<p><strong>ರಾಯ್ಪುರ</strong>: ಪ್ರಧಾನಿ ನರೇಂದ್ರ ಮೋದಿ ಅವರು 132ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಛತ್ತೀಸಗಢದ ಕೊರಿಯಾ ಜಿಲ್ಲೆಯ ರೈತರು ಅಳವಡಿಸಿಕೊಂಡಿರುವ ನೀರಿನ ಸಂರಕ್ಷಣಾ ವಿಧಾನ ಕುರಿತು ಶ್ಲಾಘಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ವಿಷ್ಣು ದೇವ್ ಸಹ ಸಂತಸ ವ್ಯಕ್ತಪಡಿಸಿದ್ದಾರೆ.</p><p> ಈ ಕುರಿತು ಪ್ರತಿಕ್ರಿಯಿಸಿರುವ ವಿಷ್ಣು ದೇವ್ ಸಾಯಿ, ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನೀರಿನ ಸಂರಕ್ಷಣೆ ಎಂಬುದು ಸಾಮೂಹಿಕ ಆಂದೋಲನವಾಗಿ ಬದಲಾಗಿದೆ. ರಾಜ್ಯದಲ್ಲಿ ನೀರಿನ ಸಂರಕ್ಷಣೆ ವಿಧಾನಗಳನ್ನು ಉತ್ತೇಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.</p>.ವರದಕ್ಷಿಣೆ ಕಿರುಕುಳ: ಅತ್ತೆ–ಮಾವ, ನಾದಿನಿ ನಿರಾಳ.ಅಮಿತ್ ಶಾ ಎಸಗಿರುವ ಕೃತ್ಯಗಳಿಗೆ ಆರೋಪಪಟ್ಟಿ ದಾಖಲಿಸಬೇಕು: ಮಮತಾ ಬ್ಯಾನರ್ಜಿ . <p>ಕೊರಿಯಾ ಜಿಲ್ಲೆಯಲ್ಲಿ ನೀರಿನ ಸಂರಕ್ಷಣೆಗಾಗಿ ‘ಆವಾ ಪಾನಿ ಝೋಂಕಿ‘ ಮಾದರಿ ವಿಧಾನವನ್ನು 1,200ಕ್ಕೂ ರೈತರು ಅಳವಡಿಸಿಕೊಂಡಿದ್ದಾರೆ. ಇದರಿಂದಾಗಿ ಆ ಭಾಗದ ಅಂತರ್ಜಲ ಮಟ್ಟ ಗಣನೀಯವಾಗಿ ಸುಧಾರಿಸಿದೆ. ಈ ತಳಮಟ್ಟದ ನಾವೀನ್ಯತೆಯು ಇಂದು ದೇಶಕ್ಕೆ ಮಾದರಿಯಾಗಿದೆ ಎಂದು ವಿಷ್ಣು ದೇವ್ ತಿಳಿಸಿದ್ದಾರೆ.</p><p>ಪಶ್ಚಿಮ ಏಷ್ಯಾದ ಸಂಘರ್ಷದ ಕುರಿತು ಪ್ರತಿಕ್ರಿಯಿಸಿರುವ ವಿಷ್ಣು ದೇವ್, ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಅಥವಾ ಎಲ್ಪಿಜಿ ಸಿಲಿಂಡರ್ಗಳ ಕೊರತೆಯಿಲ್ಲ. ಪೂರೈಕೆಯು ಸುಗಮವಾಗಿದೆ. ಜನರು ವದಂತಿಗಳನ್ನು ನಂಬಬಾರದು ಅಥವಾ ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದ್ದಾರೆ.</p><p>ಮೀನುಗಾರಿಕೆಯಲ್ಲಿ ಸ್ವಾವಲಂಬನೆ, ಫಿಟ್ನೆಸ್ಗೆ ಉತ್ತೇಜನ, ಜನರು ಸಕ್ಕರೆ ಸೇವನೆ ಕಡಿಮೆ ಮಾಡುವುದು, ಕ್ರೀಡೆಗೆ ಆದ್ಯತೆ ಸೇರಿದಂತೆ ಇನ್ನೂ ಅನೇಕ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಮನ್ ಕಿ ಬಾತ್ನಲ್ಲಿ ಗಮನ ಸೆಳೆದರು.</p>.ವಿಜಯಪತ್ ಸಿಂಘಾನಿಯಾ: ಸಾಹಸಪ್ರಿಯ, ಜವಳಿ ಉದ್ಯಮದ ದಿಗ್ಗಜ...10 ವರ್ಷದಲ್ಲಿ 10 ಸಾವಿರಕ್ಕೂ ಅಧಿಕ ಮಾವೋವಾದಿಗಳು ಶರಣು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯ್ಪುರ</strong>: ಪ್ರಧಾನಿ ನರೇಂದ್ರ ಮೋದಿ ಅವರು 132ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಛತ್ತೀಸಗಢದ ಕೊರಿಯಾ ಜಿಲ್ಲೆಯ ರೈತರು ಅಳವಡಿಸಿಕೊಂಡಿರುವ ನೀರಿನ ಸಂರಕ್ಷಣಾ ವಿಧಾನ ಕುರಿತು ಶ್ಲಾಘಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ವಿಷ್ಣು ದೇವ್ ಸಹ ಸಂತಸ ವ್ಯಕ್ತಪಡಿಸಿದ್ದಾರೆ.</p><p> ಈ ಕುರಿತು ಪ್ರತಿಕ್ರಿಯಿಸಿರುವ ವಿಷ್ಣು ದೇವ್ ಸಾಯಿ, ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನೀರಿನ ಸಂರಕ್ಷಣೆ ಎಂಬುದು ಸಾಮೂಹಿಕ ಆಂದೋಲನವಾಗಿ ಬದಲಾಗಿದೆ. ರಾಜ್ಯದಲ್ಲಿ ನೀರಿನ ಸಂರಕ್ಷಣೆ ವಿಧಾನಗಳನ್ನು ಉತ್ತೇಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.</p>.ವರದಕ್ಷಿಣೆ ಕಿರುಕುಳ: ಅತ್ತೆ–ಮಾವ, ನಾದಿನಿ ನಿರಾಳ.ಅಮಿತ್ ಶಾ ಎಸಗಿರುವ ಕೃತ್ಯಗಳಿಗೆ ಆರೋಪಪಟ್ಟಿ ದಾಖಲಿಸಬೇಕು: ಮಮತಾ ಬ್ಯಾನರ್ಜಿ . <p>ಕೊರಿಯಾ ಜಿಲ್ಲೆಯಲ್ಲಿ ನೀರಿನ ಸಂರಕ್ಷಣೆಗಾಗಿ ‘ಆವಾ ಪಾನಿ ಝೋಂಕಿ‘ ಮಾದರಿ ವಿಧಾನವನ್ನು 1,200ಕ್ಕೂ ರೈತರು ಅಳವಡಿಸಿಕೊಂಡಿದ್ದಾರೆ. ಇದರಿಂದಾಗಿ ಆ ಭಾಗದ ಅಂತರ್ಜಲ ಮಟ್ಟ ಗಣನೀಯವಾಗಿ ಸುಧಾರಿಸಿದೆ. ಈ ತಳಮಟ್ಟದ ನಾವೀನ್ಯತೆಯು ಇಂದು ದೇಶಕ್ಕೆ ಮಾದರಿಯಾಗಿದೆ ಎಂದು ವಿಷ್ಣು ದೇವ್ ತಿಳಿಸಿದ್ದಾರೆ.</p><p>ಪಶ್ಚಿಮ ಏಷ್ಯಾದ ಸಂಘರ್ಷದ ಕುರಿತು ಪ್ರತಿಕ್ರಿಯಿಸಿರುವ ವಿಷ್ಣು ದೇವ್, ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಅಥವಾ ಎಲ್ಪಿಜಿ ಸಿಲಿಂಡರ್ಗಳ ಕೊರತೆಯಿಲ್ಲ. ಪೂರೈಕೆಯು ಸುಗಮವಾಗಿದೆ. ಜನರು ವದಂತಿಗಳನ್ನು ನಂಬಬಾರದು ಅಥವಾ ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದ್ದಾರೆ.</p><p>ಮೀನುಗಾರಿಕೆಯಲ್ಲಿ ಸ್ವಾವಲಂಬನೆ, ಫಿಟ್ನೆಸ್ಗೆ ಉತ್ತೇಜನ, ಜನರು ಸಕ್ಕರೆ ಸೇವನೆ ಕಡಿಮೆ ಮಾಡುವುದು, ಕ್ರೀಡೆಗೆ ಆದ್ಯತೆ ಸೇರಿದಂತೆ ಇನ್ನೂ ಅನೇಕ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಮನ್ ಕಿ ಬಾತ್ನಲ್ಲಿ ಗಮನ ಸೆಳೆದರು.</p>.ವಿಜಯಪತ್ ಸಿಂಘಾನಿಯಾ: ಸಾಹಸಪ್ರಿಯ, ಜವಳಿ ಉದ್ಯಮದ ದಿಗ್ಗಜ...10 ವರ್ಷದಲ್ಲಿ 10 ಸಾವಿರಕ್ಕೂ ಅಧಿಕ ಮಾವೋವಾದಿಗಳು ಶರಣು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>