<p><strong>ಪಟ್ನಾ</strong>: ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೂ ಮುನ್ನ 40ರಿಂದ 50 ಮಂದಿ ವಿರೋಧ ಪಕ್ಷದ ಸಂಸದರು ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಗೆ ನುಗ್ಗಿ ಅಸಭ್ಯ ರೀತಿಯಲ್ಲಿ ಮಾತನಾಡಿದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಆರೋಪಿಸಿದ್ದಾರೆ.</p><p>ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಿಜಿಜು, ಬಿರ್ಲಾ ಅವರ ಕೊಠಡಿಯಲ್ಲಿ ಗದ್ದಲ ಸೃಷ್ಟಿಯಾದಾಗ ನಾನು ಅಲ್ಲಿಯೇ ಇದ್ದೆ. ಹೀಗಾಗಿಯೇ ಪ್ರಧಾನಿ ಮೋದಿ ಸದನಕ್ಕೆ ಬಾರದೇ ಇರುವುದು ಉತ್ತಮ ಎಂಬ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಹೇಳಿದ್ದಾರೆ.</p>.Video | ಟಿ20 ವಿಶ್ವಕಪ್ ಹಬ್ಬ: ಧೋನಿ-ರೋಹಿತ್ ಪಟ್ಟಿಗೆ ಸೇರಲಿದ್ದಾರಾ ‘ಸ್ಕೈ’? .Valentine's Day : ಯಾವ ಬಣ್ಣದ ಗುಲಾಬಿ ಏನನ್ನು ಸಂಕೇತಿಸುತ್ತದೆ?ಇಲ್ಲಿದೆ ಮಾಹಿತಿ. <p>ಲೋಕಸಭೆಯಲ್ಲಿ ರಾಷ್ಟ್ರಪತಿಗಳ ವಂದನಾ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಬೇಕಿತ್ತು.</p><p>ವಿರೋಧ ಪಕ್ಷದವರು ತೊಂದರೆ ಸೃಷ್ಟಿಸಲು ಹವಣಿಸುತ್ತಿದ್ದರು. ಇದನ್ನು ಅರಿತು ಪ್ರಧಾನಿ ಮೋದಿ ದೂರವಿದ್ದರೆ ಉತ್ತಮ ಎನಿಸಿತು. ಹೀಗಾಗಿ ಪ್ರಧಾನಿ ಮೋದಿ ಭಾಷಣವನ್ನು ರದ್ದುಗೊಳಿಸಲಾಯಿತು ಎಂದು ರಿಜಿಜು ತಿಳಿಸಿದ್ದಾರೆ.</p><p>'ನಾವು ಅಧಿಕಾರದಲ್ಲಿದ್ದೇವೆ. ಮಾರ್ಷಲ್ಗಳನ್ನು ಬಳಸಿಕೊಂಡು ನಾವು ಕಲಾಪವನ್ನು ನಿಭಾಯಿಸಬಹುದಿತ್ತು. ಆದರೆ ಹಾಗೆ ಮಾಡಲು ಬಯಸಲಿಲ್ಲ. ಸಮಸ್ಯೆಯಿಂದ ಹೊರಬರಲು ನಾವು ಒಂದು ಮಾರ್ಗವನ್ನು ಕಂಡುಕೊಂಡೆವು' ಎಂದು ರಿಜಿಜು ಹೇಳಿದ್ದಾರೆ.</p>.ಕ್ರೀಡೆಯನ್ನು ಹೈಜಾಕ್ ಮಾಡಿದ ರಾಜಕೀಯ: ಒಲಿಂಪಿಕ್ ನಿಷೇಧದಿಂದ ಕ್ರಿಕೆಟ್ವರೆಗೆ....ರುಕ್ಕು ಆದ ಚಾರು: ಹೊಸ ಧಾರಾವಾಹಿಗೆ ನಾಯಕಿಯಾಗಿ ಎಂಟ್ರಿ ಕೊಟ್ಟ ಮೌನ ಗುಡ್ಡೆಮನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೂ ಮುನ್ನ 40ರಿಂದ 50 ಮಂದಿ ವಿರೋಧ ಪಕ್ಷದ ಸಂಸದರು ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಗೆ ನುಗ್ಗಿ ಅಸಭ್ಯ ರೀತಿಯಲ್ಲಿ ಮಾತನಾಡಿದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಆರೋಪಿಸಿದ್ದಾರೆ.</p><p>ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಿಜಿಜು, ಬಿರ್ಲಾ ಅವರ ಕೊಠಡಿಯಲ್ಲಿ ಗದ್ದಲ ಸೃಷ್ಟಿಯಾದಾಗ ನಾನು ಅಲ್ಲಿಯೇ ಇದ್ದೆ. ಹೀಗಾಗಿಯೇ ಪ್ರಧಾನಿ ಮೋದಿ ಸದನಕ್ಕೆ ಬಾರದೇ ಇರುವುದು ಉತ್ತಮ ಎಂಬ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಹೇಳಿದ್ದಾರೆ.</p>.Video | ಟಿ20 ವಿಶ್ವಕಪ್ ಹಬ್ಬ: ಧೋನಿ-ರೋಹಿತ್ ಪಟ್ಟಿಗೆ ಸೇರಲಿದ್ದಾರಾ ‘ಸ್ಕೈ’? .Valentine's Day : ಯಾವ ಬಣ್ಣದ ಗುಲಾಬಿ ಏನನ್ನು ಸಂಕೇತಿಸುತ್ತದೆ?ಇಲ್ಲಿದೆ ಮಾಹಿತಿ. <p>ಲೋಕಸಭೆಯಲ್ಲಿ ರಾಷ್ಟ್ರಪತಿಗಳ ವಂದನಾ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಬೇಕಿತ್ತು.</p><p>ವಿರೋಧ ಪಕ್ಷದವರು ತೊಂದರೆ ಸೃಷ್ಟಿಸಲು ಹವಣಿಸುತ್ತಿದ್ದರು. ಇದನ್ನು ಅರಿತು ಪ್ರಧಾನಿ ಮೋದಿ ದೂರವಿದ್ದರೆ ಉತ್ತಮ ಎನಿಸಿತು. ಹೀಗಾಗಿ ಪ್ರಧಾನಿ ಮೋದಿ ಭಾಷಣವನ್ನು ರದ್ದುಗೊಳಿಸಲಾಯಿತು ಎಂದು ರಿಜಿಜು ತಿಳಿಸಿದ್ದಾರೆ.</p><p>'ನಾವು ಅಧಿಕಾರದಲ್ಲಿದ್ದೇವೆ. ಮಾರ್ಷಲ್ಗಳನ್ನು ಬಳಸಿಕೊಂಡು ನಾವು ಕಲಾಪವನ್ನು ನಿಭಾಯಿಸಬಹುದಿತ್ತು. ಆದರೆ ಹಾಗೆ ಮಾಡಲು ಬಯಸಲಿಲ್ಲ. ಸಮಸ್ಯೆಯಿಂದ ಹೊರಬರಲು ನಾವು ಒಂದು ಮಾರ್ಗವನ್ನು ಕಂಡುಕೊಂಡೆವು' ಎಂದು ರಿಜಿಜು ಹೇಳಿದ್ದಾರೆ.</p>.ಕ್ರೀಡೆಯನ್ನು ಹೈಜಾಕ್ ಮಾಡಿದ ರಾಜಕೀಯ: ಒಲಿಂಪಿಕ್ ನಿಷೇಧದಿಂದ ಕ್ರಿಕೆಟ್ವರೆಗೆ....ರುಕ್ಕು ಆದ ಚಾರು: ಹೊಸ ಧಾರಾವಾಹಿಗೆ ನಾಯಕಿಯಾಗಿ ಎಂಟ್ರಿ ಕೊಟ್ಟ ಮೌನ ಗುಡ್ಡೆಮನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>