಿಷೇಧಿಸಿದ ಮಲೇಷ್ಯಾ, ಇಂಡೊನೇಷ್ಯಾ.<p>‘ಅವರ ಜೀವನವು ಅಪಾರ ಧೈರ್ಯ ಮತ್ತು ತ್ಯಾಗದಿಂದ ಗುರುತಿಸಲ್ಪಟ್ಟಿದೆ. ಅವರ ಅನುಭವಗಳನ್ನು ಕೇಳುವುದು ತುಂಬಾ ಸ್ಪೂರ್ತಿದಾಯಕವಾಗಿತ್ತು’ ಎಂದು ಅವರು ಹೇಳಿದರು.</p>.<p>‘ಐಎನ್ಎಯ ಅಸಾಧಾರಣ ಧೈರ್ಯ, ಪರಂಪರೆ ಮತ್ತು ತ್ಯಾಗಕ್ಕಾಗಿ ಪ್ರಧಾನಿ ಮೋದಿ ಎಲ್ಲಾ ಭಾರತೀಯರ ಪರವಾಗಿ ಕೃತಜ್ಞತೆಗಳನ್ನು ತಿಳಿಸಿದ್ದಾರೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.</p><p>1943ರ ಸೆಪ್ಟೆಂಬರ್ನಲ್ಲಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ತಮ್ಮ ಸಾವಿರಾರು ಅನುಯಾಯಿಗಳನ್ನು ಉದ್ದೇಶಿಸಿ ಮಾಡಿದ ಉತ್ಸಾಹಭರಿತ ಭಾಷಣದಲ್ಲಿ ಕೌಲಾಲಂಪುರದ ಸೆಲಂಗೋರ್ ಪದಂಗ್ (ದತಾರನ್ ಮೆರ್ಡೆಕಾ ಅಥವಾ ಸ್ವಾತಂತ್ರ್ಯ ಚೌಕ) ದಿಂದ ಹಲವಾರು ಯುವಕರನ್ನು ಭಾರತೀಯ ಸ್ವಾತಂತ್ರ್ಯದ ಹೋರಾಟಕ್ಕೆ ಸೇರಲು ಪ್ರೇರೇಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕ್ವಾಲಾಲಂಪುರ:</strong> ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಇಲ್ಲಿರುವ ಭಾರತೀಯ ರಾಷ್ಟ್ರೀಯ ಸೇನೆಯ (ಆಜಾದ್ ಹಿಂದ್ ಫೌಜ್) ನಿವೃತ್ತ ಯೋಧ ಜಯರಾಜ್ ರಾಜಾ ರಾವ್ ಅವರನ್ನು ಭೇಟಿ ಮಾಡಿದ್ದಾರೆ.</p><p>ಈ ಸಂದರ್ಭದಲ್ಲಿ ಅವರು, ಐಎನ್ಎಯ ಅಸಾಧಾರಣ ಧೈರ್ಯ, ಪರಂಪರೆ ಮತ್ತು ತ್ಯಾಗಕ್ಕಾಗಿ ಎಲ್ಲಾ ಭಾರತೀಯರ ಪರವಾಗಿ ಕೃತಜ್ಞತೆ ತಿಳಿಸಿದ್ದಾರೆ.</p><p>‘ಭಾರತದ ಭವಿಷ್ಯ ರೂಪಿಸಲು ಸಹಾಯ ಮಾಡಿದ ಐಎನ್ಎಯ ಧೈರ್ಯಶಾಲಿ ಮಹಿಳೆಯರು, ಪುರುಷರು ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ನಾವು ಎಂದೆಂದಿಗೂ ಋಣಿಯಾಗಿರುತ್ತೇವೆ’ ಎಂದು ಪ್ರಧಾನಿ ಮೋದಿಯವರು ಸಭೆಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. </p><p>ಐಎನ್ಎ ಅನುಭವಿ ರಾವ್ ಅವರನ್ನು ಭೇಟಿಯಾಗಿರುವುದು ತುಂಬಾ ವಿಶೇಷ ಎಂದು ಮೋದಿ ತಿಳಿಸಿದ್ದಾರೆ.</p>.ಕೌಲಾಲಂಪುರದಲ್ಲಿ ಮೋದಿ: ಭಾರತ–ಮಲೇಷ್ಯಾ ನಡುವೆ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ.ಡೀಪ್ ಫೇಕ್ ಚಿತ್ರ ರಚಿಸಿದ ಆರೋಪ: ಗ್ರೋಕ್ AI ನಿಷೇಧಿಸಿದ ಮಲೇಷ್ಯಾ, ಇಂಡೊನೇಷ್ಯಾ.<p>‘ಅವರ ಜೀವನವು ಅಪಾರ ಧೈರ್ಯ ಮತ್ತು ತ್ಯಾಗದಿಂದ ಗುರುತಿಸಲ್ಪಟ್ಟಿದೆ. ಅವರ ಅನುಭವಗಳನ್ನು ಕೇಳುವುದು ತುಂಬಾ ಸ್ಪೂರ್ತಿದಾಯಕವಾಗಿತ್ತು’ ಎಂದು ಅವರು ಹೇಳಿದರು.</p>.<p>‘ಐಎನ್ಎಯ ಅಸಾಧಾರಣ ಧೈರ್ಯ, ಪರಂಪರೆ ಮತ್ತು ತ್ಯಾಗಕ್ಕಾಗಿ ಪ್ರಧಾನಿ ಮೋದಿ ಎಲ್ಲಾ ಭಾರತೀಯರ ಪರವಾಗಿ ಕೃತಜ್ಞತೆಗಳನ್ನು ತಿಳಿಸಿದ್ದಾರೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.</p><p>1943ರ ಸೆಪ್ಟೆಂಬರ್ನಲ್ಲಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ತಮ್ಮ ಸಾವಿರಾರು ಅನುಯಾಯಿಗಳನ್ನು ಉದ್ದೇಶಿಸಿ ಮಾಡಿದ ಉತ್ಸಾಹಭರಿತ ಭಾಷಣದಲ್ಲಿ ಕೌಲಾಲಂಪುರದ ಸೆಲಂಗೋರ್ ಪದಂಗ್ (ದತಾರನ್ ಮೆರ್ಡೆಕಾ ಅಥವಾ ಸ್ವಾತಂತ್ರ್ಯ ಚೌಕ) ದಿಂದ ಹಲವಾರು ಯುವಕರನ್ನು ಭಾರತೀಯ ಸ್ವಾತಂತ್ರ್ಯದ ಹೋರಾಟಕ್ಕೆ ಸೇರಲು ಪ್ರೇರೇಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>