<p><strong>ನವದೆಹಲಿ:</strong> ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನದಿಂದ ಬೃಹತ್ ಪ್ರಮಾಣದ ಉದ್ಯೋಗ ನಷ್ಟದ ಆತಂಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಳ್ಳಿಹಾಕಿದ್ದಾರೆ. </p>.<p>‘ಈಗಾಗಲೇ ಅಸ್ತಿತ್ವದಲ್ಲಿರುವ ಉದ್ಯೋಗಗಳು ಎ.ಐ ತಂತ್ರಜ್ಞಾನದಿಂದ ಹೊಸ ರೂಪ ಪಡೆದುಕೊಳ್ಳಬಹುದು. ಅದೇ ರೀತಿ, ಹೊಸ ಉದ್ಯೋಗಗಳ ಸೃಷ್ಟಿಗೂ ಕಾರಣವಾಗುತ್ತದೆ ಹಾಗೂ ದೇಶದ ಆರ್ಥಿಕತೆಯನ್ನು ಉತ್ತೇಜಿಸುತ್ತದೆ’ ಎಂದು ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.</p>.<p>‘ವಿಶ್ವದ ಅಗ್ರ ಮೂರು ಎ.ಐ ಸೂಪರ್ಪವರ್ಗಳಲ್ಲಿ ಭಾರತಕ್ಕೆ ಸ್ಥಾನ ಕಲ್ಪಿಸುವುದು ತಮ್ಮ ಗುರಿ’ ಎಂಬ ಮಾತನ್ನು ಪ್ರಧಾನಿ ಪುನರುಚ್ಚರಿಸಿದರು.</p>.<p>‘ಭಾರತದ ಐ.ಟಿ ವಲಯವು ನಮ್ಮ ರಫ್ತಿನ ಬೆನ್ನೆಲುಬು ಆಗಿದ್ದು, ಆರ್ಥಿಕ ಬೆಳವಣಿಗೆಗೆ ಶಕ್ತಿ ತುಂಬಿದೆ. ಎ.ಐ ತಂತ್ರಜ್ಞಾನವು ಈ ವಲಯಕ್ಕೆ ಅತ್ಯುತ್ತಮ ಅವಕಾಶ ಮತ್ತು ಸವಾಲು ಎರಡನ್ನೂ ನೀಡಿದೆ’ ಎಂದು ಹೇಳಿದರು. </p>.<p>‘ವೈದ್ಯ ವೃತ್ತಿಗೆ ತೊಂದರೆ ಇಲ್ಲ’: ‘ಎ.ಐ ತಂತ್ರಜ್ಞಾನವು ವೈದ್ಯರು ಮತ್ತು ವೈದ್ಯಕೀಯ ವೃತ್ತಿಯಲ್ಲಿ ತೊಡಗಿಸಿಕೊಂಡವರ ಮೇಲೆ ಯಾವ ಪರಿಣಾಮ ಬೀರಬಹುದು ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ತಂತ್ರಜ್ಞಾನದಿಂದ ವೈದ್ಯರು ಕೆಲಸ ಕಳೆದುಕೊಳ್ಳಬಹುದು ಎಂಬ ಭಯ ಅನಗತ್ಯ’ ಎಂದು ಆರೋಗ್ಯ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಹೇಳಿದರು.</p>.<p>ಎ.ಐ ಶೃಂಗದಲ್ಲಿ ಮಂಗಳವಾರ ನಡೆದ ಗೋಷ್ಠಿಯಲ್ಲಿ ಮಾತನಾಡಿ, ‘ವೈದ್ಯಕೀಯ ಕ್ಷೇತ್ರಕ್ಕೆ ಎ.ಐ ನಿಂದ ಆಗುವ ಲಾಭಗಳ ಬಗ್ಗೆ ಮನಗಂಡಿರುವ ವೈದ್ಯರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಅದರ ಜತೆಯಲ್ಲೇ, ಈ ತಂತ್ರಜ್ಞಾನವು ವೈದ್ಯ ವೃತ್ತಿಗೆ ಬೆದರಿಕೆಯಾಗಿ ಪರಿಣಮಿಸಬಹುದು ಎಂಬ ಆತಂಕವೂ ಕೆಲವರನ್ನು ಕಾಡುತ್ತಿದೆ. ಆ ರೀತಿ ಭಯಪಡುವುದರಲ್ಲಿ ಯಾವುದೇ ಅರ್ಥವಿಲ್ಲ’ ಎಂದರು.</p>.<p>‘ಎ.ಐ ತಂತ್ರಜ್ಞಾನವು ವೈದ್ಯರಿಗೆ ನೆರವಾಗಲು ಇರುವುದೇ ಹೊರತು, ಅವರನ್ನು ವೃತ್ತಿಯನ್ನು ಕಸಿದುಕೊಳ್ಳಲು ಇರುವುದಲ್ಲ’ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನದಿಂದ ಬೃಹತ್ ಪ್ರಮಾಣದ ಉದ್ಯೋಗ ನಷ್ಟದ ಆತಂಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಳ್ಳಿಹಾಕಿದ್ದಾರೆ. </p>.<p>‘ಈಗಾಗಲೇ ಅಸ್ತಿತ್ವದಲ್ಲಿರುವ ಉದ್ಯೋಗಗಳು ಎ.ಐ ತಂತ್ರಜ್ಞಾನದಿಂದ ಹೊಸ ರೂಪ ಪಡೆದುಕೊಳ್ಳಬಹುದು. ಅದೇ ರೀತಿ, ಹೊಸ ಉದ್ಯೋಗಗಳ ಸೃಷ್ಟಿಗೂ ಕಾರಣವಾಗುತ್ತದೆ ಹಾಗೂ ದೇಶದ ಆರ್ಥಿಕತೆಯನ್ನು ಉತ್ತೇಜಿಸುತ್ತದೆ’ ಎಂದು ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.</p>.<p>‘ವಿಶ್ವದ ಅಗ್ರ ಮೂರು ಎ.ಐ ಸೂಪರ್ಪವರ್ಗಳಲ್ಲಿ ಭಾರತಕ್ಕೆ ಸ್ಥಾನ ಕಲ್ಪಿಸುವುದು ತಮ್ಮ ಗುರಿ’ ಎಂಬ ಮಾತನ್ನು ಪ್ರಧಾನಿ ಪುನರುಚ್ಚರಿಸಿದರು.</p>.<p>‘ಭಾರತದ ಐ.ಟಿ ವಲಯವು ನಮ್ಮ ರಫ್ತಿನ ಬೆನ್ನೆಲುಬು ಆಗಿದ್ದು, ಆರ್ಥಿಕ ಬೆಳವಣಿಗೆಗೆ ಶಕ್ತಿ ತುಂಬಿದೆ. ಎ.ಐ ತಂತ್ರಜ್ಞಾನವು ಈ ವಲಯಕ್ಕೆ ಅತ್ಯುತ್ತಮ ಅವಕಾಶ ಮತ್ತು ಸವಾಲು ಎರಡನ್ನೂ ನೀಡಿದೆ’ ಎಂದು ಹೇಳಿದರು. </p>.<p>‘ವೈದ್ಯ ವೃತ್ತಿಗೆ ತೊಂದರೆ ಇಲ್ಲ’: ‘ಎ.ಐ ತಂತ್ರಜ್ಞಾನವು ವೈದ್ಯರು ಮತ್ತು ವೈದ್ಯಕೀಯ ವೃತ್ತಿಯಲ್ಲಿ ತೊಡಗಿಸಿಕೊಂಡವರ ಮೇಲೆ ಯಾವ ಪರಿಣಾಮ ಬೀರಬಹುದು ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ತಂತ್ರಜ್ಞಾನದಿಂದ ವೈದ್ಯರು ಕೆಲಸ ಕಳೆದುಕೊಳ್ಳಬಹುದು ಎಂಬ ಭಯ ಅನಗತ್ಯ’ ಎಂದು ಆರೋಗ್ಯ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಹೇಳಿದರು.</p>.<p>ಎ.ಐ ಶೃಂಗದಲ್ಲಿ ಮಂಗಳವಾರ ನಡೆದ ಗೋಷ್ಠಿಯಲ್ಲಿ ಮಾತನಾಡಿ, ‘ವೈದ್ಯಕೀಯ ಕ್ಷೇತ್ರಕ್ಕೆ ಎ.ಐ ನಿಂದ ಆಗುವ ಲಾಭಗಳ ಬಗ್ಗೆ ಮನಗಂಡಿರುವ ವೈದ್ಯರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಅದರ ಜತೆಯಲ್ಲೇ, ಈ ತಂತ್ರಜ್ಞಾನವು ವೈದ್ಯ ವೃತ್ತಿಗೆ ಬೆದರಿಕೆಯಾಗಿ ಪರಿಣಮಿಸಬಹುದು ಎಂಬ ಆತಂಕವೂ ಕೆಲವರನ್ನು ಕಾಡುತ್ತಿದೆ. ಆ ರೀತಿ ಭಯಪಡುವುದರಲ್ಲಿ ಯಾವುದೇ ಅರ್ಥವಿಲ್ಲ’ ಎಂದರು.</p>.<p>‘ಎ.ಐ ತಂತ್ರಜ್ಞಾನವು ವೈದ್ಯರಿಗೆ ನೆರವಾಗಲು ಇರುವುದೇ ಹೊರತು, ಅವರನ್ನು ವೃತ್ತಿಯನ್ನು ಕಸಿದುಕೊಳ್ಳಲು ಇರುವುದಲ್ಲ’ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>