ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂಭ ಮೇಳದಲ್ಲಿ ಪುಣ್ಯಸ್ನಾನ: ಪೌರ ಕಾರ್ಮಿಕರ ಪಾದ ತೊಳೆದ ಪ್ರಧಾನಿ

Last Updated 24 ಫೆಬ್ರುವರಿ 2019, 13:01 IST
ಅಕ್ಷರ ಗಾತ್ರ

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಪವಿತ್ರ ಸ್ನಾನ ಮಾಡಿ ಸಂಗಮದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಮೋದಿ ಜತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡಾ ಭಾಗಿಯಾಗಿದ್ದು, ಪ್ರಧಾನಿಯವರುತ್ರಿವೇಣಿ ಘಾಟ್‍ನಲ್ಲಿ ಆರತಿ ಮಾಡಿದ್ದಾರೆ.

ಕುಂಭದಲ್ಲಿ ಪವಿತ್ರ ಸ್ನಾನಮಾಡುವುದೇ ಅದೃಷ್ಟ, ದೇಶದ 130 ಕೋಟಿ ಜನರಿಗಾಗಿ ನಾನು ಪ್ರಾರ್ಥಿಸಿದ್ದೇನೆಎಂದು ಮೋದಿ ಟ್ವೀಟಿಸಿದ್ದಾರೆ.

ಕುಡಿ ನೀರು ಮತ್ತು ನೈರ್ಮಲ್ಯ ಸಚಿವಾಲಯ ಆಯೋಜಿಸಿದ್ದ ಸ್ವಚ್ಛ ಕುಂಭ್, ಸ್ವಚ್ಛ ಆಧಾರ್ ಕಾರ್ಯಕ್ರಮದಲ್ಲಿ ಪ್ರಧಾನಿ ಪೌರ ಕಾರ್ಮಿಕರ ಪಾದ ತೊಳೆದು ಗೌರವಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT