ರೀಮಲ್ ಪರಿಣಾಮ ಹವಾಮಾನ ಇಲಾಖೆ ಮುನ್ಸೂಚನೆಯ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿ ಇಂದಿನಿಂದಲೇ ಕೇರಳ ಕರಾವಳಿ ಮತ್ತು ಈಶಾನ್ಯದ ಕೆಲವು ಭಾಗಗಳಲ್ಲಿ ಮುಂಗಾರು ಪ್ರವೇಶಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಮೂಲಕ ಸಾಗಿದ ರೀಮಲ್ ಚಂಡಮಾರುತ ಮಾನ್ಸೂನ್ ಹರಿವನ್ನು ಬಂಗಾಳ ಕೊಲ್ಲಿಗೆ ಎಳೆದಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿಗಳು ಹೇಳಿದ್ದಾರೆ. ಇದರ ಪರಿಣಾಮ ಈಶಾನ್ಯ ರಾಜ್ಯಗಳಲ್ಲಿ ಮುಂಗಾರು 5 ದಿನ ಮುಂಚಿತವಾಗಿಯೇ ಪ್ರವೇಶ ಪಡೆಯಲಿದೆ ಎಂದು ಅವರು ಹೇಳಿದ್ದಾರೆ.
ಕೇರಳ ಕರಾವಳಿ ಸೇರಿದಂತೆ ಅರುಣಾಚಲ ಪ್ರದೇಶ, ತ್ರಿಪುರಾ, ನಾಗಾಲ್ಯಾಂಡ್, ಮೇಘಾಲಯ, ಮಿಜೋರಾಂ, ಮಣಿಪುರ ಮತ್ತು ಅಸ್ಸಾಂನಲ್ಲಿ ಮಳೆಯಾಗಲಿದೆ.