<p><strong>ನವದೆಹಲಿ</strong>: ‘ಕನಿಷ್ಠ ನಾವು ನಮ್ಮ ಮನೆಯಲ್ಲಿದ್ದಾಗ ನಮ್ಮ ಮಾತೃ ಭಾಷೆಯಲ್ಲಿಯೇ ಸಂವಹನ ನಡೆಸಬೇಕು. ಬೇರೆ ರಾಜ್ಯ ಅಥವಾ ಪ್ರದೇಶದಲ್ಲಿದ್ದರೆ, ಆ ಭಾಗದ ಭಾಷೆ ಕಲಿತು ಮಾತನಾಡಬೇಕು. ಆಯಾ ರಾಜ್ಯ–ಪ್ರದೇಶಗಳ ಭಾಷೆ ಕಲಿಯುವುದು ಬಹಳ ಮುಖ್ಯ. ಏಕೆಂದರೆ ಭಾರತದಲ್ಲಿರುವ ಎಲ್ಲಾ ಭಾಷೆಗಳು ‘ರಾಷ್ಟ್ರಭಾಷೆ’ ಆಗಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ(ಆರ್ಎಸ್ಎಸ್) ಮೋಹನ್ ಭಾಗವತ್ ಹೇಳಿದ್ದಾರೆ.</p><p>ಛತ್ತೀಸಗಢದ ರಾಯಪುರ ಜಿಲ್ಲೆಯ ಸೋನ್ಪೈರಿ ಗ್ರಾಮದಲ್ಲಿ ಬುಧವಾರ ನಡೆದ 'ಹಿಂದೂ ಸಮ್ಮೇಳನ'ದಲ್ಲಿ ಭಾಗವಹಿಸಿ ಅವರು ಮಾತನಾಡಿದ್ದಾರೆ. ಭಾರತದಲ್ಲಿರುವ ಎಲ್ಲಾ ಭಾಷೆಗಳು ಸಮಾನವಾದ ಪ್ರಾಮುಖ್ಯತೆ ಹೊಂದಿವೆ ಎಂದು ಒತ್ತಿ ಹೇಳಿದ್ದಾರೆ.</p><p>ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ದಕ್ಷಿಣ ಭಾರತದ ರಾಜ್ಯಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಭಾಗವತ್ ಅವರ ಹೇಳಿಕೆಗಳು ಮಹತ್ವ ಪಡೆದಿದೆ.</p><p>‘ಭಾಷೆ, ಜಾತಿ ಮತ್ತು ಸಂಪತ್ತಿನ ಶ್ರೇಷ್ಠತೆಯನ್ನು ಮೀರಿ ಜನರು ಸಾಮರಸ್ಯದಿಂದ ಬದುಕಬೇಕು’ ಎಂದು ಭಾಗವತ್ ಮನವಿ ಮಾಡಿದ್ದಾರೆ.</p><p>ಭಾಗವತ್ ಅವರ ಹೇಳಿಕೆಯನ್ನು ಬಿಜೆಪಿಯ ಅನೇಕ ನಾಯಕರು ಸ್ವಾಗತಿಸಿದ್ದಾರೆ. ಭಾಗವತ್ ಅವರ ಮಾತಿನಲ್ಲಿ ದೇಶವನ್ನು ಒಗ್ಗೂಡಿಸುವ ಸಂದೇಶವಿದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಹೇಳಿದ್ದಾರೆ.</p><p>ಭಾಗವತ್ ಹೇಳಿಕೆಯನ್ನಿಟ್ಟುಕೊಂಡು ವಿರೋಧ ಪಕ್ಷಗಳು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿವೆ.</p><p>‘ದಕ್ಷಿಣ ಭಾರತದ ಜನರ ಮೇಲೆ ಬಲವಂತವಾಗಿ ಹಿಂದಿ ಭಾಷೆಯನ್ನು ಹೇರುವುದನ್ನು ನಿಲ್ಲಿಸುವಂತೆ ಭಾಗವತ್ ಬಿಜೆಪಿ ನಾಯಕರಿಗೆ ಏಕೆ ಹೇಳುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಪ್ರಶ್ನಿಸಿದ್ದಾರೆ.</p><p>‘ಮೋಹನ್ ಭಾಗವತ್ ಅವರ ಹೇಳಿಕೆಗಳು ಯಾವುದೇ ವ್ಯತ್ಯಾಸವನ್ನುಂಟು ಮಾಡುವುದಿಲ್ಲ. ಮೊದಲು ಅವರು ಇದನ್ನು ತಮ್ಮ ಕಾರ್ಯಕರ್ತರು ಮತ್ತು ಬಿಜೆಪಿ ನಾಯಕರಿಗೆ ವಿವರಿಸಬೇಕು’ ಎಂದು ಕುಟುಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಕನಿಷ್ಠ ನಾವು ನಮ್ಮ ಮನೆಯಲ್ಲಿದ್ದಾಗ ನಮ್ಮ ಮಾತೃ ಭಾಷೆಯಲ್ಲಿಯೇ ಸಂವಹನ ನಡೆಸಬೇಕು. ಬೇರೆ ರಾಜ್ಯ ಅಥವಾ ಪ್ರದೇಶದಲ್ಲಿದ್ದರೆ, ಆ ಭಾಗದ ಭಾಷೆ ಕಲಿತು ಮಾತನಾಡಬೇಕು. ಆಯಾ ರಾಜ್ಯ–ಪ್ರದೇಶಗಳ ಭಾಷೆ ಕಲಿಯುವುದು ಬಹಳ ಮುಖ್ಯ. ಏಕೆಂದರೆ ಭಾರತದಲ್ಲಿರುವ ಎಲ್ಲಾ ಭಾಷೆಗಳು ‘ರಾಷ್ಟ್ರಭಾಷೆ’ ಆಗಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ(ಆರ್ಎಸ್ಎಸ್) ಮೋಹನ್ ಭಾಗವತ್ ಹೇಳಿದ್ದಾರೆ.</p><p>ಛತ್ತೀಸಗಢದ ರಾಯಪುರ ಜಿಲ್ಲೆಯ ಸೋನ್ಪೈರಿ ಗ್ರಾಮದಲ್ಲಿ ಬುಧವಾರ ನಡೆದ 'ಹಿಂದೂ ಸಮ್ಮೇಳನ'ದಲ್ಲಿ ಭಾಗವಹಿಸಿ ಅವರು ಮಾತನಾಡಿದ್ದಾರೆ. ಭಾರತದಲ್ಲಿರುವ ಎಲ್ಲಾ ಭಾಷೆಗಳು ಸಮಾನವಾದ ಪ್ರಾಮುಖ್ಯತೆ ಹೊಂದಿವೆ ಎಂದು ಒತ್ತಿ ಹೇಳಿದ್ದಾರೆ.</p><p>ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ದಕ್ಷಿಣ ಭಾರತದ ರಾಜ್ಯಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಭಾಗವತ್ ಅವರ ಹೇಳಿಕೆಗಳು ಮಹತ್ವ ಪಡೆದಿದೆ.</p><p>‘ಭಾಷೆ, ಜಾತಿ ಮತ್ತು ಸಂಪತ್ತಿನ ಶ್ರೇಷ್ಠತೆಯನ್ನು ಮೀರಿ ಜನರು ಸಾಮರಸ್ಯದಿಂದ ಬದುಕಬೇಕು’ ಎಂದು ಭಾಗವತ್ ಮನವಿ ಮಾಡಿದ್ದಾರೆ.</p><p>ಭಾಗವತ್ ಅವರ ಹೇಳಿಕೆಯನ್ನು ಬಿಜೆಪಿಯ ಅನೇಕ ನಾಯಕರು ಸ್ವಾಗತಿಸಿದ್ದಾರೆ. ಭಾಗವತ್ ಅವರ ಮಾತಿನಲ್ಲಿ ದೇಶವನ್ನು ಒಗ್ಗೂಡಿಸುವ ಸಂದೇಶವಿದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಹೇಳಿದ್ದಾರೆ.</p><p>ಭಾಗವತ್ ಹೇಳಿಕೆಯನ್ನಿಟ್ಟುಕೊಂಡು ವಿರೋಧ ಪಕ್ಷಗಳು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿವೆ.</p><p>‘ದಕ್ಷಿಣ ಭಾರತದ ಜನರ ಮೇಲೆ ಬಲವಂತವಾಗಿ ಹಿಂದಿ ಭಾಷೆಯನ್ನು ಹೇರುವುದನ್ನು ನಿಲ್ಲಿಸುವಂತೆ ಭಾಗವತ್ ಬಿಜೆಪಿ ನಾಯಕರಿಗೆ ಏಕೆ ಹೇಳುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಪ್ರಶ್ನಿಸಿದ್ದಾರೆ.</p><p>‘ಮೋಹನ್ ಭಾಗವತ್ ಅವರ ಹೇಳಿಕೆಗಳು ಯಾವುದೇ ವ್ಯತ್ಯಾಸವನ್ನುಂಟು ಮಾಡುವುದಿಲ್ಲ. ಮೊದಲು ಅವರು ಇದನ್ನು ತಮ್ಮ ಕಾರ್ಯಕರ್ತರು ಮತ್ತು ಬಿಜೆಪಿ ನಾಯಕರಿಗೆ ವಿವರಿಸಬೇಕು’ ಎಂದು ಕುಟುಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>