<p>ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಟೆಹರಾನ್:</strong> ಇರಾನ್ನ ನೂತನ ಪರಮೋಚ್ಚ ನಾಯಕರನ್ನಾಗಿ ಆಯತೊಲ್ಲಾ ಅಲಿ ಖಮೇನಿ ಅವರ ಪುತ್ರ ಮೊಜ್ತಾಬಾ ಖಮೇನಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.</p>.ಇರಾನ್ ನೂತನ ಪರಮೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಾಬಾ ನೇಮಕ.<p><strong>ನವದೆಹಲಿ:</strong> ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧ ಸೋಮವಾರದಿಂದ ಪುನರಾರಂಭವಾಗಲಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಸಲ್ಲಿಸಿರುವ ಅವಿಶ್ವಾಸ ನಿರ್ಣಯ ಮಂಡನೆಯ ಪ್ರಸ್ತಾವ ಮೊದಲ ದಿನವೇ ಚರ್ಚೆಗೆ ಬರಲಿದೆ. </p>.ಸಂಸತ್ತಿನ ಬಜೆಟ್ ಅಧಿವೇಶನ: ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಇಂದು ಚರ್ಚೆಗೆ.<p><strong>ನವದೆಹಲಿ/ಕೋಲ್ಕತ್ತ (ಪಿಟಿಐ)</strong>: ‘ನನ್ನ ಪಶ್ಚಿಮ ಬಂಗಾಳದ ಭೇಟಿಯ ವೇಳೆ ರಾಜ್ಯ ಸರ್ಕಾರವು ಶಿಷ್ಟಾಚಾರ ಪಾಲಿಸಿಲ್ಲ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಖುದ್ದು ಆರೋಪಿಸಿದ ಬೆನ್ನಲ್ಲೇ, ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರವು ವಿವರಣೆ ಕೇಳಿ ನೋಟಿಸ್ ನೀಡಿದೆ.</p>.ರಾಷ್ಟ್ರಪತಿ ಭೇಟಿ ವೇಳೆ ಶಿಷ್ಟಾಚಾರ ಉಲ್ಲಂಘನೆ: ಪ. ಬಂಗಾಳದ ವಿವರಣೆ ಕೇಳಿದ ಕೇಂದ್ರ.<p><strong>ಪಾಟ್ನಾ:</strong> ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಾ. 9ರಿಂದ ರಾಜ್ಯದಲ್ಲಿ ‘ಸಮೃದ್ಧಿ ಯಾತ್ರೆ’ಯನ್ನು ಪುನರಾರಂಭಿಸಲಿದ್ದಾರೆ. </p>.ಬಿಹಾರ: ನಿತೀಶ್ ಕುಮಾರ್ ‘ಸಮೃದ್ಧಿ ಯಾತ್ರೆ’ ಇಂದಿನಿಂದ.<p><strong>ನವದೆಹಲಿ:</strong> 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 96 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಇತಿಹಾಸ ಸೃಷ್ಟಿಸಿದೆ. ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಕ್ರಿಕೆಟ್ ದಿಗ್ಗಜರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಶ್ಲಾಘಿಸಿದ್ದಾರೆ.</p>.T20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾಗೆ ದಿಗ್ಗಜರಿಂದ ಶ್ಲಾಘನೆ.<p><strong>ಅಹಮದಾಬಾದ್:</strong> ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು 96 ರನ್ಗಳ ಅಂತರದಲ್ಲಿ ಸೋಲಿಸುವ ಮೂಲಕ ಮೂರನೇ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ದಾಖಲೆ ಬರೆದಿದೆ.</p>.T20 WC| ಸತತ ಎರಡನೇ ವಿಶ್ವಕಪ್ ಗೆದ್ದ ಭಾರತ: ಇತಿಹಾಸ ನಿರ್ಮಿಸಿದ ಸೂರ್ಯ ಪಡೆ.<p><strong>ದುಬೈ</strong>: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದಿಂದಾಗಿ ಇರಾನ್, ಗಲ್ಫ್ ದೇಶಗಳ ಮೇಲೆ ಮತ್ತೆ ಅಪ್ರಚೋದಿತ ದಾಳಿಗಳನ್ನು ಮುಂದುವರೆಸಿದೆ.</p>.ಮತ್ತೆ ಗಲ್ಫ್ ದೇಶಗಳ ಮೇಲೆ ಇರಾನ್ ದಾಳಿ: ಬಹರೈನ್ನಲ್ಲಿ 32 ನಾಗರಿಕರಿಗೆ ಗಾಯ!.<p><strong>ಬೆಂಗಳೂರು:</strong> ಮಹದೇವಪುರದ ಕಿಮ್ಸ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ವಿಭಾಗದ ಉದ್ಘಾಟನೆಗೆ ಭಾನುವಾರ ಬಂದಿದ್ದ ಟಾಲಿವುಡ್ ನಟ ಜೂನಿಯರ್ ಎನ್ಟಿಆರ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.</p>.ಜೂನಿಯರ್ ಎನ್ಟಿಆರ್ ನೋಡಲು ಮುಗಿಬಿದ್ದ ಅಭಿಮಾನಿಗಳ ಚದುರಿಸಲು ಲಘು ಲಾಠಿ ಪ್ರಹಾರ.<p><strong>ಕಾಠ್ಮಂಡು:</strong> ನೇಪಾಳದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಾಲೇಂದ್ರ ಶಾ ಅವರ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್ಎಸ್ಪಿ)ವು ಪ್ರಚಂಡ ಗೆಲುವು ಸಾಧಿಸಿದೆ. ಅಲ್ಲದೆ ನೇಪಾಳದಲ್ಲಿ ನೂತನ ಸರ್ಕಾರ ರಚಿಸಲು ಸಿದ್ಧವಾಗಿದೆ.</p> .ನೇಪಾಳ ಚುನಾವಣೆ: ಬಾಲೇಂದ್ರ ಶಾ ಅವರ ಆರ್ಎಸ್ಪಿಗೆ ಪ್ರಚಂಡ ಗೆಲುವು.<p><strong>ಬೆಂಗಳೂರು:</strong> ವಿಧಾನಮಂಡಲದ ಉಭಯ ಸದನಗಳಲ್ಲಿ ಸೋಮವಾರದಿಂದ ಬಜೆಟ್ ಮೇಲಿನ ಚರ್ಚೆ ಆರಂಭವಾಗಲಿದೆ. ಮಾರ್ಚ್ 27ರವರೆಗೆ ಅಧಿವೇಶನ ನಡೆಯಲಿದೆ.</p>.ವಿಧಾನ ಮಂಡಲ ಅಧಿವೇಶನ: ಇಂದಿನಿಂದ ಬಜೆಟ್ ಮೇಲೆ ಚರ್ಚೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p>.<p><strong>ಟೆಹರಾನ್:</strong> ಇರಾನ್ನ ನೂತನ ಪರಮೋಚ್ಚ ನಾಯಕರನ್ನಾಗಿ ಆಯತೊಲ್ಲಾ ಅಲಿ ಖಮೇನಿ ಅವರ ಪುತ್ರ ಮೊಜ್ತಾಬಾ ಖಮೇನಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.</p>.ಇರಾನ್ ನೂತನ ಪರಮೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಾಬಾ ನೇಮಕ.<p><strong>ನವದೆಹಲಿ:</strong> ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧ ಸೋಮವಾರದಿಂದ ಪುನರಾರಂಭವಾಗಲಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಸಲ್ಲಿಸಿರುವ ಅವಿಶ್ವಾಸ ನಿರ್ಣಯ ಮಂಡನೆಯ ಪ್ರಸ್ತಾವ ಮೊದಲ ದಿನವೇ ಚರ್ಚೆಗೆ ಬರಲಿದೆ. </p>.ಸಂಸತ್ತಿನ ಬಜೆಟ್ ಅಧಿವೇಶನ: ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಇಂದು ಚರ್ಚೆಗೆ.<p><strong>ನವದೆಹಲಿ/ಕೋಲ್ಕತ್ತ (ಪಿಟಿಐ)</strong>: ‘ನನ್ನ ಪಶ್ಚಿಮ ಬಂಗಾಳದ ಭೇಟಿಯ ವೇಳೆ ರಾಜ್ಯ ಸರ್ಕಾರವು ಶಿಷ್ಟಾಚಾರ ಪಾಲಿಸಿಲ್ಲ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಖುದ್ದು ಆರೋಪಿಸಿದ ಬೆನ್ನಲ್ಲೇ, ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರವು ವಿವರಣೆ ಕೇಳಿ ನೋಟಿಸ್ ನೀಡಿದೆ.</p>.ರಾಷ್ಟ್ರಪತಿ ಭೇಟಿ ವೇಳೆ ಶಿಷ್ಟಾಚಾರ ಉಲ್ಲಂಘನೆ: ಪ. ಬಂಗಾಳದ ವಿವರಣೆ ಕೇಳಿದ ಕೇಂದ್ರ.<p><strong>ಪಾಟ್ನಾ:</strong> ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಾ. 9ರಿಂದ ರಾಜ್ಯದಲ್ಲಿ ‘ಸಮೃದ್ಧಿ ಯಾತ್ರೆ’ಯನ್ನು ಪುನರಾರಂಭಿಸಲಿದ್ದಾರೆ. </p>.ಬಿಹಾರ: ನಿತೀಶ್ ಕುಮಾರ್ ‘ಸಮೃದ್ಧಿ ಯಾತ್ರೆ’ ಇಂದಿನಿಂದ.<p><strong>ನವದೆಹಲಿ:</strong> 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 96 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಇತಿಹಾಸ ಸೃಷ್ಟಿಸಿದೆ. ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಕ್ರಿಕೆಟ್ ದಿಗ್ಗಜರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಶ್ಲಾಘಿಸಿದ್ದಾರೆ.</p>.T20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾಗೆ ದಿಗ್ಗಜರಿಂದ ಶ್ಲಾಘನೆ.<p><strong>ಅಹಮದಾಬಾದ್:</strong> ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು 96 ರನ್ಗಳ ಅಂತರದಲ್ಲಿ ಸೋಲಿಸುವ ಮೂಲಕ ಮೂರನೇ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ದಾಖಲೆ ಬರೆದಿದೆ.</p>.T20 WC| ಸತತ ಎರಡನೇ ವಿಶ್ವಕಪ್ ಗೆದ್ದ ಭಾರತ: ಇತಿಹಾಸ ನಿರ್ಮಿಸಿದ ಸೂರ್ಯ ಪಡೆ.<p><strong>ದುಬೈ</strong>: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದಿಂದಾಗಿ ಇರಾನ್, ಗಲ್ಫ್ ದೇಶಗಳ ಮೇಲೆ ಮತ್ತೆ ಅಪ್ರಚೋದಿತ ದಾಳಿಗಳನ್ನು ಮುಂದುವರೆಸಿದೆ.</p>.ಮತ್ತೆ ಗಲ್ಫ್ ದೇಶಗಳ ಮೇಲೆ ಇರಾನ್ ದಾಳಿ: ಬಹರೈನ್ನಲ್ಲಿ 32 ನಾಗರಿಕರಿಗೆ ಗಾಯ!.<p><strong>ಬೆಂಗಳೂರು:</strong> ಮಹದೇವಪುರದ ಕಿಮ್ಸ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ವಿಭಾಗದ ಉದ್ಘಾಟನೆಗೆ ಭಾನುವಾರ ಬಂದಿದ್ದ ಟಾಲಿವುಡ್ ನಟ ಜೂನಿಯರ್ ಎನ್ಟಿಆರ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.</p>.ಜೂನಿಯರ್ ಎನ್ಟಿಆರ್ ನೋಡಲು ಮುಗಿಬಿದ್ದ ಅಭಿಮಾನಿಗಳ ಚದುರಿಸಲು ಲಘು ಲಾಠಿ ಪ್ರಹಾರ.<p><strong>ಕಾಠ್ಮಂಡು:</strong> ನೇಪಾಳದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಾಲೇಂದ್ರ ಶಾ ಅವರ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್ಎಸ್ಪಿ)ವು ಪ್ರಚಂಡ ಗೆಲುವು ಸಾಧಿಸಿದೆ. ಅಲ್ಲದೆ ನೇಪಾಳದಲ್ಲಿ ನೂತನ ಸರ್ಕಾರ ರಚಿಸಲು ಸಿದ್ಧವಾಗಿದೆ.</p> .ನೇಪಾಳ ಚುನಾವಣೆ: ಬಾಲೇಂದ್ರ ಶಾ ಅವರ ಆರ್ಎಸ್ಪಿಗೆ ಪ್ರಚಂಡ ಗೆಲುವು.<p><strong>ಬೆಂಗಳೂರು:</strong> ವಿಧಾನಮಂಡಲದ ಉಭಯ ಸದನಗಳಲ್ಲಿ ಸೋಮವಾರದಿಂದ ಬಜೆಟ್ ಮೇಲಿನ ಚರ್ಚೆ ಆರಂಭವಾಗಲಿದೆ. ಮಾರ್ಚ್ 27ರವರೆಗೆ ಅಧಿವೇಶನ ನಡೆಯಲಿದೆ.</p>.ವಿಧಾನ ಮಂಡಲ ಅಧಿವೇಶನ: ಇಂದಿನಿಂದ ಬಜೆಟ್ ಮೇಲೆ ಚರ್ಚೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>