ರಾಂಚಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ನ ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್ ಮತ್ತು ಇತರ ಕೆಲವರ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಾಂಚಿ ಮತ್ತು ರಾಜ್ಯದ ವಿವಿಧೆಡೆ ಸುಮಾರು 17ರಿಂದ 18 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
36 ವರ್ಷದ ಕಾಂಗ್ರೆಸ್ ನಾಯಕಿ ಅಂಬಾ ಪ್ರಸಾದ್, ಹಜಾರಿಬಾಗ್ ಜಲ್ಲೆಯ ಬಢಕಗಾಂವ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಅಕ್ರಮ ಮರಳು ಗಣಿಗಾರಿಕೆ, ಸುಲಿಗೆ ಮತ್ತು ಇತರೆ ಅಪರಾಧಗಳಿಗೆ ಸಂಬಂಧಿಸಿದಂತೆ ದಾಖಲಾದ ಎಫ್ಐಆರ್ಗಳ ಆಧಾರದಲ್ಲಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಅಡಿಯಲ್ಲಿ ಇ.ಡಿ ವಿಚಾರಣೆ ನಡೆಸುತ್ತಿದೆ.