ನವದೆಹಲಿ: ಪ್ರತಿವರ್ಷದಂತೆ ಈ ಬಾರಿಯೂ ರಕ್ಷಾ ಬಂಧನಕ್ಕೆ ಪ್ರಧಾನಿ ಮೋದಿಯವರಿಗೆ ಪಾಕಿಸ್ತಾನ ಸಹೋದರಿ ಖಮರ್ ಮೊಹ್ಸಿನ್ ಶೇಖ್ ದೆಹಲಿಗೆ ಆಗಮಿಸಿ ರಾಖಿ ಕಟ್ಟಲಿದ್ದಾರೆ.
‘ಕೋವಿಡ್ ಕಾರಣದಿಂದ ಕಳೆದ 2–3 ವರ್ಷಗಳಿಂದ ಮೋದಿ ಅವರನ್ನು ಭೇಟಿಯಾಗಿ ರಾಖಿ ಕಟ್ಟಲು ಸಾಧ್ಯವಾಗಲಿಲ್ಲ. ಈ ವರ್ಷ ನಾನು ನನ್ನ ಕೈಯಾರೆ ತಯಾರಿಸಿದ ರಾಖಿ ಹಾಗೂ ಕೃಷಿ ಸಂಬಂಧಿ ಪುಸ್ತಕದೊಂದಿಗೆ ದೆಹಲಿಗೆ ತೆರಳಲಿದ್ದೇನೆ’ ಎಂದು ಖಮರ್ ಸುದ್ದಿಗಾರರೊಂದಿಗೆ ಮಾತನಾಡುವಾಗ ಹೇಳಿದ್ದಾರೆ.
‘ನಾನು ಅವರಿಗೆ ವಿಶೇಷವಾಗಿ ಕೆಂಪು ಬಣ್ಣದ ರಾಖಿ ಮಾಡಿದ್ದೇನೆ. ಕೆಂಪು ಬಣ್ಣವನ್ನು ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಮೊದಲು, ನಾನು ಅವರನ್ನು ಗುಜರಾತ್ನ ಮುಖ್ಯಮಂತ್ರಿಯಾಗಬೇಕೆಂದು ಪ್ರಾರ್ಥಿಸಿದ್ದೆ, ಅದು ನೆರವೇರಿದೆ. ಬಳಿಕ ನಾನು ರಾಖಿ ಕಟ್ಟಿದಾಗಲೆಲ್ಲ ಅವರು ಪ್ರಧಾನಿಯಾಗಬೇಕು ಎಂಬ ನನ್ನ ಆಸೆಯನ್ನು ವ್ಯಕ್ತಪಡಿಸುತ್ತಿದ್ದೆ. ಅವರ ಪ್ರತಿಕ್ರಿಯೆ ಯಾವಾಗಲೂ ಸಕಾರಾತ್ಮಕವಾಗಿತ್ತು, ನಿಮ್ಮ ಎಲ್ಲಾ ಆಸೆಗಳನ್ನು ದೇವರು ಪೂರೈಸುತ್ತಾನೆ ಎನ್ನುತ್ತಿದ್ದರು ಈಗ ಪ್ರಧಾನಿಯಾಗಿ ಭಾರತದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ’ ಎಂದು ಖಮರ್ ಹರ್ಷ ವ್ಯಕ್ತಪಡಿಸಿದ್ದಾರೆ.