<p><strong>ನವದೆಹಲಿ</strong>: 2019ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯದಿಂದ ತೀರ್ಪು ಪ್ರಕಟವಾದ ನಂತರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಲೋಕಸಭೆಯ ಕಲಾಪಕ್ಕೆ ಹಾಜರಾಗಿದ್ದರು.</p>.<p>ಸದನದಲ್ಲಿ ಕಲಾಪ ಆರಂಭಕ್ಕೂ ಮುನ್ನ ರಾಹುಲ್ ಗಾಂಧಿ, ಪಕ್ಷದ ಸಂಸದರ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಕೂಡ ಉಪಸ್ಥಿತರಿದ್ದರು.</p>.<p>ವಿವಿಧ ವಿಷಯಗಳ ಗದ್ದಲದ ನಡುವೆ ಸದನವನ್ನು ಮುಂದೂಡಲಾಯಿತು.ಈ ವೇಳೆ ರಾಹುಲ್ ಗಾಂಧಿ ಸಂಸತ್ತನ್ನು ತೊರೆದರು.</p>.<p>‘ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡರೆ ಹೇಗೆ?’ ಎಂಬ ರಾಹುಲ್ ಗಾಂಧಿ ಹೇಳಿಕೆ ಸಂಬಂಧ ಅವರಿಗೆ ಸೂರತ್ ನ್ಯಾಯಾಲಯವು 2 ವರ್ಷ ಶಿಕ್ಷೆ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಅವರಿಗೆ ಮ್ಯಾಜಿಸ್ಟ್ರೇಟ್ ಎಚ್.ಎಚ್ ವರ್ಮಾ ಜಾಮೀನು ಮಂಜೂರು ಮಾಡಿದ್ದಾರೆ. ಶಿಕ್ಷೆ ಅಮಾನತುಗೊಳಿಸುವ ಪ್ರಕ್ರಿಯೆ ಸಂಬಂಧ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿದೆ. </p>.<p>ಮೇಲ್ಮನವಿ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದರೆ ಗಾಂಧಿ ಅವರು ಸಂಸತ್ತಿನ ಸದಸ್ಯತ್ವದಲ್ಲಿಯೇ ಮುಂದುವರೆಯಬಹುದು.</p>.<p>ಇವನ್ನೂ ಓದಿ; <a href="https://www.prajavani.net/karnataka-news/union-home-minister-amit-shah-visits-bjp-leader-bs-yediyurappa-residence-in-bengaluru-1026001.html" itemprop="url">ವಿಧಾನಸಭೆ ಚುನಾವಣೆ: ಯಡಿಯೂರಪ್ಪ ನಿವಾಸಕ್ಕೆ ಅಮಿತ್ ಶಾ ಭೇಟಿ, ಉಪಾಹಾರ ಸೇವನೆ </a></p>.<p> <a href="https://www.prajavani.net/india-news/active-covid-cases-in-country-rise-to-7927-1026000.html" itemprop="url">ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳು 7,927 ಕ್ಕೆ ಏರಿಕೆ </a></p>.<p> <a href="https://www.prajavani.net/india-news/indias-parliament-disqualifies-opposition-leader-rahul-gandhi-1026015.html" itemprop="url">ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸಿ ಸಚಿವಾಲಯ ಅಧಿಸೂಚನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2019ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯದಿಂದ ತೀರ್ಪು ಪ್ರಕಟವಾದ ನಂತರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಲೋಕಸಭೆಯ ಕಲಾಪಕ್ಕೆ ಹಾಜರಾಗಿದ್ದರು.</p>.<p>ಸದನದಲ್ಲಿ ಕಲಾಪ ಆರಂಭಕ್ಕೂ ಮುನ್ನ ರಾಹುಲ್ ಗಾಂಧಿ, ಪಕ್ಷದ ಸಂಸದರ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಕೂಡ ಉಪಸ್ಥಿತರಿದ್ದರು.</p>.<p>ವಿವಿಧ ವಿಷಯಗಳ ಗದ್ದಲದ ನಡುವೆ ಸದನವನ್ನು ಮುಂದೂಡಲಾಯಿತು.ಈ ವೇಳೆ ರಾಹುಲ್ ಗಾಂಧಿ ಸಂಸತ್ತನ್ನು ತೊರೆದರು.</p>.<p>‘ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡರೆ ಹೇಗೆ?’ ಎಂಬ ರಾಹುಲ್ ಗಾಂಧಿ ಹೇಳಿಕೆ ಸಂಬಂಧ ಅವರಿಗೆ ಸೂರತ್ ನ್ಯಾಯಾಲಯವು 2 ವರ್ಷ ಶಿಕ್ಷೆ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಅವರಿಗೆ ಮ್ಯಾಜಿಸ್ಟ್ರೇಟ್ ಎಚ್.ಎಚ್ ವರ್ಮಾ ಜಾಮೀನು ಮಂಜೂರು ಮಾಡಿದ್ದಾರೆ. ಶಿಕ್ಷೆ ಅಮಾನತುಗೊಳಿಸುವ ಪ್ರಕ್ರಿಯೆ ಸಂಬಂಧ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿದೆ. </p>.<p>ಮೇಲ್ಮನವಿ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದರೆ ಗಾಂಧಿ ಅವರು ಸಂಸತ್ತಿನ ಸದಸ್ಯತ್ವದಲ್ಲಿಯೇ ಮುಂದುವರೆಯಬಹುದು.</p>.<p>ಇವನ್ನೂ ಓದಿ; <a href="https://www.prajavani.net/karnataka-news/union-home-minister-amit-shah-visits-bjp-leader-bs-yediyurappa-residence-in-bengaluru-1026001.html" itemprop="url">ವಿಧಾನಸಭೆ ಚುನಾವಣೆ: ಯಡಿಯೂರಪ್ಪ ನಿವಾಸಕ್ಕೆ ಅಮಿತ್ ಶಾ ಭೇಟಿ, ಉಪಾಹಾರ ಸೇವನೆ </a></p>.<p> <a href="https://www.prajavani.net/india-news/active-covid-cases-in-country-rise-to-7927-1026000.html" itemprop="url">ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳು 7,927 ಕ್ಕೆ ಏರಿಕೆ </a></p>.<p> <a href="https://www.prajavani.net/india-news/indias-parliament-disqualifies-opposition-leader-rahul-gandhi-1026015.html" itemprop="url">ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸಿ ಸಚಿವಾಲಯ ಅಧಿಸೂಚನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>