<p><strong>ನಾಗ್ಪುರ</strong>: 'ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಪ್ರತ್ಯೇಕವಾಗಿ ಘೋಷಿಸುವ ಅಗತ್ಯವಿಲ್ಲ. ಈಗಾಗಲೇ ಅದು ಹಿಂದೂ ರಾಷ್ಟ್ರವಾಗಿದೆ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.</p><p>ರಾಮಮಂದಿರ ನಿರ್ಮಾಣದಲ್ಲಿ ಕೈಜೋಡಿಸಿದ ವ್ಯಕ್ತಿಗಳನ್ನು ಗೌರವಿಸಲು ಸೋಮವಾರ ಇಲ್ಲಿನ ರೇಷ್ಮಿಬಾಗ್ನಲ್ಲಿ ಡಾ. ಹೆಡ್ಗೆವಾರ್ ಸ್ಮಾರಕ ಸಮಿತಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಅಯೋಧ್ಯೆಯ ರಾಮಮಂದಿರವು ಅಧಿಕಾರದಲ್ಲಿರುವವರ ಬದ್ಧತೆ ಮತ್ತು ದೇಶದ ಪ್ರತಿಯೊಬ್ಬರ ಬೆಂಬಲದಿಂದ ನಿರ್ಮಾಣಗೊಂಡಿದೆ’ ಎಂದಿದ್ದಾರೆ.</p><p>‘ಒಂದು ಕಾಲದಲ್ಲಿ ಹಿಂದೂ ರಾಷ್ಟ್ರ ಎಂಬ ಪರಿಕಲ್ಪನೆಯನ್ನು ಅಪಹಾಸ್ಯ ಮಾಡಲಾಗುತ್ತಿತ್ತು. ರಾಮಮಂದಿರ ನಿರ್ಮಾಣವಾಗುವವರೆಗೆ ಜನರು ಈ ಹೇಳಿಕೆಯನ್ನು ನೋಡಿ ನಗುತ್ತಿದ್ದರು. ಇಂದು ಅದೇ ಜನರು ಭಾರತವು ಹಿಂದೂಗಳ ಭೂಮಿ ಎಂದು ಹೇಳುತ್ತಿದ್ದಾರೆ’ ಎಂದಿದ್ದಾರೆ.</p><p>‘ಅನೇಕ ಜನರು ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸುವಂತೆ ನಮ್ಮನ್ನು ಕೇಳುತ್ತಾರೆ. ಆದರೆ, ಯಾವುದು ಈಗಾಗಲೇ ಸತ್ಯವೋ ಅದನ್ನು ಘೋಷಿಸುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.</p><p>‘ಸೂರ್ಯ ಪೂರ್ವದಲ್ಲಿ ಉದಯಿಸುತ್ತಾನೆ ಎಂದು ನಾವು ಘೋಷಿಸಬೇಕೇ? ಅದೇ ರೀತಿ ಭಾರತವು ಹಿಂದೂ ರಾಷ್ಟ್ರ ಎಂಬುದು ಈಗಾಗಲೇ ವಾಸ್ತವವಾಗಿದೆ ಮತ್ತು ಪ್ರತಿಯೊಬ್ಬರೂ ಅದನ್ನು ಒಪ್ಪಿಕೊಳ್ಳುತ್ತಾರೆ. ಆದರೆ ಹಿಂದೆ? ಎಲ್ಲರೂ ಅದನ್ನು ಅಪಹಾಸ್ಯ ಮಾಡುತ್ತಿದ್ದರು’ ಎಂದಿದ್ದಾರೆ.</p><p>‘ಈ ಸನ್ಮಾನ ಸಮಾರಂಭವು ಮಂದಿರ ನಿರ್ಮಾಣಕ್ಕೆ ಕೊಡುಗೆ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವ ಒಂದು ಮಾರ್ಗವಾಗಿದೆ. ಅವರು ತಮ್ಮ ಕೆಲಸವನ್ನು ಮಾಡಿದ್ದಾರೆ. ಈಗ ನಾವು ನಮ್ಮ ಕೆಲಸವನ್ನು ಮಾಡಬೇಕು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ</strong>: 'ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಪ್ರತ್ಯೇಕವಾಗಿ ಘೋಷಿಸುವ ಅಗತ್ಯವಿಲ್ಲ. ಈಗಾಗಲೇ ಅದು ಹಿಂದೂ ರಾಷ್ಟ್ರವಾಗಿದೆ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.</p><p>ರಾಮಮಂದಿರ ನಿರ್ಮಾಣದಲ್ಲಿ ಕೈಜೋಡಿಸಿದ ವ್ಯಕ್ತಿಗಳನ್ನು ಗೌರವಿಸಲು ಸೋಮವಾರ ಇಲ್ಲಿನ ರೇಷ್ಮಿಬಾಗ್ನಲ್ಲಿ ಡಾ. ಹೆಡ್ಗೆವಾರ್ ಸ್ಮಾರಕ ಸಮಿತಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಅಯೋಧ್ಯೆಯ ರಾಮಮಂದಿರವು ಅಧಿಕಾರದಲ್ಲಿರುವವರ ಬದ್ಧತೆ ಮತ್ತು ದೇಶದ ಪ್ರತಿಯೊಬ್ಬರ ಬೆಂಬಲದಿಂದ ನಿರ್ಮಾಣಗೊಂಡಿದೆ’ ಎಂದಿದ್ದಾರೆ.</p><p>‘ಒಂದು ಕಾಲದಲ್ಲಿ ಹಿಂದೂ ರಾಷ್ಟ್ರ ಎಂಬ ಪರಿಕಲ್ಪನೆಯನ್ನು ಅಪಹಾಸ್ಯ ಮಾಡಲಾಗುತ್ತಿತ್ತು. ರಾಮಮಂದಿರ ನಿರ್ಮಾಣವಾಗುವವರೆಗೆ ಜನರು ಈ ಹೇಳಿಕೆಯನ್ನು ನೋಡಿ ನಗುತ್ತಿದ್ದರು. ಇಂದು ಅದೇ ಜನರು ಭಾರತವು ಹಿಂದೂಗಳ ಭೂಮಿ ಎಂದು ಹೇಳುತ್ತಿದ್ದಾರೆ’ ಎಂದಿದ್ದಾರೆ.</p><p>‘ಅನೇಕ ಜನರು ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸುವಂತೆ ನಮ್ಮನ್ನು ಕೇಳುತ್ತಾರೆ. ಆದರೆ, ಯಾವುದು ಈಗಾಗಲೇ ಸತ್ಯವೋ ಅದನ್ನು ಘೋಷಿಸುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.</p><p>‘ಸೂರ್ಯ ಪೂರ್ವದಲ್ಲಿ ಉದಯಿಸುತ್ತಾನೆ ಎಂದು ನಾವು ಘೋಷಿಸಬೇಕೇ? ಅದೇ ರೀತಿ ಭಾರತವು ಹಿಂದೂ ರಾಷ್ಟ್ರ ಎಂಬುದು ಈಗಾಗಲೇ ವಾಸ್ತವವಾಗಿದೆ ಮತ್ತು ಪ್ರತಿಯೊಬ್ಬರೂ ಅದನ್ನು ಒಪ್ಪಿಕೊಳ್ಳುತ್ತಾರೆ. ಆದರೆ ಹಿಂದೆ? ಎಲ್ಲರೂ ಅದನ್ನು ಅಪಹಾಸ್ಯ ಮಾಡುತ್ತಿದ್ದರು’ ಎಂದಿದ್ದಾರೆ.</p><p>‘ಈ ಸನ್ಮಾನ ಸಮಾರಂಭವು ಮಂದಿರ ನಿರ್ಮಾಣಕ್ಕೆ ಕೊಡುಗೆ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವ ಒಂದು ಮಾರ್ಗವಾಗಿದೆ. ಅವರು ತಮ್ಮ ಕೆಲಸವನ್ನು ಮಾಡಿದ್ದಾರೆ. ಈಗ ನಾವು ನಮ್ಮ ಕೆಲಸವನ್ನು ಮಾಡಬೇಕು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>