<p><strong>ಮುಂಬೈ</strong>: ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ನಗರದ ಹಲವು ಪ್ರದೇಶಗಳಲ್ಲಿ 20 ಸೆಂ.ಮೀ.ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. </p><p>ಕಳೆದ 24 ಗಂಟೆಗಳಲ್ಲಿ ಮುಂಬೈನ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದು, ಇಂದು (ಸೋಮವಾರ) ಬೆಳಗ್ಗೆ 8 ಗಂಟೆಯವರೆಗೆ ಮಳೆ ಪ್ರಮಾಣ ಹೆಚ್ಚಾಗಿತ್ತು. ಭಾರಿ ಮಳೆಯಿಂದಾಗಿ ರೈಲು ಸಂಚಾರದಲ್ಲೂ ವ್ಯತ್ಯಯವಾಗಿತ್ತು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.ಚಿಕ್ಕಬಳ್ಳಾಪುರಕ್ಕೆ ಶಾಶ್ವತ ನೀರಾವರಿ ಯೋಜನೆ: ಸಂಸದ ಕೆ.ಸುಧಾಕರ್ ಆಗ್ರಹ.ತುಂಗಭದ್ರಾ: 3 ಕ್ರಸ್ಟ್ಗೇಟ್ ಮೂಲಕ ನದಿಗೆ ನೀರು; ಸುರಕ್ಷಿತವಾಗಿರಲು ಮಂಡಳಿ ಸೂಚನೆ. <p>ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಪ್ರದೇಶಗಳಲ್ಲಿ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಮೂರು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ಮನ್ಖುರ್ದ್ನ ಟ್ರಾಂಬೆಯಲ್ಲಿ 24.1ಸೆಂ.ಮೀ. ಅತ್ಯಧಿಕ ಮಳೆ ದಾಖಲಾಗಿದೆ. ಮನ್ಖುರ್ದ್ ನೂತನ್ ವಿದ್ಯಾಮಂದಿರದಲ್ಲಿ 22.4 ಸೆಂ.ಮೀ. ವಡಾಲಾದ ನಾಡಕರ್ಣಿ ಪಾರ್ಕ್ನಲ್ಲಿ 22.3 ಸೆಂ.ಮೀ. ಮತ್ತು ಭಾಂಡಪ್ನ 'ಎನ್' ವಾರ್ಡ್ನಲ್ಲಿ 21.5 ಸೆಂ.ಮೀ. ಮಳೆ ಪ್ರಮಾಣ ದಾಖಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ( ಬಿಎಂಸಿ) ಹೇಳಿದೆ.</p>.ಹಿಂಸಾಚಾರ ಪೀಡಿತ ಬಾಂಗ್ಲಾದೇಶದಿಂದ 14 ವೈದ್ಯಕೀಯ ವಿದ್ಯಾರ್ಥಿಗಳು ತವರಿಗೆ.ಕಾಲು ಕೆರೆದು ಜಗಳಕ್ಕೆ ಬರಬೇಡಿ: ತಮಿಳುನಾಡು ಸಿಎಂಗೆ ಎಚ್ಡಿಕೆ ಕಿವಿಮಾತು. <p>ಮಲಬಾರ್ ಮತ್ತು ಮುಲುಂಡ್ 3.4 ಸೆಂ.ಮೀ. ಮಳೆಯಾಗಿದ್ದು, ಭಾಂಡಪ್ 2.9 ಸೆಂ.ಮೀ, ಪೂರ್ವ ವಡಾಲಾದಲ್ಲಿ 2.4 ಸೆಂ.ಮೀ. ಮತ್ತು ವರ್ಸೋವಾದಲ್ಲಿ 2 ಸೆಂ.ಮೀ. ಮಳೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಮಹಾರಾಷ್ಟ್ರ: ಸಿಎಂ ಏಕನಾಥ ಶಿಂದೆ ಭೇಟಿಯಾದ ಎನ್ಸಿಪಿ ನಾಯಕ ಶರದ್ ಪವಾರ್.ಕೇರಳ ಸರ್ಕಾರದ ವಿದೇಶಾಂಗ ಕಾರ್ಯದರ್ಶಿ ಹುದ್ದೆ ವಿವಾದ: ಲೋಕಸಭೆಯಲ್ಲಿ ಪ್ರಸ್ತಾಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ನಗರದ ಹಲವು ಪ್ರದೇಶಗಳಲ್ಲಿ 20 ಸೆಂ.ಮೀ.ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. </p><p>ಕಳೆದ 24 ಗಂಟೆಗಳಲ್ಲಿ ಮುಂಬೈನ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದು, ಇಂದು (ಸೋಮವಾರ) ಬೆಳಗ್ಗೆ 8 ಗಂಟೆಯವರೆಗೆ ಮಳೆ ಪ್ರಮಾಣ ಹೆಚ್ಚಾಗಿತ್ತು. ಭಾರಿ ಮಳೆಯಿಂದಾಗಿ ರೈಲು ಸಂಚಾರದಲ್ಲೂ ವ್ಯತ್ಯಯವಾಗಿತ್ತು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.ಚಿಕ್ಕಬಳ್ಳಾಪುರಕ್ಕೆ ಶಾಶ್ವತ ನೀರಾವರಿ ಯೋಜನೆ: ಸಂಸದ ಕೆ.ಸುಧಾಕರ್ ಆಗ್ರಹ.ತುಂಗಭದ್ರಾ: 3 ಕ್ರಸ್ಟ್ಗೇಟ್ ಮೂಲಕ ನದಿಗೆ ನೀರು; ಸುರಕ್ಷಿತವಾಗಿರಲು ಮಂಡಳಿ ಸೂಚನೆ. <p>ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಪ್ರದೇಶಗಳಲ್ಲಿ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಮೂರು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ಮನ್ಖುರ್ದ್ನ ಟ್ರಾಂಬೆಯಲ್ಲಿ 24.1ಸೆಂ.ಮೀ. ಅತ್ಯಧಿಕ ಮಳೆ ದಾಖಲಾಗಿದೆ. ಮನ್ಖುರ್ದ್ ನೂತನ್ ವಿದ್ಯಾಮಂದಿರದಲ್ಲಿ 22.4 ಸೆಂ.ಮೀ. ವಡಾಲಾದ ನಾಡಕರ್ಣಿ ಪಾರ್ಕ್ನಲ್ಲಿ 22.3 ಸೆಂ.ಮೀ. ಮತ್ತು ಭಾಂಡಪ್ನ 'ಎನ್' ವಾರ್ಡ್ನಲ್ಲಿ 21.5 ಸೆಂ.ಮೀ. ಮಳೆ ಪ್ರಮಾಣ ದಾಖಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ( ಬಿಎಂಸಿ) ಹೇಳಿದೆ.</p>.ಹಿಂಸಾಚಾರ ಪೀಡಿತ ಬಾಂಗ್ಲಾದೇಶದಿಂದ 14 ವೈದ್ಯಕೀಯ ವಿದ್ಯಾರ್ಥಿಗಳು ತವರಿಗೆ.ಕಾಲು ಕೆರೆದು ಜಗಳಕ್ಕೆ ಬರಬೇಡಿ: ತಮಿಳುನಾಡು ಸಿಎಂಗೆ ಎಚ್ಡಿಕೆ ಕಿವಿಮಾತು. <p>ಮಲಬಾರ್ ಮತ್ತು ಮುಲುಂಡ್ 3.4 ಸೆಂ.ಮೀ. ಮಳೆಯಾಗಿದ್ದು, ಭಾಂಡಪ್ 2.9 ಸೆಂ.ಮೀ, ಪೂರ್ವ ವಡಾಲಾದಲ್ಲಿ 2.4 ಸೆಂ.ಮೀ. ಮತ್ತು ವರ್ಸೋವಾದಲ್ಲಿ 2 ಸೆಂ.ಮೀ. ಮಳೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಮಹಾರಾಷ್ಟ್ರ: ಸಿಎಂ ಏಕನಾಥ ಶಿಂದೆ ಭೇಟಿಯಾದ ಎನ್ಸಿಪಿ ನಾಯಕ ಶರದ್ ಪವಾರ್.ಕೇರಳ ಸರ್ಕಾರದ ವಿದೇಶಾಂಗ ಕಾರ್ಯದರ್ಶಿ ಹುದ್ದೆ ವಿವಾದ: ಲೋಕಸಭೆಯಲ್ಲಿ ಪ್ರಸ್ತಾಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>