<p><strong>ಕೊಚ್ಚಿ:</strong> ಕೇರಳದ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮನೆಯೊಂದರ ಗೋಡೆ ಕುಸಿದು ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ.</p>.<p>ಪಾಲಕ್ಕಾಡ್ ಜಿಲ್ಲೆಯ ವಡಕ್ಕಂಚೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾಕಾಡ್ನಲ್ಲಿ ಈ ಘಟನೆ ವರದಿಯಾಗಿದೆ. ಸುಲೋಚನಾ (53) ಮತ್ತು ಆಕೆಯ ಮಗ ರಂಜಿತ್ (33) ಘಟನೆಯಲ್ಲಿ ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸೋಮವಾರ ರಾತ್ರಿ ಮಲಗಿದ್ದ ವೇಳೆ ಮನೆಯ ಗೋಡೆ ಕುಸಿದು ಬಿದ್ದು ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. </p><p>ರಾಜ್ಯದ ಮಧ್ಯ ಮತ್ತು ಉತ್ತರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಬಿರುಗಾಳಿಯಿಂದ ಮರಗಳು ಉರುಳಿವೆ. ಕೆಲವೆಡೆ ಭೂಕುಸಿತ ಘಟನೆಗಳು ವರದಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಹೆಚ್ಚುವರಿ ನೀರನ್ನು ಹೊರಬಿಡಲು ಮಲಂಕರ ಮತ್ತು ಕಲ್ಲರಕುಟ್ಟಿ ಅಣೆಕಟ್ಟುಗಳು ಗೇಟ್ ತೆರೆಯಲಾಗಿದ್ದು, ಪೆರಿಯಾರ್, ಮುತಿರಪ್ಪುಳ, ತೊಡುಪುಳ ಮತ್ತು ಮುವಾಟ್ಟುಪುಳ ನದಿಗಳ ತೀರದಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದ್ದಾರೆ.</p>.ಕೇರಳ, ಮುಂಬೈನಲ್ಲಿ ಭಾರಿ ಮಳೆ: ಕೆಲವೆಡೆ ಶಾಲಾ, ಕಾಲೇಜುಗಳಿಗೆ ರಜೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಕೇರಳದ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮನೆಯೊಂದರ ಗೋಡೆ ಕುಸಿದು ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ.</p>.<p>ಪಾಲಕ್ಕಾಡ್ ಜಿಲ್ಲೆಯ ವಡಕ್ಕಂಚೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾಕಾಡ್ನಲ್ಲಿ ಈ ಘಟನೆ ವರದಿಯಾಗಿದೆ. ಸುಲೋಚನಾ (53) ಮತ್ತು ಆಕೆಯ ಮಗ ರಂಜಿತ್ (33) ಘಟನೆಯಲ್ಲಿ ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸೋಮವಾರ ರಾತ್ರಿ ಮಲಗಿದ್ದ ವೇಳೆ ಮನೆಯ ಗೋಡೆ ಕುಸಿದು ಬಿದ್ದು ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. </p><p>ರಾಜ್ಯದ ಮಧ್ಯ ಮತ್ತು ಉತ್ತರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಬಿರುಗಾಳಿಯಿಂದ ಮರಗಳು ಉರುಳಿವೆ. ಕೆಲವೆಡೆ ಭೂಕುಸಿತ ಘಟನೆಗಳು ವರದಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಹೆಚ್ಚುವರಿ ನೀರನ್ನು ಹೊರಬಿಡಲು ಮಲಂಕರ ಮತ್ತು ಕಲ್ಲರಕುಟ್ಟಿ ಅಣೆಕಟ್ಟುಗಳು ಗೇಟ್ ತೆರೆಯಲಾಗಿದ್ದು, ಪೆರಿಯಾರ್, ಮುತಿರಪ್ಪುಳ, ತೊಡುಪುಳ ಮತ್ತು ಮುವಾಟ್ಟುಪುಳ ನದಿಗಳ ತೀರದಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದ್ದಾರೆ.</p>.ಕೇರಳ, ಮುಂಬೈನಲ್ಲಿ ಭಾರಿ ಮಳೆ: ಕೆಲವೆಡೆ ಶಾಲಾ, ಕಾಲೇಜುಗಳಿಗೆ ರಜೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>