ಕೇಂದ್ರ ಸರ್ಕಾರದ ಧೋರಣೆಗಳ ಬಗ್ಗೆ ಕಿಡಿಕಾರಿದ ತರೂರ್, ಇದೀಗ ಸರ್ಕಾರದ ಉನ್ನತ ಅಧಿಕಾರಿಗಳು ತಮ್ಮ ಕಾರ್ಯ ನಿರ್ವಹಿಸಲು ಪ್ರಧಾನಿ ಕಚೇರಿಯಿಂದ ಅನುಮತಿ ಪಡೆಯಲು ಕಾಯಬೇಕಾಗಿದೆ. ಸಿಬಿಐ ನಿರ್ದೇಶಕರನ್ನು ಬದಲಿಸಿದ್ದು ಗೃಹ ಸಚಿವರಿಗೆ ಗೊತ್ತೇ ಇಲ್ಲ. ಸರ್ಕಾರದ ವಿದೇಶಾಂಗ ನೀತಿಯಲ್ಲಿ ಬದಲಾವಣೆ ಬಗ್ಗೆ ವಿದೇಶಾಂಗ ಸಚಿವರಿಗೆ ಗೊತ್ತಿರಲ್ಲ, ಕೊನೆಯ ಕ್ಷಣವರೆಗೂ ರಫೇಲ್ ಒಪ್ಪಂದದಲ್ಲಿ ಯಾವ ಬದಲಾವಣೆ ಆಯಿತು ಎಂಬುದು ರಕ್ಷಣಾ ಸಚಿವರಿಗೂ ಗೊತ್ತಿಲ್ಲ. ಇದೆಲ್ಲವೂ ಮೋದಿ ಆಡಳಿತದ ಪರಿಣಾಮ ಎಂದು ಹೇಳಿದ್ದಾರೆ.