ಕೇಂದ್ರ ಆಯುಷ್ ಸಚಿವಾಲಯವು ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಸಮ್ಮೇಳನ ‘ಆಯುರ್ವೇದ ಪರ್ವ’ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಆಯುರ್ವೇದಕ್ಕೆ ಜಾಗತಿಕ ಮನ್ನಣೆ ದೊರಕಿಸಲು ಕ್ರಮ ಕೈಗೊಳ್ಳಬೇಕು. ಎಲ್ಲರಿಗೂ ಸುಲಭಕ್ಕೆ ಎಟಕುವ ಮತ್ತು ಸರಳವಾದ ವೈದ್ಯಕೀಯ ಚಿಕಿತ್ಸೆ ದೊರಕುವಂತೆ ಆಗಬೇಕು. ಈ ನಿಟ್ಟಿನಲ್ಲಿ ಆಯುರ್ವೇದಕ್ಕಿಂತ ಮತ್ತೊಂದು ಉತ್ತಮ ವೈದ್ಯಕೀಯ ಪದ್ಧತಿ ಇಲ್ಲ. ಇದರಿಂದ ಆಯುರ್ವೇದ ಪದ್ಧತಿಯನ್ನೂ ಮುಂದುವರಿಸಿಕೊಂಡು ಹೋದಂತಾಗುತ್ತದೆ’ ಎಂದು ಹೇಳಿದರು.