ಈ ಕೃತ್ಯದ ಹಿಂದೆ ಪಿತೂರಿ ಇರುವುದಾಗಿ ಆರೋಪಿಸಿದ ಮೊಹಮ್ಮದ್ ಎಜಾಜ್, ನಂತರ ಕಾಶಿ ವಿಶ್ವನಾಥ ದೇವಸ್ಥಾನದ ಕಚೇರಿಗೆ ಆಕ್ಷೇಪ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಆಕ್ಷೇಪ ಸಲ್ಲಿಸುವ ಪ್ರಯತ್ನವನ್ನು ನಡೆಸಿದ್ದೆ. ಆದರೆ ಮ್ಯಾಜಿಸ್ಟ್ರೇಟ್ ಅವರನ್ನು ಭೇಟಿಯಾಗಲಿಲ್ಲ. ಕೊನೆಗೆ ಆಡಳಿತ ಮಂಡಳಿ ಅರ್ಥೈಸಿಕೊಂಡು, ಮಸೀದಿಗೆ ಪುನಃ ಬಿಳಿ ಬಣ್ಣವನ್ನು ಬಳಿದಿದೆ ಎಂದು ಮೊಹಮ್ಮದ್ ಎಜಾಜ್ ಹೇಳಿದ್ದಾರೆ.