<p><strong>ಅಗರ್ತಲಾ:</strong> ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಸೆ. 22) ತ್ರಿಪುರಾ ರಾಜ್ಯ ಪ್ರವಾಸ ಕೈಗೊಂಡಿದ್ದು, ಗೋಮತಿ ಜಿಲ್ಲೆಯಲ್ಲಿ ಜೀರ್ಣೋದ್ಧಾರಗೊಂಡಿರುವ ತ್ರಿಪುರೇಶ್ವರಿ ದೇಗಲವನ್ನು ಉದ್ಘಾಟಿಸಲಿದ್ದಾರೆ.</p><p>ದೇಶದಲ್ಲಿರುವ 51 ಶಕ್ತಿಪೀಠಗಳಲ್ಲಿ ತ್ರಿಪುರೇಶ್ವರಿ ದೇಗುಲವೂ ಒಂದು. ಮಹಾರಾಜ ಧನ್ಯ ಮಾಣಿಕ್ಯ 1501ರಲ್ಲಿ ಈ ದೇಗುಲ ನಿರ್ಮಿಸಿದ್ದರು. ತೀರ್ಥಕ್ಷೇತ್ರ ಪುನರುಜ್ಜೀವನ ಮತ್ತು ಅಧ್ಯಾತ್ಮ ವಿಸ್ತರಣಾ ಅಭಿಯಾನ (PRASAD) ಅಡಿಯಲ್ಲಿ ₹52 ಕೋಟಿ ವೆಚ್ಚದಲ್ಲಿ ಈ ದೇಗುಲ ಜೀರ್ಣೋದ್ಧಾರಗೊಂಡಿದೆ.</p><p>ದೇಗುಲ ಉದ್ಘಾಟನೆಗೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು ಅಗರ್ತಲಾ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ಮೂಲಕ ಬಂದಿಳಿಯಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. ಸೋಮವಾರ ಮಧ್ಯಾಹ್ನ 3ಕ್ಕೆ ದೇವಾಲಯ ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>‘ಉದ್ಘಾಟನಾ ಕಾರ್ಯಕ್ರಮ ಸುಮಾರು 45 ನಿಮಿಷಗಳ ಕಾಲ ನಡೆಯಲಿದೆ. ನಂತರ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿ ಮಾಣಿಕ್ ಸಾಹಾ ಹಾಗೂ ಸಂಪುಟದ ಸಚಿವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಜಿಲ್ಲಾಧಿಕಾರಿ ರಿಂಕು ಲಾಥರ್ ತಿಳಿಸಿದ್ದಾರೆ.</p><p>ನರೇಂದ್ರ ಮೋದಿ ಅವರು 2014ರಲ್ಲಿ ಪ್ರಧಾನಿಯಾದ ನಂತರ ರಾಜ್ಯಕ್ಕೆ ಇದು 11ನೇ ಭೇಟಿಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಗರ್ತಲಾ:</strong> ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಸೆ. 22) ತ್ರಿಪುರಾ ರಾಜ್ಯ ಪ್ರವಾಸ ಕೈಗೊಂಡಿದ್ದು, ಗೋಮತಿ ಜಿಲ್ಲೆಯಲ್ಲಿ ಜೀರ್ಣೋದ್ಧಾರಗೊಂಡಿರುವ ತ್ರಿಪುರೇಶ್ವರಿ ದೇಗಲವನ್ನು ಉದ್ಘಾಟಿಸಲಿದ್ದಾರೆ.</p><p>ದೇಶದಲ್ಲಿರುವ 51 ಶಕ್ತಿಪೀಠಗಳಲ್ಲಿ ತ್ರಿಪುರೇಶ್ವರಿ ದೇಗುಲವೂ ಒಂದು. ಮಹಾರಾಜ ಧನ್ಯ ಮಾಣಿಕ್ಯ 1501ರಲ್ಲಿ ಈ ದೇಗುಲ ನಿರ್ಮಿಸಿದ್ದರು. ತೀರ್ಥಕ್ಷೇತ್ರ ಪುನರುಜ್ಜೀವನ ಮತ್ತು ಅಧ್ಯಾತ್ಮ ವಿಸ್ತರಣಾ ಅಭಿಯಾನ (PRASAD) ಅಡಿಯಲ್ಲಿ ₹52 ಕೋಟಿ ವೆಚ್ಚದಲ್ಲಿ ಈ ದೇಗುಲ ಜೀರ್ಣೋದ್ಧಾರಗೊಂಡಿದೆ.</p><p>ದೇಗುಲ ಉದ್ಘಾಟನೆಗೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು ಅಗರ್ತಲಾ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ಮೂಲಕ ಬಂದಿಳಿಯಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. ಸೋಮವಾರ ಮಧ್ಯಾಹ್ನ 3ಕ್ಕೆ ದೇವಾಲಯ ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>‘ಉದ್ಘಾಟನಾ ಕಾರ್ಯಕ್ರಮ ಸುಮಾರು 45 ನಿಮಿಷಗಳ ಕಾಲ ನಡೆಯಲಿದೆ. ನಂತರ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿ ಮಾಣಿಕ್ ಸಾಹಾ ಹಾಗೂ ಸಂಪುಟದ ಸಚಿವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಜಿಲ್ಲಾಧಿಕಾರಿ ರಿಂಕು ಲಾಥರ್ ತಿಳಿಸಿದ್ದಾರೆ.</p><p>ನರೇಂದ್ರ ಮೋದಿ ಅವರು 2014ರಲ್ಲಿ ಪ್ರಧಾನಿಯಾದ ನಂತರ ರಾಜ್ಯಕ್ಕೆ ಇದು 11ನೇ ಭೇಟಿಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>