<p><strong>ನೂಹ್</strong>: ಹರಿಯಾಣದ ನೂಹ್ನಲ್ಲಿ ಸಮುದಾಯಗಳ ನಡುವಿನ ಘರ್ಷಣೆಯಿಂದ ಜುಲೈನಲ್ಲಿ ಅರ್ಧಕ್ಕೆ ನಿಂತಿದ್ದ ’ಬ್ರಿಜ್ ಮಂಡಲ್ ಶೋಭಾ ಯಾತ್ರೆ’ಯನ್ನು ಸೋಮವಾರ (ಆಗಸ್ಟ್ 28) ನಡೆಸುವುದಾಗಿ ಸರ್ವ ಜಾತೀಯ ಹಿಂದೂ ಮಹಾಪಂಚಾಯತ್ ಹೇಳಿದೆ. </p><p>ಅಧಿಕಾರಿಗಳು ಅನುಮತಿ ನೀಡದಿದ್ದರೂ ಮೆರವಣಿಗೆ ನಡೆಸಲು ಹಿಂದೂ ಪರಿಷತ್ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನೂಹ್ ಸೇರಿ ಹಲವು ಪ್ರದೇಶಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಒದಗಿಸಲಾಗಿದೆ. </p><p>ಸೆಪ್ಟೆಂಬರ್ 3 ರಿಂದ 7ರವರೆಗೆ ನೂಹ್ನಲ್ಲಿ ಜಿ20 ಶೆರ್ಪಾ ಗುಂಪುಗಳ ಸಭೆ ಇರುವ ಹಿನ್ನೆಲೆಯಲ್ಲಿ ಯಾತ್ರೆ ನಡೆಸಲು ಅನುಮತಿ ನೀಡಲಾಗಿಲ್ಲ ಎಂದು ಹರಿಯಾಣ ಪೊಲೀಸ್ ಮಹಾನಿರ್ದೇಶಕ ಶತ್ರುಜಿತ್ ಕಪೂರ್ ತಿಳಿಸಿದ್ದಾರೆ.</p><p><strong>ಮುಂಜಾಗೃತಾ ಕ್ರಮವಾಗಿ ಬಿಗಿ ಬಂದೋಬಸ್ತ್</strong></p><p>ಅರೆಸೇನಾ ಪಡೆ ಮತ್ತು ಭದ್ರತಾ ಸಿಬ್ಬಂದಿಗೆ ರಾಜ್ಯದ ಒಳಗೆ ಮತ್ತು ಜಿಲ್ಲೆಗಳ ಗಡಿಗಳಲ್ಲಿ ಹದ್ದಿನಕಣ್ಣಿಡಲು ಸೂಚನೆ ನೀಡಲಾಗಿದೆ. </p><p>ಆಗಸ್ಟ್ 26 ರಿಂದ 28ರವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.</p><p>ಭದ್ರತೆಗಾಗಿ ನೂಹ್ನಲ್ಲಿ 1,900 ಹರಿಯಾಣ ಪೊಲೀಸ್ ಸಿಬ್ಬಂದಿ, 24 ಅರೆಸೇನಾ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲೆಗೆ ಪ್ರವೇಶಿಸುವ ಎಲ್ಲಾ ದಾರಿಗಳನ್ನು ಬಂದ್ ಮಾಡಲಾಗಿದ್ದು, ಹೊರಗಿನಿಂದ ಯಾರೂ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ. ದೇವಸ್ಥಾನಗಳನ್ನು ಬಂದ್ ಮಾಡಲಾಗಿದೆ ಎಂದು ಪೊಲೀಸ್ ವಕ್ತಾರರೊಬ್ಬರು ಮಾಹಿತಿ ನೀಡಿದ್ದಾರೆ.</p><p>ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತದಿಂದ ಶಿಕ್ಷಣ ಸಂಸ್ಥೆ, ಬ್ಯಾಂಕ್ಗಳನ್ನು ಬಂದ್ ಮಾಡಲಾಗಿದ್ದು, ಎಸ್ಎಂಎಸ್ ಸೇವೆಗಳನ್ನೂ ನಿರ್ಬಂಧಿಸಿದೆ. ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆಯನ್ನೂ ಹೇರಲಾಗಿದ್ದು ನಾಲ್ಕು ಅಥವಾ ಹೆಚ್ಚಿನ ಜನ ಗುಂಪು ಸೇರುವಂತಿಲ್ಲ ಎಂದು ಆದೇಶ ಹೊರಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೂಹ್</strong>: ಹರಿಯಾಣದ ನೂಹ್ನಲ್ಲಿ ಸಮುದಾಯಗಳ ನಡುವಿನ ಘರ್ಷಣೆಯಿಂದ ಜುಲೈನಲ್ಲಿ ಅರ್ಧಕ್ಕೆ ನಿಂತಿದ್ದ ’ಬ್ರಿಜ್ ಮಂಡಲ್ ಶೋಭಾ ಯಾತ್ರೆ’ಯನ್ನು ಸೋಮವಾರ (ಆಗಸ್ಟ್ 28) ನಡೆಸುವುದಾಗಿ ಸರ್ವ ಜಾತೀಯ ಹಿಂದೂ ಮಹಾಪಂಚಾಯತ್ ಹೇಳಿದೆ. </p><p>ಅಧಿಕಾರಿಗಳು ಅನುಮತಿ ನೀಡದಿದ್ದರೂ ಮೆರವಣಿಗೆ ನಡೆಸಲು ಹಿಂದೂ ಪರಿಷತ್ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನೂಹ್ ಸೇರಿ ಹಲವು ಪ್ರದೇಶಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಒದಗಿಸಲಾಗಿದೆ. </p><p>ಸೆಪ್ಟೆಂಬರ್ 3 ರಿಂದ 7ರವರೆಗೆ ನೂಹ್ನಲ್ಲಿ ಜಿ20 ಶೆರ್ಪಾ ಗುಂಪುಗಳ ಸಭೆ ಇರುವ ಹಿನ್ನೆಲೆಯಲ್ಲಿ ಯಾತ್ರೆ ನಡೆಸಲು ಅನುಮತಿ ನೀಡಲಾಗಿಲ್ಲ ಎಂದು ಹರಿಯಾಣ ಪೊಲೀಸ್ ಮಹಾನಿರ್ದೇಶಕ ಶತ್ರುಜಿತ್ ಕಪೂರ್ ತಿಳಿಸಿದ್ದಾರೆ.</p><p><strong>ಮುಂಜಾಗೃತಾ ಕ್ರಮವಾಗಿ ಬಿಗಿ ಬಂದೋಬಸ್ತ್</strong></p><p>ಅರೆಸೇನಾ ಪಡೆ ಮತ್ತು ಭದ್ರತಾ ಸಿಬ್ಬಂದಿಗೆ ರಾಜ್ಯದ ಒಳಗೆ ಮತ್ತು ಜಿಲ್ಲೆಗಳ ಗಡಿಗಳಲ್ಲಿ ಹದ್ದಿನಕಣ್ಣಿಡಲು ಸೂಚನೆ ನೀಡಲಾಗಿದೆ. </p><p>ಆಗಸ್ಟ್ 26 ರಿಂದ 28ರವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.</p><p>ಭದ್ರತೆಗಾಗಿ ನೂಹ್ನಲ್ಲಿ 1,900 ಹರಿಯಾಣ ಪೊಲೀಸ್ ಸಿಬ್ಬಂದಿ, 24 ಅರೆಸೇನಾ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲೆಗೆ ಪ್ರವೇಶಿಸುವ ಎಲ್ಲಾ ದಾರಿಗಳನ್ನು ಬಂದ್ ಮಾಡಲಾಗಿದ್ದು, ಹೊರಗಿನಿಂದ ಯಾರೂ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ. ದೇವಸ್ಥಾನಗಳನ್ನು ಬಂದ್ ಮಾಡಲಾಗಿದೆ ಎಂದು ಪೊಲೀಸ್ ವಕ್ತಾರರೊಬ್ಬರು ಮಾಹಿತಿ ನೀಡಿದ್ದಾರೆ.</p><p>ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತದಿಂದ ಶಿಕ್ಷಣ ಸಂಸ್ಥೆ, ಬ್ಯಾಂಕ್ಗಳನ್ನು ಬಂದ್ ಮಾಡಲಾಗಿದ್ದು, ಎಸ್ಎಂಎಸ್ ಸೇವೆಗಳನ್ನೂ ನಿರ್ಬಂಧಿಸಿದೆ. ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆಯನ್ನೂ ಹೇರಲಾಗಿದ್ದು ನಾಲ್ಕು ಅಥವಾ ಹೆಚ್ಚಿನ ಜನ ಗುಂಪು ಸೇರುವಂತಿಲ್ಲ ಎಂದು ಆದೇಶ ಹೊರಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>