<p><strong>ನವದೆಹಲಿ:</strong> ‘ವಿಕಸಿತ ಭಾರತ ಯುವ ನಾಯಕರ ಸಂವಾದ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಯುವ ಜನರೊಂದಿಗೆ ಸೋಮವಾರ ಸಂವಾದ ನಡೆಸಲಿದ್ದಾರೆ.</p>.<p>ಸ್ವಾಮಿ ವಿವೇಕಾನಂದ ಅವರ ಜನ್ಮ ದಿನೋತ್ಸವದ ಸ್ಮರಣಾರ್ಥವಾಗಿ ನಡೆಯುವ ‘ರಾಷ್ಟ್ರೀಯ ಯುವ ದಿನಾಚರಣೆ’ಯಂದೇ ದೆಹಲಿಯ ಭಾರತ ಮಂಟಪದಲ್ಲಿ ‘ವಿಕಸಿತ ಭಾರತ ಯುವ ನಾಯಕರ ಸಂವಾದ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಮಾರೋಪದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. </p>.<p>ಈ ಕಾರ್ಯಕ್ರಮಕ್ಕೆ ಆಯ್ಕೆಯಾದವರು ರಾಷ್ಟ್ರೀಯ ಪ್ರಾಮುಖ್ಯತೆಯ ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿದ 10 ವಿಷಯಗಳ ಕುರಿತು ಯುವ ಜನರ ದೃಷ್ಟಿಕೋನವನ್ನು ಪ್ರಧಾನಿ ಮೋದಿ ಅವರ ಮುಂದೆ ಪ್ರಸ್ತುತಪಡಿಸಲಿದ್ದಾರೆ. </p>.<p class="title">ಇದೇ ವೇಳೆ ಪ್ರಧಾನಿ ಮೋದಿ ಅವರು, ಭಾರತದ ಅಭಿವೃದ್ಧಿ ಆದ್ಯತೆಗಳು ಮತ್ತು ದೀರ್ಘಕಾಲೀನ ರಾಷ್ಟ್ರ ನಿರ್ಮಾಣದ ಗುರಿಗಳ ಕುರಿತು ಆಯ್ದ ಪ್ರಬಂಧಗಳನ್ನು ಒಳಗೊಂಡ ‘ವಿಕಸಿತ ಭಾರತ ಯುವ ನಾಯಕರ ಸಂವಾದ 2026’ರ ಸಂಕಲನವನ್ನು ಬಿಡುಗಡೆ ಮಾಡಲಿದ್ದಾರೆ.</p>.<p class="title">ಜನವರಿ 9ರಿಂದ 12ರವರೆಗೆ ನಡೆಯುತ್ತಿರುವ ಈ ಸಂವಾದದಲ್ಲಿ ದೇಶದಾದ್ಯಂತ ವಿವಿಧ ಹಂತಗಳಲ್ಲಿ 50 ಲಕ್ಷಕ್ಕೂ ಹೆಚ್ಚು ಯುವಜನತೆ ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ವಿಕಸಿತ ಭಾರತ ಯುವ ನಾಯಕರ ಸಂವಾದ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಯುವ ಜನರೊಂದಿಗೆ ಸೋಮವಾರ ಸಂವಾದ ನಡೆಸಲಿದ್ದಾರೆ.</p>.<p>ಸ್ವಾಮಿ ವಿವೇಕಾನಂದ ಅವರ ಜನ್ಮ ದಿನೋತ್ಸವದ ಸ್ಮರಣಾರ್ಥವಾಗಿ ನಡೆಯುವ ‘ರಾಷ್ಟ್ರೀಯ ಯುವ ದಿನಾಚರಣೆ’ಯಂದೇ ದೆಹಲಿಯ ಭಾರತ ಮಂಟಪದಲ್ಲಿ ‘ವಿಕಸಿತ ಭಾರತ ಯುವ ನಾಯಕರ ಸಂವಾದ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಮಾರೋಪದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. </p>.<p>ಈ ಕಾರ್ಯಕ್ರಮಕ್ಕೆ ಆಯ್ಕೆಯಾದವರು ರಾಷ್ಟ್ರೀಯ ಪ್ರಾಮುಖ್ಯತೆಯ ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿದ 10 ವಿಷಯಗಳ ಕುರಿತು ಯುವ ಜನರ ದೃಷ್ಟಿಕೋನವನ್ನು ಪ್ರಧಾನಿ ಮೋದಿ ಅವರ ಮುಂದೆ ಪ್ರಸ್ತುತಪಡಿಸಲಿದ್ದಾರೆ. </p>.<p class="title">ಇದೇ ವೇಳೆ ಪ್ರಧಾನಿ ಮೋದಿ ಅವರು, ಭಾರತದ ಅಭಿವೃದ್ಧಿ ಆದ್ಯತೆಗಳು ಮತ್ತು ದೀರ್ಘಕಾಲೀನ ರಾಷ್ಟ್ರ ನಿರ್ಮಾಣದ ಗುರಿಗಳ ಕುರಿತು ಆಯ್ದ ಪ್ರಬಂಧಗಳನ್ನು ಒಳಗೊಂಡ ‘ವಿಕಸಿತ ಭಾರತ ಯುವ ನಾಯಕರ ಸಂವಾದ 2026’ರ ಸಂಕಲನವನ್ನು ಬಿಡುಗಡೆ ಮಾಡಲಿದ್ದಾರೆ.</p>.<p class="title">ಜನವರಿ 9ರಿಂದ 12ರವರೆಗೆ ನಡೆಯುತ್ತಿರುವ ಈ ಸಂವಾದದಲ್ಲಿ ದೇಶದಾದ್ಯಂತ ವಿವಿಧ ಹಂತಗಳಲ್ಲಿ 50 ಲಕ್ಷಕ್ಕೂ ಹೆಚ್ಚು ಯುವಜನತೆ ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>