<p><strong>ತಿರುಪತಿ</strong> <strong>(ಆಂಧ್ರ ಪ್ರದೇಶ)</strong>: ತಿರುಪತಿಯ ವೆಂಕಟೇಶ್ವರ ದೇವಾಲಯಕ್ಕೆ ಫೆಬ್ರುವರಿ ತಿಂಗಳಲ್ಲಿ 19 ಲಕ್ಷ ಭಕ್ತರು ಭೇಟಿ ನೀಡಿದ್ದು, ಕಾಣಿಕೆ ರೂಪದಲ್ಲಿ ₹112 ಕೋಟಿ ಸಂದಾಯವಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಶನಿವಾರ ತಿಳಿಸಿದೆ.</p>.<p>ಫೆಬ್ರುವರಿ ತಿಂಗಳಲ್ಲಿ 95 ಲಕ್ಷಕ್ಕೂ ಹೆಚ್ಚು ಲಡ್ಡುಗಳನ್ನು ಮಾರಲಾಗಿದೆ ಎಂದು ಟಿಟಿಡಿ ಕಾರ್ಯನಿರ್ವಹಣಾ ಅಧಿಕಾರಿ (ಇಒ) ಎ.ವಿ.ಧರ್ಮ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ತಿರುಮಲದಲ್ಲಿ ಲಭ್ಯವಿರುವ 7,500 ಕೊಠಡಿಗಳಲ್ಲಿ ಶೇ 85ರಷ್ಟನ್ನು ಸಾಮಾನ್ಯ ಭಕ್ತರಿಗೆ ಹಂಚಲು ನಿರ್ಧರಿಸಲಾಗಿದೆ. ಇದು ಸುಮಾರು 45,000 ಭಕ್ತರಿಗೆ ಸಾಕಾಗುತ್ತದೆ ಎಂದು ರೆಡ್ಡಿ ಹೇಳಿದ್ದಾರೆ. </p>.<p>ಇದಕ್ಕಿಂತ ಹೆಚ್ಚಿನ ವಸತಿ ಸೌಕರ್ಯವನ್ನು ತಿರುಮಲ್ಲದಲ್ಲಿ ಕಲ್ಪಿಸಲು ಸಾಧ್ಯವಿಲ್ಲ. ಹೀಗಾಗಿ ಉಳಿದವರು ತಿರುಪತಿಯಲ್ಲಿ ಉಳಿದುಕೊಳ್ಳುವಂತೆ ಅವರು ಭಕ್ತರಿಗೆ ಸಲಹೆ ನೀಡಿದ್ದಾರೆ.</p>.<p>‘ಶ್ರೀ ಪದ್ಮಾವತಿ ಮಕ್ಕಳ ಹೃದಯ ಕೇಂದ್ರ’ವು ಎರಡು ವರ್ಷಗಳಲ್ಲಿ 12 ಹೃದಯ ಕಸಿ ಮತ್ತು 2,485 ಹೃದಯ ಶಸ್ತ್ರಚಿಕಿತ್ಸೆ ಮಾಡಿದೆ ಎಂದು ಇ.ಒ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ</strong> <strong>(ಆಂಧ್ರ ಪ್ರದೇಶ)</strong>: ತಿರುಪತಿಯ ವೆಂಕಟೇಶ್ವರ ದೇವಾಲಯಕ್ಕೆ ಫೆಬ್ರುವರಿ ತಿಂಗಳಲ್ಲಿ 19 ಲಕ್ಷ ಭಕ್ತರು ಭೇಟಿ ನೀಡಿದ್ದು, ಕಾಣಿಕೆ ರೂಪದಲ್ಲಿ ₹112 ಕೋಟಿ ಸಂದಾಯವಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಶನಿವಾರ ತಿಳಿಸಿದೆ.</p>.<p>ಫೆಬ್ರುವರಿ ತಿಂಗಳಲ್ಲಿ 95 ಲಕ್ಷಕ್ಕೂ ಹೆಚ್ಚು ಲಡ್ಡುಗಳನ್ನು ಮಾರಲಾಗಿದೆ ಎಂದು ಟಿಟಿಡಿ ಕಾರ್ಯನಿರ್ವಹಣಾ ಅಧಿಕಾರಿ (ಇಒ) ಎ.ವಿ.ಧರ್ಮ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ತಿರುಮಲದಲ್ಲಿ ಲಭ್ಯವಿರುವ 7,500 ಕೊಠಡಿಗಳಲ್ಲಿ ಶೇ 85ರಷ್ಟನ್ನು ಸಾಮಾನ್ಯ ಭಕ್ತರಿಗೆ ಹಂಚಲು ನಿರ್ಧರಿಸಲಾಗಿದೆ. ಇದು ಸುಮಾರು 45,000 ಭಕ್ತರಿಗೆ ಸಾಕಾಗುತ್ತದೆ ಎಂದು ರೆಡ್ಡಿ ಹೇಳಿದ್ದಾರೆ. </p>.<p>ಇದಕ್ಕಿಂತ ಹೆಚ್ಚಿನ ವಸತಿ ಸೌಕರ್ಯವನ್ನು ತಿರುಮಲ್ಲದಲ್ಲಿ ಕಲ್ಪಿಸಲು ಸಾಧ್ಯವಿಲ್ಲ. ಹೀಗಾಗಿ ಉಳಿದವರು ತಿರುಪತಿಯಲ್ಲಿ ಉಳಿದುಕೊಳ್ಳುವಂತೆ ಅವರು ಭಕ್ತರಿಗೆ ಸಲಹೆ ನೀಡಿದ್ದಾರೆ.</p>.<p>‘ಶ್ರೀ ಪದ್ಮಾವತಿ ಮಕ್ಕಳ ಹೃದಯ ಕೇಂದ್ರ’ವು ಎರಡು ವರ್ಷಗಳಲ್ಲಿ 12 ಹೃದಯ ಕಸಿ ಮತ್ತು 2,485 ಹೃದಯ ಶಸ್ತ್ರಚಿಕಿತ್ಸೆ ಮಾಡಿದೆ ಎಂದು ಇ.ಒ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>