<p><strong>ನವದೆಹಲಿ:</strong> ‘ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಆರೋಪಿ ಸುಕೇಶ್ ಚಂದ್ರಶೇಖರ್ ವಿರುದ್ಧದ ಪ್ರಕರಣದಲ್ಲಿ ಇಸಿಐಆರ್ (ಎಫ್ಐಆರ್ಗೆ ಸಮ) ರದ್ದುಗೊಳಿಸಲು ಕೋರಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಲ್ಲಿಸಿದ್ದ ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p><p>ನ್ಯಾ. ದೀಪಾಂಕರ್ ದತ್ತಾ ಮತ್ತು ನ್ಯಾ. ಅಗಸ್ಟಿನ್ ಜಾರ್ಜ್ ಮಾಸಿ ಅವರಿದ್ದ ಪೀಠದ ಎದುರು ಜಾಕ್ವಲಿನ್ ಫರ್ನಾಂಡಿಸ್ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು.</p><p>ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿದೆ. ಇದನ್ನು ರದ್ದುಗೊಳಿಸುವಂತೆ ಕೋರಿ ಜಾಕ್ವೆಲಿನ್ ಅವರು ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಹೈಕೋರ್ಟ್ ಆದೇಶವನ್ನು ಜಾಕ್ವಲಿನ್ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು.</p><p>ಸುಕೇಶ್ ಚಂದ್ರಶೇಖರ್ ವಿರುದ್ಧ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವಲಿನ್ ಆರೋಪಿಯಾಗಿದ್ದಾರೆ. ತನಿಖೆಯ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಇತ್ತೀಚೆಗೆ ಹಾಜರಾಗಿದ್ದರು. </p><p>ರ್ಯಾನ್ಬಾಕ್ಸಿಯ ಮಾಜಿ ಪ್ರವರ್ತಕರಾದ ಶಿವಿಂದರ್ ಸಿಂಗ್ ಮತ್ತು ಮಲ್ವಿಂದರ್ ಸಿಂಗ್ ಅವರ ಪತ್ನಿಯರಿಗೆ ₹200 ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಸುಕೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಆರೋಪಿ ಸುಕೇಶ್ ಚಂದ್ರಶೇಖರ್ ವಿರುದ್ಧದ ಪ್ರಕರಣದಲ್ಲಿ ಇಸಿಐಆರ್ (ಎಫ್ಐಆರ್ಗೆ ಸಮ) ರದ್ದುಗೊಳಿಸಲು ಕೋರಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಲ್ಲಿಸಿದ್ದ ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p><p>ನ್ಯಾ. ದೀಪಾಂಕರ್ ದತ್ತಾ ಮತ್ತು ನ್ಯಾ. ಅಗಸ್ಟಿನ್ ಜಾರ್ಜ್ ಮಾಸಿ ಅವರಿದ್ದ ಪೀಠದ ಎದುರು ಜಾಕ್ವಲಿನ್ ಫರ್ನಾಂಡಿಸ್ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು.</p><p>ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿದೆ. ಇದನ್ನು ರದ್ದುಗೊಳಿಸುವಂತೆ ಕೋರಿ ಜಾಕ್ವೆಲಿನ್ ಅವರು ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಹೈಕೋರ್ಟ್ ಆದೇಶವನ್ನು ಜಾಕ್ವಲಿನ್ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು.</p><p>ಸುಕೇಶ್ ಚಂದ್ರಶೇಖರ್ ವಿರುದ್ಧ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವಲಿನ್ ಆರೋಪಿಯಾಗಿದ್ದಾರೆ. ತನಿಖೆಯ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಇತ್ತೀಚೆಗೆ ಹಾಜರಾಗಿದ್ದರು. </p><p>ರ್ಯಾನ್ಬಾಕ್ಸಿಯ ಮಾಜಿ ಪ್ರವರ್ತಕರಾದ ಶಿವಿಂದರ್ ಸಿಂಗ್ ಮತ್ತು ಮಲ್ವಿಂದರ್ ಸಿಂಗ್ ಅವರ ಪತ್ನಿಯರಿಗೆ ₹200 ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಸುಕೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>