ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಲಕ ಹಂಚಿಕೊಂಡು ಭಾವೈಕ್ಯತೆ ಸಾರಿದ ಕೇರಳದ ದೇಗುಲ, ಮಸೀದಿ

ಅರ್ಜುನ್‌ ರಘುನಾಥ್‌
Published 28 ಮಾರ್ಚ್ 2024, 13:21 IST
Last Updated 28 ಮಾರ್ಚ್ 2024, 13:21 IST
ಅಕ್ಷರ ಗಾತ್ರ

ತಿರುವನಂತಪುರ: ದೇವಸ್ಥಾನ ಮತ್ತು ಮಸೀದಿಯ ಹೆಸರನ್ನು ಒಂದೇ ನಾಮಫಲಕದಲ್ಲಿ ಛಾಪಿಸುವ ಮೂಲಕ ಕೇರಳದ ತಿರುವನಂತಪುರದಲ್ಲಿ ಕೋಮು ಸೌಹಾರ್ದತೆ ಸಾರಲಾಗಿದೆ.

ಸದ್ಯ ಇದರ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ರಸ್ತೆಯೊಂದರ ಆರಂಭದಲ್ಲಿ ನಿರ್ಮಿಸಿದ ದೊಡ್ಡ ಕಮಾನಿನ ಮೇಲೆ ಅರ್ಧ ಭಾಗದಲ್ಲಿ ಮೆಲೆಕುಟ್ಟಿಮೂಡು ಶ್ರೀ ಚಾಮುಂಡೇಶ್ವರಿ ದೇವಾಲಯ ಎಂದು ಬರೆಯಲಾಗಿದೆ, ಇನ್ನೊಂದು ಭಾಗಕ್ಕೆ ವೆಂಜರಮೂಡು ಪರಯಿಲ್‌ ಮಸೀದಿ ಎಂದು ಬರೆಯಲಾಗಿದೆ.

ದೇವಸ್ಥಾನದ ಜೀರ್ಣೋದ್ಧಾರದ ಬಳಿಕ ಆಡಳಿತಮಂಡಳಿಯು ದೇವಾಲಯಕ್ಕೆ ಬರುವ ದಾರಿಯನ್ನು ಜನ ಗುರುತಿಸುವಂತೆ ಹೇಗೆ ಮಾಡುವುದು ಎಂದು ಯೋಚಿಸಿತ್ತು, ಅದಾಗಲೇ ಮಸೀದಿಯ ಕಮಾನು ಹಾಕಲಾಗಿತ್ತು. ಹೀಗಾಗಿ ದೇವಾಲಯದ ಆಡಳಿತ ಮಂಡಳಿಯ ಕೋರಿಕೆ ಮೇರೆಗೆ ಮಸೀದಿಯು ತನ್ನ ಕಮಾನಿನಲ್ಲಿ ಅರ್ಧಭಾಗವನ್ನು ನೀಡಲು ಅನುಮತಿಸಿತು.

ಕಮಾನಿನ ಮೇಲೆ ಓಂ, ನಕ್ಷತ್ರ ಮತ್ತು ಅರ್ಧಚಂದ್ರನ ಚಿಹ್ನೆಯನ್ನು ಬರೆಯಲಾಗಿದೆ.

ಸದ್ಯ ಇದರ ಫೋಟೊಗಳನ್ನು ಕಾಂಗ್ರೆಸ್‌, ಸಿಪಿಐ(ಎಂ), ಭಾರತೀಯ ಮುಸ್ಲಿಂ ಒಕ್ಕೂಟದ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಕೇರಳದಲ್ಲಿ ಜಾತ್ಯತೀತ ಮತ್ತು ಕೋಮು ಸೌಹಾರ್ದತೆ ಇದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT