<p><strong>ಇಂಫಾಲ:</strong> ‘ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್ಎಸ್ಎಸ್) ಸಮಾಜವನ್ನು ಬಲಪಡಿಸಲು ಸಂಪೂರ್ಣವಾಗಿ ಸಮರ್ಪಿತವಾಗಿದೆ. ಎಲ್ಲರೂ ಸಾಮಾಜಿಕ ಏಕತೆಗೆ ಒತ್ತು ನೀಡಬೇಕು’ ಎಂದು ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಸಲಹೆ ನೀಡಿದರು.</p>.<p>ಮಣಿಪುರಕ್ಕೆ ಮೂರು ದಿನಗಳ ಭೇಟಿ ನೀಡಿರುವ ಭಾಗವತ್ ಅವರು ಎರಡನೇ ದಿನವಾದ ಶುಕ್ರವಾರ ಇಂಫಾಲದಲ್ಲಿ ಬುಡಕಟ್ಟು ಸಮುದಾಯದ ನಾಯಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.</p>.<p>‘ಆರ್ಎಸ್ಎಸ್ ಯಾರ ವಿರುದ್ಧವೂ ಅಲ್ಲ. ಸಮಾಜವನ್ನು ನಾಶ ಮಾಡಲು ಸ್ಥಾಪಿಸಿದ್ದಲ್ಲ; ಬದಲಾಗಿ ಸಮಾಜ ಒಗ್ಗೂಡಿಸಲು ಸ್ಥಾಪಿಸಲಾಗಿದೆ. ಸಂಘವು ರಾಜಕೀಯದಲ್ಲಿ ತೊಡಗುವುದಿಲ್ಲ ಅಥವಾ ಯಾವುದೇ ಸಂಘಟನೆಯನ್ನು ನಿಯಂತ್ರಿಸುವುದಿಲ್ಲ. ಸ್ನೇಹ, ವಾತ್ಸಲ್ಯ ಮತ್ತು ಸಾಮಾಜಿಕ ಸಾಮರಸ್ಯದ ಮೂಲಕ ಮಾತ್ರ ಕಾರ್ಯನಿರ್ವಹಿಸುತ್ತದೆ’ ಎಂದು ಹೇಳಿದರು.</p>.<p>‘ನಮ್ಮ ಕೊಡು–ಕೊಳ್ಳುವಿಕೆಯ ಪ್ರಜ್ಞೆಯಿಂದಾಗಿ ನಾವು ಒಗ್ಗಟ್ಟಾಗಿದ್ದೇವೆ. ಸುಂದರ ವೈವಿಧ್ಯದ ಹೊರತಾಗಿಯೂ, ನಾವು ಒಂದೇ ನಾಗರಿಕ ಕುಟುಂಬಕ್ಕೆ ಸೇರಿದವರು. ಹೀಗಾಗಿ, ಏಕತೆಯು ಏಕರೂಪತೆಯನ್ನು ಬೇಡುವುದಿಲ್ಲ’ ಎಂದು ತಿಳಿಸಿದರು.</p>.<p>‘ಆರ್ಎಸ್ಎಸ್ ಎಂಬುದು ಮನುಷ್ಯತ್ವ ಮತ್ತು ವ್ಯಕ್ತಿತ್ವ ರೂಪಿಸುವ ಚಳವಳಿ’ ಎಂದು ಬಣ್ಣಿಸಿದ ಅವರು, ‘ಸಂಘವು ತಳಮಟ್ಟದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರತಿಯೊಬ್ಬರೂ ಶಾಖೆಗಳಿಗೆ ಭೇಟಿ ನೀಡಬೇಕು’ ಎಂದು ಕೋರಿದರು.</p>.<p>‘ಬುಡಕಟ್ಟು ಸಮುದಾಯದ ಮುಖಂಡರು ಸ್ಥಳೀಯ ಸಂಪ್ರದಾಯ, ಭಾಷೆ ಮತ್ತು ಲಿಪಿಗಳ ಬಗ್ಗೆ ಹೆಮ್ಮೆ ಪಡಬೇಕು. ಸಾಂಸ್ಕೃತಿಕ ಗುರುತನ್ನು ಆಧರಿಸಿದ ಸ್ವದೇಶಿ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ:</strong> ‘ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್ಎಸ್ಎಸ್) ಸಮಾಜವನ್ನು ಬಲಪಡಿಸಲು ಸಂಪೂರ್ಣವಾಗಿ ಸಮರ್ಪಿತವಾಗಿದೆ. ಎಲ್ಲರೂ ಸಾಮಾಜಿಕ ಏಕತೆಗೆ ಒತ್ತು ನೀಡಬೇಕು’ ಎಂದು ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಸಲಹೆ ನೀಡಿದರು.</p>.<p>ಮಣಿಪುರಕ್ಕೆ ಮೂರು ದಿನಗಳ ಭೇಟಿ ನೀಡಿರುವ ಭಾಗವತ್ ಅವರು ಎರಡನೇ ದಿನವಾದ ಶುಕ್ರವಾರ ಇಂಫಾಲದಲ್ಲಿ ಬುಡಕಟ್ಟು ಸಮುದಾಯದ ನಾಯಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.</p>.<p>‘ಆರ್ಎಸ್ಎಸ್ ಯಾರ ವಿರುದ್ಧವೂ ಅಲ್ಲ. ಸಮಾಜವನ್ನು ನಾಶ ಮಾಡಲು ಸ್ಥಾಪಿಸಿದ್ದಲ್ಲ; ಬದಲಾಗಿ ಸಮಾಜ ಒಗ್ಗೂಡಿಸಲು ಸ್ಥಾಪಿಸಲಾಗಿದೆ. ಸಂಘವು ರಾಜಕೀಯದಲ್ಲಿ ತೊಡಗುವುದಿಲ್ಲ ಅಥವಾ ಯಾವುದೇ ಸಂಘಟನೆಯನ್ನು ನಿಯಂತ್ರಿಸುವುದಿಲ್ಲ. ಸ್ನೇಹ, ವಾತ್ಸಲ್ಯ ಮತ್ತು ಸಾಮಾಜಿಕ ಸಾಮರಸ್ಯದ ಮೂಲಕ ಮಾತ್ರ ಕಾರ್ಯನಿರ್ವಹಿಸುತ್ತದೆ’ ಎಂದು ಹೇಳಿದರು.</p>.<p>‘ನಮ್ಮ ಕೊಡು–ಕೊಳ್ಳುವಿಕೆಯ ಪ್ರಜ್ಞೆಯಿಂದಾಗಿ ನಾವು ಒಗ್ಗಟ್ಟಾಗಿದ್ದೇವೆ. ಸುಂದರ ವೈವಿಧ್ಯದ ಹೊರತಾಗಿಯೂ, ನಾವು ಒಂದೇ ನಾಗರಿಕ ಕುಟುಂಬಕ್ಕೆ ಸೇರಿದವರು. ಹೀಗಾಗಿ, ಏಕತೆಯು ಏಕರೂಪತೆಯನ್ನು ಬೇಡುವುದಿಲ್ಲ’ ಎಂದು ತಿಳಿಸಿದರು.</p>.<p>‘ಆರ್ಎಸ್ಎಸ್ ಎಂಬುದು ಮನುಷ್ಯತ್ವ ಮತ್ತು ವ್ಯಕ್ತಿತ್ವ ರೂಪಿಸುವ ಚಳವಳಿ’ ಎಂದು ಬಣ್ಣಿಸಿದ ಅವರು, ‘ಸಂಘವು ತಳಮಟ್ಟದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರತಿಯೊಬ್ಬರೂ ಶಾಖೆಗಳಿಗೆ ಭೇಟಿ ನೀಡಬೇಕು’ ಎಂದು ಕೋರಿದರು.</p>.<p>‘ಬುಡಕಟ್ಟು ಸಮುದಾಯದ ಮುಖಂಡರು ಸ್ಥಳೀಯ ಸಂಪ್ರದಾಯ, ಭಾಷೆ ಮತ್ತು ಲಿಪಿಗಳ ಬಗ್ಗೆ ಹೆಮ್ಮೆ ಪಡಬೇಕು. ಸಾಂಸ್ಕೃತಿಕ ಗುರುತನ್ನು ಆಧರಿಸಿದ ಸ್ವದೇಶಿ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>