<p><strong>ದೆಹಲಿ</strong>: ಆಯೋಧ್ಯೆ ಮೂಲದ ಸಾಮಾಜಿಕ ಕಾರ್ಯಕರ್ತ, ಸಾವಿರಾರು ಅನಾಥ ಶವಗಳಿಗೆ ಮುಕ್ತಿ ನೀಡಿರುವ, ಪದ್ಮಶ್ರೀ ಪುರಸ್ಕೃತ ಮೊಹಮದ್ ಶರೀಫ್ (ಶರೀಫ್ ಚಾಚಾ) ಅವರನ್ನು ಆ.5ರಂದು ನಡೆಯಲಿರುವ ರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.</p>.<p>ಆದರೆ, 80 ವರ್ಷ ವಯಸ್ಸಿನ ಶರೀಫ್ ಅವರಿಗೆ ವಯೋ ಸಹಜ ಕಾಯಿಲೆಗಳಿರುವುದರಿಂದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳುತ್ತಿಲ್ಲ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ಈ ಮಧ್ಯೆ ಸುದ್ದಿ ಸಂಸ್ಥೆ ಎಎನ್ಐ ಜೊತೆಗೆ ಮಾತನಾಡಿರುವ ಶರೀಫ್ ಅವರು, ‘ಸಾಧ್ಯವಾದರೆ ಭಾಗವಹಿಸುವುದಾಗಿ’ ತಿಳಿಸಿದ್ದಾರೆ.</p>.<p>ಸ್ಥಳೀಯವಾಗಿ ಶರೀಫ್ ಚಾಚಾ ಎಂದೇ ಕರೆಸಿಕೊಳ್ಳುವ ಮೊಹಮದ್ ಶರೀಫ್ ಅವರು ಕಳೆದ 27 ವರ್ಷಗಳಿಂದ ಫೈಜಾಬಾದ್ನಲ್ಲಿ ಅನಾಥ ಶವಗಳ ಸಂಸ್ಕಾರ ಮಾಡಿಕೊಂಡು ಬಂದಿದ್ದಾರೆ. ಇದರಲ್ಲಿ ಅವರು ಹಿಂದೂ, ಮುಸ್ಲಿಂ ಎಂದು ಎಣಿಸಿಲ್ಲ.</p>.<p>ಆಯೋಧ್ಯೆಯಲ್ಲಿ ಸೈಕಲ್ ಶಾಪ್ ನಡೆಸುತ್ತಿರುವ ಅವರು, ಸಣ್ಣ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾರೆ.</p>.<p>‘27 ವರ್ಷಗಳ ಹಿಂದೆನನ್ನ ಮಗನ (25 ವರ್ಷ) ಶವ ರೈಲ್ವೆ ಹಳಿಗಳ ಬಳಿ ಪತ್ತೆಯಾಗಿತ್ತು. ಪ್ರಾಣಿಗಳು ದೇಹವನ್ನು ಭಾಗಶಃ ತಿಂದುಹಾಕಿದ್ದವು. ನನ್ನ ಮಗನಿಗೆ ಒದಗಿದ ಸ್ಥಿತಿ ಇನ್ಯಾರಿಗೂ ಬರಬಾರದು ಎಂದು ಅಂದೇ ತೀರ್ಮಾನಿಸಿದೆ. ಆಗಿನಿಂದ ಈ ಕಾರ್ಯ ನಡೆಸಿಕೊಂಡು ಬರುತ್ತಿದ್ದೇನೆ,’ ಎಂದು ಅವರು ‘ದಿ ವೀಕ್’ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೆಹಲಿ</strong>: ಆಯೋಧ್ಯೆ ಮೂಲದ ಸಾಮಾಜಿಕ ಕಾರ್ಯಕರ್ತ, ಸಾವಿರಾರು ಅನಾಥ ಶವಗಳಿಗೆ ಮುಕ್ತಿ ನೀಡಿರುವ, ಪದ್ಮಶ್ರೀ ಪುರಸ್ಕೃತ ಮೊಹಮದ್ ಶರೀಫ್ (ಶರೀಫ್ ಚಾಚಾ) ಅವರನ್ನು ಆ.5ರಂದು ನಡೆಯಲಿರುವ ರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.</p>.<p>ಆದರೆ, 80 ವರ್ಷ ವಯಸ್ಸಿನ ಶರೀಫ್ ಅವರಿಗೆ ವಯೋ ಸಹಜ ಕಾಯಿಲೆಗಳಿರುವುದರಿಂದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳುತ್ತಿಲ್ಲ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ಈ ಮಧ್ಯೆ ಸುದ್ದಿ ಸಂಸ್ಥೆ ಎಎನ್ಐ ಜೊತೆಗೆ ಮಾತನಾಡಿರುವ ಶರೀಫ್ ಅವರು, ‘ಸಾಧ್ಯವಾದರೆ ಭಾಗವಹಿಸುವುದಾಗಿ’ ತಿಳಿಸಿದ್ದಾರೆ.</p>.<p>ಸ್ಥಳೀಯವಾಗಿ ಶರೀಫ್ ಚಾಚಾ ಎಂದೇ ಕರೆಸಿಕೊಳ್ಳುವ ಮೊಹಮದ್ ಶರೀಫ್ ಅವರು ಕಳೆದ 27 ವರ್ಷಗಳಿಂದ ಫೈಜಾಬಾದ್ನಲ್ಲಿ ಅನಾಥ ಶವಗಳ ಸಂಸ್ಕಾರ ಮಾಡಿಕೊಂಡು ಬಂದಿದ್ದಾರೆ. ಇದರಲ್ಲಿ ಅವರು ಹಿಂದೂ, ಮುಸ್ಲಿಂ ಎಂದು ಎಣಿಸಿಲ್ಲ.</p>.<p>ಆಯೋಧ್ಯೆಯಲ್ಲಿ ಸೈಕಲ್ ಶಾಪ್ ನಡೆಸುತ್ತಿರುವ ಅವರು, ಸಣ್ಣ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾರೆ.</p>.<p>‘27 ವರ್ಷಗಳ ಹಿಂದೆನನ್ನ ಮಗನ (25 ವರ್ಷ) ಶವ ರೈಲ್ವೆ ಹಳಿಗಳ ಬಳಿ ಪತ್ತೆಯಾಗಿತ್ತು. ಪ್ರಾಣಿಗಳು ದೇಹವನ್ನು ಭಾಗಶಃ ತಿಂದುಹಾಕಿದ್ದವು. ನನ್ನ ಮಗನಿಗೆ ಒದಗಿದ ಸ್ಥಿತಿ ಇನ್ಯಾರಿಗೂ ಬರಬಾರದು ಎಂದು ಅಂದೇ ತೀರ್ಮಾನಿಸಿದೆ. ಆಗಿನಿಂದ ಈ ಕಾರ್ಯ ನಡೆಸಿಕೊಂಡು ಬರುತ್ತಿದ್ದೇನೆ,’ ಎಂದು ಅವರು ‘ದಿ ವೀಕ್’ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>