ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯದಕುರಿತು ಗಮನ ಸೆಳೆದಿರುವ ಅವರು, ‘ಭಾರತದ ಯುವಜನತೆ ಹೆಚ್ಚಿನ ಪ್ರಮಾಣದಲ್ಲಿ ಔದ್ಯೋಗಿಕ ರಂಗದಲ್ಲಿ ಗಣನೀಯ ಪ್ರಮಾಣದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆರ್ಥಿಕ ಸಾಕ್ಷರತೆಯು ಅವರಲ್ಲಿ ಭವಿಷ್ಯದ ಹಣಕಾಸು ನಿರ್ವಹಣೆಗೆ ಅನುಕೂಲ ಕಲ್ಪಿಸುವುದರ ಜೊತೆಗೆ, ಸಾಲದ ಸುಳಿ, ನಕಲಿ, ಹಣಕಾಸು ವಂಚನೆಗೆ ಒಳಗಾಗುವುದನ್ನು ತಪ್ಪಿಸಲು ಸಹಕಾರಿಯಾಗಲಿದೆ’ ಎಂದರು.