<p><strong>ನವದೆಹಲಿ</strong>: ಕರ್ನಾಟಕದ ಜನತೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ್ದಕ್ಕೆ ಪ್ರತೀಕಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅನ್ಯಭಾಗ್ಯ ಯೋಜನೆಗೆ ಕೇಂದ್ರದಿಂದ ಅಕ್ಕಿ ಮಾರಾಟವನ್ನು ಸ್ಥಗಿತಗೊಳಿಸಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.</p>.<p>ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ(ಒಎಂಎಸ್ಎಸ್) ಭಾರತೀಯ ಆಹಾರ ನಿಗಮದ(ಎಫ್ಸಿಐ) ದಾಸ್ತಾನಿನಲ್ಲಿರುವ ಅಕ್ಕಿ, ಗೋಧಿಯನ್ನು ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಜೂನ್ 13ರಿಂದ ಸ್ಥಗಿತಗೊಳಿಸಿದ್ದಾರೆ. ಹಣದುಬ್ಬರ ಮತ್ತು ಮುಂಗಾರು ಮಳೆ ಕೊರತೆ ನಡುವೆಯೂ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ದೂರಿದೆ.</p>.<p>‘ಬುಧವಾರ ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ಆಹಾರ ಭದ್ರತಾ ಸಭೆ ನಡೆಸಿದ್ದಾರೆ. ಬಡವರಿಗೆ ಅಕ್ಕಿ ಪೂರೈಸುವ ಬದಲು ಆದ್ಯತೆಗೆ ಅನುಗುಣವಾಗಿ ಎಥೆನಾಲ್ ಉತ್ಪಾದನೆಗೆ ಪೂರೈಸುವುದಾಗಿ ಸಭೆಯಲ್ಲಿ ಹೇಳಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ನಲ್ಲಿ ಟೀಕಿಸಿದ್ದಾರೆ.</p>.<p>ಆಹಾರದ ಭದ್ರತೆ ದೃಷ್ಟಿಯಿಂದ ಕರ್ನಾಟಕ ಸರ್ಕಾರವು ಪ್ರತಿ ಕೆ.ಜಿ ಅಕ್ಕಿಗೆ ₹34 ನೀಡುವುದಾಗಿ ಹೇಳಿದೆ. ಆದರೆ, ಎಥೆನಾಲ್ ಉತ್ಪಾದಕರಿಗೆ ಕೆ.ಜಿಗೆ ₹20ರಂತೆ ಅಕ್ಕಿ ಪೂರೈಸಲು ಎಫ್ಸಿಐ ಮುಂದಾಗಿದೆ ಎಂದು ದೂರಿದ್ದಾರೆ.</p>.<p>ಕೇಂದ್ರವು ಅಕ್ಕಿ ಮಾರಾಟವನ್ನು ಸ್ಥಗಿತಗೊಳಿಸಿ ಅನ್ಯಭಾಗ್ಯವನ್ನು ದಿಕ್ಕು ತಪ್ಪಿಸಲು ಹೊರಟಿದೆ. ಆದರೆ, ಈ ಸೇಡಿನ ರಾಜಕೀಯವು ಮೋದಿ ಅವರಿಗೆ ತಿರುಗುಬಾಣವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನರಿಗೆ ಆಹಾರ ಭದ್ರತೆ ಒದಗಿಸಲು ಬದ್ಧವಾಗಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕರ್ನಾಟಕದ ಜನತೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ್ದಕ್ಕೆ ಪ್ರತೀಕಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅನ್ಯಭಾಗ್ಯ ಯೋಜನೆಗೆ ಕೇಂದ್ರದಿಂದ ಅಕ್ಕಿ ಮಾರಾಟವನ್ನು ಸ್ಥಗಿತಗೊಳಿಸಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.</p>.<p>ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ(ಒಎಂಎಸ್ಎಸ್) ಭಾರತೀಯ ಆಹಾರ ನಿಗಮದ(ಎಫ್ಸಿಐ) ದಾಸ್ತಾನಿನಲ್ಲಿರುವ ಅಕ್ಕಿ, ಗೋಧಿಯನ್ನು ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಜೂನ್ 13ರಿಂದ ಸ್ಥಗಿತಗೊಳಿಸಿದ್ದಾರೆ. ಹಣದುಬ್ಬರ ಮತ್ತು ಮುಂಗಾರು ಮಳೆ ಕೊರತೆ ನಡುವೆಯೂ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ದೂರಿದೆ.</p>.<p>‘ಬುಧವಾರ ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ಆಹಾರ ಭದ್ರತಾ ಸಭೆ ನಡೆಸಿದ್ದಾರೆ. ಬಡವರಿಗೆ ಅಕ್ಕಿ ಪೂರೈಸುವ ಬದಲು ಆದ್ಯತೆಗೆ ಅನುಗುಣವಾಗಿ ಎಥೆನಾಲ್ ಉತ್ಪಾದನೆಗೆ ಪೂರೈಸುವುದಾಗಿ ಸಭೆಯಲ್ಲಿ ಹೇಳಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ನಲ್ಲಿ ಟೀಕಿಸಿದ್ದಾರೆ.</p>.<p>ಆಹಾರದ ಭದ್ರತೆ ದೃಷ್ಟಿಯಿಂದ ಕರ್ನಾಟಕ ಸರ್ಕಾರವು ಪ್ರತಿ ಕೆ.ಜಿ ಅಕ್ಕಿಗೆ ₹34 ನೀಡುವುದಾಗಿ ಹೇಳಿದೆ. ಆದರೆ, ಎಥೆನಾಲ್ ಉತ್ಪಾದಕರಿಗೆ ಕೆ.ಜಿಗೆ ₹20ರಂತೆ ಅಕ್ಕಿ ಪೂರೈಸಲು ಎಫ್ಸಿಐ ಮುಂದಾಗಿದೆ ಎಂದು ದೂರಿದ್ದಾರೆ.</p>.<p>ಕೇಂದ್ರವು ಅಕ್ಕಿ ಮಾರಾಟವನ್ನು ಸ್ಥಗಿತಗೊಳಿಸಿ ಅನ್ಯಭಾಗ್ಯವನ್ನು ದಿಕ್ಕು ತಪ್ಪಿಸಲು ಹೊರಟಿದೆ. ಆದರೆ, ಈ ಸೇಡಿನ ರಾಜಕೀಯವು ಮೋದಿ ಅವರಿಗೆ ತಿರುಗುಬಾಣವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನರಿಗೆ ಆಹಾರ ಭದ್ರತೆ ಒದಗಿಸಲು ಬದ್ಧವಾಗಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>