<p><strong>ಖೂಂಟಿ/ ನವದೆಹಲಿ</strong>: ಪಿಎಂ– ಕಿಸಾನ್ ಯೋಜನೆಯ 15ನೇ ಕಂತು ₹18,000ಕೋಟಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಬಿಡುಗಡೆ ಮಾಡಿದ್ದಾರೆ. ಇದರಿಂದ ದೇಶದಾದ್ಯಂತ ಎಂಟು ಕೋಟಿ ರೈತರಿಗೆ ಅನುಕೂಲವಾಗಲಿದೆ.</p>.<p>ಜಾರ್ಖಂಡ್ನ ಖೂಂಟಿ ಜಿಲ್ಲೆಯಲ್ಲಿ ಜನಜಾತೀಯ ಗೌರವ್ ದಿವಸ ಆಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಅವರು ಬಟನ್ ಒತ್ತುವ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾಯಿಸಿದರು.</p>.<p>ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ– ಕಿಸಾನ್) ಯೋಜನೆಯಡಿ ಪ್ರತಿ ವರ್ಷ ₹ 6,000 ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ಮೂರು ಕಂತುಗಳಲ್ಲಿ ವರ್ಗಾಯಿಸಲಾಗುವುದು. ಈಗಾಗಲೇ ಯೋಜನೆಯಡಿ ₹ 2.62 ಲಕ್ಷ ಕೋಟಿ ಹಣವನ್ನು ರೈತರಿಗೆ ವರ್ಗಾಯಿಸಲಾಗಿದೆ.</p>.<p>‘ಉದ್ದೇಶಪೂರ್ವಕವೇ?’: ಛತ್ತೀಸಗಢ ಮತ್ತು ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಇನ್ನು ಎರಡು ದಿನಗಳು ಮಾತ್ರ ಬಾಕಿ ಇರುವಾಗ ಈ ಹಣ ಬಿಡುಗಡೆ ಮಾಡಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದೆ. ಉದ್ದೇಶಪೂರ್ವಕವಾಗಿ ಹೀಗೆ ಮಾಡಲಾಗಿದೆಯೇ ಎಂದು ಅಚ್ಚರಿ ವ್ಯಕ್ತಪಡಿಸಿದೆ. ಇದೇ 17ರಂದು ಮಧ್ಯಪ್ರದೇಶದಲ್ಲಿ ಒಂದೇ ಹಂತದ ಮತ್ತು ಛತ್ತೀಸಗಢದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ.</p>.<p>ಯೋಜನೆಯ ಆರನೇ ಕಂತನ್ನು 2020ರ ಆ. 1ರಂದು ಮತ್ತು ಒಂಬತ್ತನೇ ಕಂತನ್ನು 2021ರ ಆ. 9ರಂದು ಬಿಡುಗಡೆ ಮಾಡಲಾಗಿತ್ತು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>ಯೋಜನೆಯ 12ನೇ ಕಂತನ್ನು ಕಳೆದ ವರ್ಷ ಅ. 17ರಂದು ಬಿಡುಗಡೆ ಮಾಡಲಾಗಿತ್ತು. 15ನೇ ಕಂತನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಎರಡು ದಿನಗಳಲ್ಲಿ ಛತ್ತೀಸಗಢ ಮತ್ತು ಮಧ್ಯಪ್ರದೇಶದಲ್ಲಿ, ಇನ್ನು 10 ದಿನಗಳಲ್ಲಿ ರಾಜಸ್ಥಾನದಲ್ಲಿ ಮತ್ತು ಇನ್ನು 15 ದಿನಗಳಲ್ಲಿ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ 15ನೇ ಕಂತು ಬಿಡುಗಡೆ ಮಾಡಲಾಗಿದೆ. ಎಂದು ಅವರು ಪೋಸ್ಟ್ನಲ್ಲಿ ಹೇಳಿದ್ದಾರೆ.</p>.<p>ಇದು ಉದ್ದೇಶಪೂರ್ವಕವೇ ಎಂದೂ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖೂಂಟಿ/ ನವದೆಹಲಿ</strong>: ಪಿಎಂ– ಕಿಸಾನ್ ಯೋಜನೆಯ 15ನೇ ಕಂತು ₹18,000ಕೋಟಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಬಿಡುಗಡೆ ಮಾಡಿದ್ದಾರೆ. ಇದರಿಂದ ದೇಶದಾದ್ಯಂತ ಎಂಟು ಕೋಟಿ ರೈತರಿಗೆ ಅನುಕೂಲವಾಗಲಿದೆ.</p>.<p>ಜಾರ್ಖಂಡ್ನ ಖೂಂಟಿ ಜಿಲ್ಲೆಯಲ್ಲಿ ಜನಜಾತೀಯ ಗೌರವ್ ದಿವಸ ಆಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಅವರು ಬಟನ್ ಒತ್ತುವ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾಯಿಸಿದರು.</p>.<p>ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ– ಕಿಸಾನ್) ಯೋಜನೆಯಡಿ ಪ್ರತಿ ವರ್ಷ ₹ 6,000 ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ಮೂರು ಕಂತುಗಳಲ್ಲಿ ವರ್ಗಾಯಿಸಲಾಗುವುದು. ಈಗಾಗಲೇ ಯೋಜನೆಯಡಿ ₹ 2.62 ಲಕ್ಷ ಕೋಟಿ ಹಣವನ್ನು ರೈತರಿಗೆ ವರ್ಗಾಯಿಸಲಾಗಿದೆ.</p>.<p>‘ಉದ್ದೇಶಪೂರ್ವಕವೇ?’: ಛತ್ತೀಸಗಢ ಮತ್ತು ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಇನ್ನು ಎರಡು ದಿನಗಳು ಮಾತ್ರ ಬಾಕಿ ಇರುವಾಗ ಈ ಹಣ ಬಿಡುಗಡೆ ಮಾಡಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದೆ. ಉದ್ದೇಶಪೂರ್ವಕವಾಗಿ ಹೀಗೆ ಮಾಡಲಾಗಿದೆಯೇ ಎಂದು ಅಚ್ಚರಿ ವ್ಯಕ್ತಪಡಿಸಿದೆ. ಇದೇ 17ರಂದು ಮಧ್ಯಪ್ರದೇಶದಲ್ಲಿ ಒಂದೇ ಹಂತದ ಮತ್ತು ಛತ್ತೀಸಗಢದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ.</p>.<p>ಯೋಜನೆಯ ಆರನೇ ಕಂತನ್ನು 2020ರ ಆ. 1ರಂದು ಮತ್ತು ಒಂಬತ್ತನೇ ಕಂತನ್ನು 2021ರ ಆ. 9ರಂದು ಬಿಡುಗಡೆ ಮಾಡಲಾಗಿತ್ತು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>ಯೋಜನೆಯ 12ನೇ ಕಂತನ್ನು ಕಳೆದ ವರ್ಷ ಅ. 17ರಂದು ಬಿಡುಗಡೆ ಮಾಡಲಾಗಿತ್ತು. 15ನೇ ಕಂತನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಎರಡು ದಿನಗಳಲ್ಲಿ ಛತ್ತೀಸಗಢ ಮತ್ತು ಮಧ್ಯಪ್ರದೇಶದಲ್ಲಿ, ಇನ್ನು 10 ದಿನಗಳಲ್ಲಿ ರಾಜಸ್ಥಾನದಲ್ಲಿ ಮತ್ತು ಇನ್ನು 15 ದಿನಗಳಲ್ಲಿ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ 15ನೇ ಕಂತು ಬಿಡುಗಡೆ ಮಾಡಲಾಗಿದೆ. ಎಂದು ಅವರು ಪೋಸ್ಟ್ನಲ್ಲಿ ಹೇಳಿದ್ದಾರೆ.</p>.<p>ಇದು ಉದ್ದೇಶಪೂರ್ವಕವೇ ಎಂದೂ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>