<p><strong>ನವದೆಹಲಿ:</strong> ಭಾರತ ಪ್ರವಾಸ ಕೈಗೊಂಡಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಶುಕ್ರವಾರ) ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. </p><p>ಈ ಸಂದರ್ಭದಲ್ಲಿ 'ಭಾರತವು ಎಂದಿಗೂ ತಟಸ್ಥ ನಿಲುವು ಹೊಂದಿಲ್ಲ. ಬದಲಾಗಿ ಶಾಂತಿಯ ಪರವಾಗಿದೆ' ಎಂದು ಪುಟಿನ್ಗೆ ಮೋದಿ ಹೇಳಿದ್ದಾರೆ. </p><p>ಉಕ್ರೇನ್ನಲ್ಲಿ ಯುದ್ಧ ಕೊನೆಗಾಣಿಸಿ ಶಾಂತಿ ನೆಲೆಸಲು ಮಾಡುವ ಎಲ್ಲ ಪ್ರಯತ್ನಗಳನ್ನು ಭಾರತ ಬೆಂಬಲಿಸುವುದಾಗಿಯೂ ಪ್ರಧಾನಿ ಮೋದಿ ತಿಳಿಸಿದ್ದಾರೆ. </p>.ರಷ್ಯಾ ಅಧ್ಯಕ್ಷ ಪುಟಿನ್ ಕಳೆದ ಸಲ ಭಾರತಕ್ಕೆ ಬಂದಾಗ ಏನಾಗಿತ್ತು? ಇಲ್ಲಿದೆ ವಿವರ.ಭಾರತಕ್ಕೆ ಬಂದ ಪುಟಿನ್ಗೆ ‘ಭಗವದ್ಗೀತೆ’ ನೀಡಿದ ಮೋದಿ: ಉಭಯ ನಾಯಕರ ಚಿತ್ರಗಳು.<p>'ಉಕ್ರೇನ್ ಸಂಘರ್ಷ ಆರಂಭವಾದ ನಂತರ ನಾವು ಹಲವು ಚರ್ಚೆಗಳನ್ನು ನಡೆಸುತ್ತಿದ್ದೇವೆ. ಆಪ್ತ ಸ್ನೇಹಿತನಾಗಿ ನೀವು ನಮಗೆ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡುತ್ತಲೇ ಬಂದಿದ್ದೀರಿ. ನಂಬಿಕೆಯೇ ಮುಖ್ಯ ಎಂದು ನನಗನಿಸುತ್ತದೆ' ಎಂದು ಮೋದಿ ಹೇಳಿದ್ದಾರೆ. </p><p>'ನಾವೆಲ್ಲರೂ ಶಾಂತಿಯ ಮಾರ್ಗವನ್ನು ಕಂಡುಕೊಳ್ಳಬೇಕು. ಇತ್ತೀಚಿನ ಪ್ರಯತ್ನಗಳ ಬಗ್ಗೆ ನನಗೆ ತಿಳಿದಿದೆ. ಜಗತ್ತಿನಲ್ಲಿ ಶಾಂತಿ ನೆಲೆಸುವ ಬಗ್ಗೆ ನನಗೆ ವಿಶ್ವಾಸವಿದೆ' ಎಂದು ಹೇಳಿದ್ದಾರೆ. </p><p>'ಭಾರತ ತಟಸ್ಥ ನೀತಿ ಹೊಂದಿಲ್ಲ ಎಂದು ನಾನು ಹೇಳುತ್ತೇನೆ. ಭಾರತವು ಶಾಂತಿಯ ಪರವಾಗಿದೆ. ಶಾಂತಿ ನೆಲೆಸಲು ಬೇಕಾದ ಎಲ್ಲ ಪ್ರಯತ್ನಗಳಿಗೆ ನಾವು ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ' ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಪ್ರವಾಸ ಕೈಗೊಂಡಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಶುಕ್ರವಾರ) ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. </p><p>ಈ ಸಂದರ್ಭದಲ್ಲಿ 'ಭಾರತವು ಎಂದಿಗೂ ತಟಸ್ಥ ನಿಲುವು ಹೊಂದಿಲ್ಲ. ಬದಲಾಗಿ ಶಾಂತಿಯ ಪರವಾಗಿದೆ' ಎಂದು ಪುಟಿನ್ಗೆ ಮೋದಿ ಹೇಳಿದ್ದಾರೆ. </p><p>ಉಕ್ರೇನ್ನಲ್ಲಿ ಯುದ್ಧ ಕೊನೆಗಾಣಿಸಿ ಶಾಂತಿ ನೆಲೆಸಲು ಮಾಡುವ ಎಲ್ಲ ಪ್ರಯತ್ನಗಳನ್ನು ಭಾರತ ಬೆಂಬಲಿಸುವುದಾಗಿಯೂ ಪ್ರಧಾನಿ ಮೋದಿ ತಿಳಿಸಿದ್ದಾರೆ. </p>.ರಷ್ಯಾ ಅಧ್ಯಕ್ಷ ಪುಟಿನ್ ಕಳೆದ ಸಲ ಭಾರತಕ್ಕೆ ಬಂದಾಗ ಏನಾಗಿತ್ತು? ಇಲ್ಲಿದೆ ವಿವರ.ಭಾರತಕ್ಕೆ ಬಂದ ಪುಟಿನ್ಗೆ ‘ಭಗವದ್ಗೀತೆ’ ನೀಡಿದ ಮೋದಿ: ಉಭಯ ನಾಯಕರ ಚಿತ್ರಗಳು.<p>'ಉಕ್ರೇನ್ ಸಂಘರ್ಷ ಆರಂಭವಾದ ನಂತರ ನಾವು ಹಲವು ಚರ್ಚೆಗಳನ್ನು ನಡೆಸುತ್ತಿದ್ದೇವೆ. ಆಪ್ತ ಸ್ನೇಹಿತನಾಗಿ ನೀವು ನಮಗೆ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡುತ್ತಲೇ ಬಂದಿದ್ದೀರಿ. ನಂಬಿಕೆಯೇ ಮುಖ್ಯ ಎಂದು ನನಗನಿಸುತ್ತದೆ' ಎಂದು ಮೋದಿ ಹೇಳಿದ್ದಾರೆ. </p><p>'ನಾವೆಲ್ಲರೂ ಶಾಂತಿಯ ಮಾರ್ಗವನ್ನು ಕಂಡುಕೊಳ್ಳಬೇಕು. ಇತ್ತೀಚಿನ ಪ್ರಯತ್ನಗಳ ಬಗ್ಗೆ ನನಗೆ ತಿಳಿದಿದೆ. ಜಗತ್ತಿನಲ್ಲಿ ಶಾಂತಿ ನೆಲೆಸುವ ಬಗ್ಗೆ ನನಗೆ ವಿಶ್ವಾಸವಿದೆ' ಎಂದು ಹೇಳಿದ್ದಾರೆ. </p><p>'ಭಾರತ ತಟಸ್ಥ ನೀತಿ ಹೊಂದಿಲ್ಲ ಎಂದು ನಾನು ಹೇಳುತ್ತೇನೆ. ಭಾರತವು ಶಾಂತಿಯ ಪರವಾಗಿದೆ. ಶಾಂತಿ ನೆಲೆಸಲು ಬೇಕಾದ ಎಲ್ಲ ಪ್ರಯತ್ನಗಳಿಗೆ ನಾವು ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ' ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>