<p><strong>ಚೆನ್ನೈ</strong>: ‘ಭ್ರಷ್ಟಾಚಾರದಲ್ಲಿ ಮುಳುಗಿರುವ ಡಿಎಂಕೆ ನೇತೃತ್ವದ ಸರ್ಕಾರಕ್ಕೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿದಾಯ ಹೇಳುವುದಕ್ಕೆ ತಮಿಳುನಾಡು ಜನರು ನಿರ್ಧರಿಸಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.</p>.<p>ಚುನಾವಣಾ ರ್ಯಾಲಿಗೆ ಚಾಲನೆ ನೀಡುವುದಕ್ಕಾಗಿ ಚೆನ್ನೈ ಸಮೀಪದ ಮದುರಾಂತಕಂ ಪಟ್ಟಣಕ್ಕೆ ತೆರಳುವುದಕ್ಕೂ ಮುನ್ನ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್ನಲ್ಲಿ ಈ ಮಾತು ಹೇಳಿದ್ದಾರೆ.</p>.<p>‘ಎನ್ಡಿಎದ ಉತ್ತಮ ಆಡಳಿತ ಹಾಗೂ ಪ್ರಾದೇಶಿಕ ಆಶೋತ್ತರಗಳಿಗೆ ಸಂಬಂಧಿಸಿದ ಅದರ ಬದ್ಧತೆಯನ್ನು ತಮಿಳುನಾಡು ಜನರು ಮೆಚ್ಚಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ಎನ್ಡಿಎ ಮಾಡಿರುವ ದ್ರೋಹಗಳನ್ನು ತಮಿಳುನಾಡು ಜನರು ಮರೆತಿಲ್ಲ. ಚುನಾವಣೆ ವೇಳೆಯಲ್ಲಿ ಮಾತ್ರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಾರೆ’ ಎನ್ನುವ ಮೂಲಕ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿರುಗೇಟು ನೀಡಿದ್ದಾರೆ.</p>.<p>ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಸ್ಟಾಲಿನ್,‘ಸರ್ವ ಶಿಕ್ಷಣ ಅಭಿಯಾನದಡಿ ರಾಜ್ಯಕ್ಕೆ ಬರಬೇಕಾದ ₹3,458 ಕೋಟಿ ಯಾವಾಗ ಬಿಡುಗಡೆ ಮಾಡಲಾಗುತ್ತದೆ? ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರು ಸೃಷ್ಟಿಸಿರುವ ‘ಅರಾಜಕತೆ’ಗೆ ಕೊನೆ ಯಾವಾಗ ಎಂದು ಮೋದಿ ಉತ್ತರಿಸುವರೇ? ಮರುವಿಂಗಡಣೆ ವೇಳೆ ತಮಿಳನಾಡಿನ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗುವುದಿಲ್ಲ ಎಂಬ ಭರವಸೆಯನ್ನು ಮೋದಿ ನೀಡುವರೇ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ‘ಭ್ರಷ್ಟಾಚಾರದಲ್ಲಿ ಮುಳುಗಿರುವ ಡಿಎಂಕೆ ನೇತೃತ್ವದ ಸರ್ಕಾರಕ್ಕೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿದಾಯ ಹೇಳುವುದಕ್ಕೆ ತಮಿಳುನಾಡು ಜನರು ನಿರ್ಧರಿಸಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.</p>.<p>ಚುನಾವಣಾ ರ್ಯಾಲಿಗೆ ಚಾಲನೆ ನೀಡುವುದಕ್ಕಾಗಿ ಚೆನ್ನೈ ಸಮೀಪದ ಮದುರಾಂತಕಂ ಪಟ್ಟಣಕ್ಕೆ ತೆರಳುವುದಕ್ಕೂ ಮುನ್ನ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್ನಲ್ಲಿ ಈ ಮಾತು ಹೇಳಿದ್ದಾರೆ.</p>.<p>‘ಎನ್ಡಿಎದ ಉತ್ತಮ ಆಡಳಿತ ಹಾಗೂ ಪ್ರಾದೇಶಿಕ ಆಶೋತ್ತರಗಳಿಗೆ ಸಂಬಂಧಿಸಿದ ಅದರ ಬದ್ಧತೆಯನ್ನು ತಮಿಳುನಾಡು ಜನರು ಮೆಚ್ಚಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ಎನ್ಡಿಎ ಮಾಡಿರುವ ದ್ರೋಹಗಳನ್ನು ತಮಿಳುನಾಡು ಜನರು ಮರೆತಿಲ್ಲ. ಚುನಾವಣೆ ವೇಳೆಯಲ್ಲಿ ಮಾತ್ರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಾರೆ’ ಎನ್ನುವ ಮೂಲಕ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿರುಗೇಟು ನೀಡಿದ್ದಾರೆ.</p>.<p>ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಸ್ಟಾಲಿನ್,‘ಸರ್ವ ಶಿಕ್ಷಣ ಅಭಿಯಾನದಡಿ ರಾಜ್ಯಕ್ಕೆ ಬರಬೇಕಾದ ₹3,458 ಕೋಟಿ ಯಾವಾಗ ಬಿಡುಗಡೆ ಮಾಡಲಾಗುತ್ತದೆ? ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರು ಸೃಷ್ಟಿಸಿರುವ ‘ಅರಾಜಕತೆ’ಗೆ ಕೊನೆ ಯಾವಾಗ ಎಂದು ಮೋದಿ ಉತ್ತರಿಸುವರೇ? ಮರುವಿಂಗಡಣೆ ವೇಳೆ ತಮಿಳನಾಡಿನ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗುವುದಿಲ್ಲ ಎಂಬ ಭರವಸೆಯನ್ನು ಮೋದಿ ನೀಡುವರೇ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>