<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ನಾಯಕತ್ವದ ಮೂಲಕ ಕೋಟ್ಯಂತರ ಜನರ ಬದುಕು ಬದಲಿಸಿದ್ದಾರೆ. ರಾಷ್ಟ್ರ ಮೊದಲು ಎನ್ನುವ ಧೋರಣೆಯೊಂದಿಗೆ ಭಾರತವನ್ನು ಅಭಿವೃದ್ದಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಅಭಿಪ್ರಾಯಪಟ್ಟಿದ್ದಾರೆ.</p><p>ನರೇಂದ್ರ ಮೋದಿ ಅವರು ಗುಜರಾತ್ನ ಮುಖ್ಯಮಂತ್ರಿಯಾಗಿ ಮೊದಲ ಬಾರಿ ಪ್ರಮಾಣವಚನ ಸ್ವೀಕರಿಸಿ ಇಂದಿಗೆ(ಅ.7) 24 ವರ್ಷಗಳಾಗಿದೆ. 2014 ರಿಂದ ಪ್ರಧಾನ ಮಂತ್ರಿಯಾಗಿಯೂ ಮೋದಿ ಅವರು ಜನಸೇವೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.</p><p>ದೇಶಸೇವೆ ಹಾಗೂ ಜನಸೇವೆಗಾಗಿ ಪ್ರಧಾನಿ ಮೋದಿ ಅವರು 24 ವರ್ಷಗಳನ್ನು ಮುಡಿಪಾಗಿಟ್ಟಿದ್ದಾರೆ. ಜನರ ಸಮಸ್ಯೆಗಳನ್ನು ತಮ್ಮದೆಂದು ಭಾವಿಸಿ, ಅವರ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ ಎಂದು ‘ಎಕ್ಸ್’ನಲ್ಲಿ ಅಮಿತ್ ಶಾ ಅವರು ಪೋಸ್ಟ್ ಮಾಡಿದ್ದಾರೆ. </p>.<p>ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕರಿಸಿದ ನಂತರ ರೈತರು, ಮಹಿಳೆಯರು, ಶಿಕ್ಷಣ ಹಾಗೂ ಕೈಗಾರಿಕೆ ಸೇರಿದಂತೆ ಎಲ್ಲಾ ಕ್ಷೇತ್ರಗಳು ಕೂಡ ಅಭಿವೃದ್ದಿಯತ್ತ ಸಾಗುತ್ತಿವೆ. ದೇಶದ ಭದ್ರತೆಗೆ ಹೆಚ್ಚಿನ ಗಮನ ನೀಡಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ನಾಯಕತ್ವದ ಮೂಲಕ ಕೋಟ್ಯಂತರ ಜನರ ಬದುಕು ಬದಲಿಸಿದ್ದಾರೆ. ರಾಷ್ಟ್ರ ಮೊದಲು ಎನ್ನುವ ಧೋರಣೆಯೊಂದಿಗೆ ಭಾರತವನ್ನು ಅಭಿವೃದ್ದಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಅಭಿಪ್ರಾಯಪಟ್ಟಿದ್ದಾರೆ.</p><p>ನರೇಂದ್ರ ಮೋದಿ ಅವರು ಗುಜರಾತ್ನ ಮುಖ್ಯಮಂತ್ರಿಯಾಗಿ ಮೊದಲ ಬಾರಿ ಪ್ರಮಾಣವಚನ ಸ್ವೀಕರಿಸಿ ಇಂದಿಗೆ(ಅ.7) 24 ವರ್ಷಗಳಾಗಿದೆ. 2014 ರಿಂದ ಪ್ರಧಾನ ಮಂತ್ರಿಯಾಗಿಯೂ ಮೋದಿ ಅವರು ಜನಸೇವೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.</p><p>ದೇಶಸೇವೆ ಹಾಗೂ ಜನಸೇವೆಗಾಗಿ ಪ್ರಧಾನಿ ಮೋದಿ ಅವರು 24 ವರ್ಷಗಳನ್ನು ಮುಡಿಪಾಗಿಟ್ಟಿದ್ದಾರೆ. ಜನರ ಸಮಸ್ಯೆಗಳನ್ನು ತಮ್ಮದೆಂದು ಭಾವಿಸಿ, ಅವರ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ ಎಂದು ‘ಎಕ್ಸ್’ನಲ್ಲಿ ಅಮಿತ್ ಶಾ ಅವರು ಪೋಸ್ಟ್ ಮಾಡಿದ್ದಾರೆ. </p>.<p>ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕರಿಸಿದ ನಂತರ ರೈತರು, ಮಹಿಳೆಯರು, ಶಿಕ್ಷಣ ಹಾಗೂ ಕೈಗಾರಿಕೆ ಸೇರಿದಂತೆ ಎಲ್ಲಾ ಕ್ಷೇತ್ರಗಳು ಕೂಡ ಅಭಿವೃದ್ದಿಯತ್ತ ಸಾಗುತ್ತಿವೆ. ದೇಶದ ಭದ್ರತೆಗೆ ಹೆಚ್ಚಿನ ಗಮನ ನೀಡಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>