<p><strong>ಹಲ್ದಿಯಾ</strong>: ಚುನಾವಣೆ ಹೊಸ್ತಿಲಿನಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಪರವಾಗಿ ಗುರುವಾರ ಆರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. </p>.<p>ಬಿಜೆಪಿ ಅಧಿಕಾರಕ್ಕೆ ಬಂದರೆ ಮೀನುಗಾರಿಕೆ ಮತ್ತು ಸಾಗರ ಆಹಾರೋತ್ಪನ್ನ ವಲಯದಲ್ಲಿ ರಾಜ್ಯವನ್ನು ಸ್ವಾವಲಂಬಿಯಾಗಿಸುವುದಾಗಿಯೂ ಅವರು ಹೇಳಿದ್ದಾರೆ.</p>.<h2><strong>ಆರು ಗ್ಯಾರಂಟಿಗಳು: </strong></h2><ul><li><p>ಟಿಎಂಸಿ ಆಡಳಿತದಲ್ಲಿರುವ ಭಯದ ವಾತಾವರಣವನ್ನು ತೊಡೆದುಹಾಕಿ ವಿಶ್ವಾಸ, ನಂಬಿಕೆ ಆಧರಿತ ವ್ಯವಸ್ಥೆಯನ್ನು ಸೃಷ್ಟಿಸಲಾಗುವುದು</p></li><li><p>ಸಾರ್ವಜನಿಕ ಸೇವೆಯಲ್ಲಿರುವವರು ತೆಗೆದುಕೊಳ್ಳುವ ಎಲ್ಲಾ ಕ್ರಮಗಳು ಸಾರ್ವಜನಿಕರಿಗೆ ಉತ್ತರದಾಯಿ ಆಗಿರುವಂತೆ ಮಾಡುವುದು </p></li><li><p>ಟಿಎಂಸಿ ಮುಚ್ಚಿಹಾಕಿರುವ ಭ್ರಷ್ಟಾಚಾರದ ಎಲ್ಲಾ ಪ್ರಕರಣಗಳು, ಮಹಿಳೆಯರ ವಿರುದ್ಧದ ದೌರ್ಜನ್ಯ ಪ್ರಕರಣಗಳನ್ನು ಬಿಜೆಪಿ ಮತ್ತೆ ತೆರೆದು ತನಿಖೆ ನಡೆಸಲಿದೆ</p></li><li><p>ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಎಲ್ಲಾ ನಾಯಕರನ್ನೂ ಜೈಲಿಗೆ ಕಳುಹಿಸಲಾಗುವುದು, ಟಿಎಂಸಿಯ ಯಾವ ಗೂಂಡಾ ಕೂಡ ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳಲಾಗದು </p></li><li><p>ಎಲ್ಲಾ ಅರ್ಹ ನಾಗರಿಕರಿಗೆ ಸರ್ಕಾರದ ಸೌಲಭ್ಯ, ಯೋಜನೆ ತಲುಪುವಂತೆ ಮಾಡಲಾಗುವುದು. ನುಸುಳುಕೋರರಿಗೆ ದೇಶದಲ್ಲಿ ಇರಲು ಅವಕಾಶ ನೀಡಲಾಗದು </p></li><li><p>ರಾಜ್ಯದ ಸರ್ಕಾರಿ ಉದ್ಯೋಗಿಗಳಿಗೆ, ಶಿಕ್ಷಕರಿಗೆ ಹಾಗೂ ಸಂಬಂಧಿತ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವವರಿಗಾಗಿ 7ನೇ ಹಣಕಾಸು ಆಯೋಗವನ್ನು ಬಿಜೆಪಿ ಸರ್ಕಾರ ರಚನೆಯಾದ ತಕ್ಷಣವೇ ಅನುಷ್ಠಾನಗೊಳಿಸಲಾಗುವುದು</p></li></ul>.‘ನಿರ್ಮಮ್’ ಸರ್ಕಾರ ಕಿತ್ತೊಗೆಯಿರಿ: ಪಶ್ಚಿಮ ಬಂಗಾಳದ ಮತದಾರರಿಗೆ ಮೋದಿ ಕರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲ್ದಿಯಾ</strong>: ಚುನಾವಣೆ ಹೊಸ್ತಿಲಿನಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಪರವಾಗಿ ಗುರುವಾರ ಆರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. </p>.<p>ಬಿಜೆಪಿ ಅಧಿಕಾರಕ್ಕೆ ಬಂದರೆ ಮೀನುಗಾರಿಕೆ ಮತ್ತು ಸಾಗರ ಆಹಾರೋತ್ಪನ್ನ ವಲಯದಲ್ಲಿ ರಾಜ್ಯವನ್ನು ಸ್ವಾವಲಂಬಿಯಾಗಿಸುವುದಾಗಿಯೂ ಅವರು ಹೇಳಿದ್ದಾರೆ.</p>.<h2><strong>ಆರು ಗ್ಯಾರಂಟಿಗಳು: </strong></h2><ul><li><p>ಟಿಎಂಸಿ ಆಡಳಿತದಲ್ಲಿರುವ ಭಯದ ವಾತಾವರಣವನ್ನು ತೊಡೆದುಹಾಕಿ ವಿಶ್ವಾಸ, ನಂಬಿಕೆ ಆಧರಿತ ವ್ಯವಸ್ಥೆಯನ್ನು ಸೃಷ್ಟಿಸಲಾಗುವುದು</p></li><li><p>ಸಾರ್ವಜನಿಕ ಸೇವೆಯಲ್ಲಿರುವವರು ತೆಗೆದುಕೊಳ್ಳುವ ಎಲ್ಲಾ ಕ್ರಮಗಳು ಸಾರ್ವಜನಿಕರಿಗೆ ಉತ್ತರದಾಯಿ ಆಗಿರುವಂತೆ ಮಾಡುವುದು </p></li><li><p>ಟಿಎಂಸಿ ಮುಚ್ಚಿಹಾಕಿರುವ ಭ್ರಷ್ಟಾಚಾರದ ಎಲ್ಲಾ ಪ್ರಕರಣಗಳು, ಮಹಿಳೆಯರ ವಿರುದ್ಧದ ದೌರ್ಜನ್ಯ ಪ್ರಕರಣಗಳನ್ನು ಬಿಜೆಪಿ ಮತ್ತೆ ತೆರೆದು ತನಿಖೆ ನಡೆಸಲಿದೆ</p></li><li><p>ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಎಲ್ಲಾ ನಾಯಕರನ್ನೂ ಜೈಲಿಗೆ ಕಳುಹಿಸಲಾಗುವುದು, ಟಿಎಂಸಿಯ ಯಾವ ಗೂಂಡಾ ಕೂಡ ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳಲಾಗದು </p></li><li><p>ಎಲ್ಲಾ ಅರ್ಹ ನಾಗರಿಕರಿಗೆ ಸರ್ಕಾರದ ಸೌಲಭ್ಯ, ಯೋಜನೆ ತಲುಪುವಂತೆ ಮಾಡಲಾಗುವುದು. ನುಸುಳುಕೋರರಿಗೆ ದೇಶದಲ್ಲಿ ಇರಲು ಅವಕಾಶ ನೀಡಲಾಗದು </p></li><li><p>ರಾಜ್ಯದ ಸರ್ಕಾರಿ ಉದ್ಯೋಗಿಗಳಿಗೆ, ಶಿಕ್ಷಕರಿಗೆ ಹಾಗೂ ಸಂಬಂಧಿತ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವವರಿಗಾಗಿ 7ನೇ ಹಣಕಾಸು ಆಯೋಗವನ್ನು ಬಿಜೆಪಿ ಸರ್ಕಾರ ರಚನೆಯಾದ ತಕ್ಷಣವೇ ಅನುಷ್ಠಾನಗೊಳಿಸಲಾಗುವುದು</p></li></ul>.‘ನಿರ್ಮಮ್’ ಸರ್ಕಾರ ಕಿತ್ತೊಗೆಯಿರಿ: ಪಶ್ಚಿಮ ಬಂಗಾಳದ ಮತದಾರರಿಗೆ ಮೋದಿ ಕರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>