<p><strong>ಮುಂಬೈ</strong>: ತಾಯಿಯಾದವಳು ತನ್ನ ಮಕ್ಕಳಿಗೆ ಹೊಡೆಯಲು ಸಾಧ್ಯವಿಲ್ಲ ಎಂದು ಹೇಳಿರುವ ಬಾಂಬೆ ಹೈಕೋರ್ಟ್, ಹಲ್ಲೆ ಪ್ರಕರಣದಲ್ಲಿ 28 ವರ್ಷದ ಮಹಿಳೆಗೆ ಜಾಮೀನು ಮಂಜೂರು ಮಾಡಿದೆ.</p><p>ದೂರುದಾರ ತಂದೆ ಮತ್ತು ಆರೋಪಿ ತಾಯಿ ನಡುವಿನ ಜಗಳದಲ್ಲಿ ಮಗು ಬಲಿಪಶುವಾಗಿದೆ ಎಂದು ನ್ಯಾಯಮೂರ್ತಿ ಮಿಲಿಂದ್ ಜಾದವ್ ಅವರಿದ್ದ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.</p><p>ಬಾಲಕನ ವೈದ್ಯಕೀಯ ವರದಿಗಳು ಆತ ಮೂರ್ಛೆರೋಗದಿಂದ ಬಳಲುತ್ತಿರುವುದು ತೋರಿಸುತ್ತಿದೆ. ಅಪೌಷ್ಟಿಕತೆ ಮತ್ತು ರಕ್ತಹೀನತೆಯಿಂದಲೂ ಬಳಲುತ್ತಿದ್ದಾನೆ. ಮಗುವಿನ ಆರೈಕೆಗೆ ಆರೋಪಿ ತಾಯಿ ಹೆಣಗಾಡುತ್ತಿರುವುದು ಇದರಿಂದ ತಿಳಿಯುತ್ತದೆ ಎಂದು ಪೀಠ ಹೇಳಿದೆ.</p><p>ವಿಚ್ಛೇದಿತ ಪತ್ನಿ ಮತ್ತು ಆಕೆಯ ಸಂಗಾತಿ ನನ್ನ ಮಗನಿಗೆ ದೈಹಿಕವಾಗಿ ಹಲ್ಲೆ ಮಾಡುತ್ತಿದ್ದು, ಒಂದು ಬಾರಿ ಕೊಲ್ಲಲ್ಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಮಗುವಿನ ಜೈವಿಕ ತಂದೆ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು 2023 ಮಾರ್ಚ್ನಲ್ಲಿ ಮಹಿಳೆಯನ್ನು ಬಂಧಿಸಿದ್ದರು.</p><p>ಮೇಲ್ನೋಟಕ್ಕೆ ಆರೋಪಗಳನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿರುವ ಕೋರ್ಟ್, 15 ಸಾವಿರ ವೈಯಕ್ತಿಕ ಬಾಂಡ್ ಮೇಲೆ ಮಹಿಳೆಗೆ ಜಾಮೀನು ಮಂಜೂರು ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ತಾಯಿಯಾದವಳು ತನ್ನ ಮಕ್ಕಳಿಗೆ ಹೊಡೆಯಲು ಸಾಧ್ಯವಿಲ್ಲ ಎಂದು ಹೇಳಿರುವ ಬಾಂಬೆ ಹೈಕೋರ್ಟ್, ಹಲ್ಲೆ ಪ್ರಕರಣದಲ್ಲಿ 28 ವರ್ಷದ ಮಹಿಳೆಗೆ ಜಾಮೀನು ಮಂಜೂರು ಮಾಡಿದೆ.</p><p>ದೂರುದಾರ ತಂದೆ ಮತ್ತು ಆರೋಪಿ ತಾಯಿ ನಡುವಿನ ಜಗಳದಲ್ಲಿ ಮಗು ಬಲಿಪಶುವಾಗಿದೆ ಎಂದು ನ್ಯಾಯಮೂರ್ತಿ ಮಿಲಿಂದ್ ಜಾದವ್ ಅವರಿದ್ದ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.</p><p>ಬಾಲಕನ ವೈದ್ಯಕೀಯ ವರದಿಗಳು ಆತ ಮೂರ್ಛೆರೋಗದಿಂದ ಬಳಲುತ್ತಿರುವುದು ತೋರಿಸುತ್ತಿದೆ. ಅಪೌಷ್ಟಿಕತೆ ಮತ್ತು ರಕ್ತಹೀನತೆಯಿಂದಲೂ ಬಳಲುತ್ತಿದ್ದಾನೆ. ಮಗುವಿನ ಆರೈಕೆಗೆ ಆರೋಪಿ ತಾಯಿ ಹೆಣಗಾಡುತ್ತಿರುವುದು ಇದರಿಂದ ತಿಳಿಯುತ್ತದೆ ಎಂದು ಪೀಠ ಹೇಳಿದೆ.</p><p>ವಿಚ್ಛೇದಿತ ಪತ್ನಿ ಮತ್ತು ಆಕೆಯ ಸಂಗಾತಿ ನನ್ನ ಮಗನಿಗೆ ದೈಹಿಕವಾಗಿ ಹಲ್ಲೆ ಮಾಡುತ್ತಿದ್ದು, ಒಂದು ಬಾರಿ ಕೊಲ್ಲಲ್ಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಮಗುವಿನ ಜೈವಿಕ ತಂದೆ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು 2023 ಮಾರ್ಚ್ನಲ್ಲಿ ಮಹಿಳೆಯನ್ನು ಬಂಧಿಸಿದ್ದರು.</p><p>ಮೇಲ್ನೋಟಕ್ಕೆ ಆರೋಪಗಳನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿರುವ ಕೋರ್ಟ್, 15 ಸಾವಿರ ವೈಯಕ್ತಿಕ ಬಾಂಡ್ ಮೇಲೆ ಮಹಿಳೆಗೆ ಜಾಮೀನು ಮಂಜೂರು ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>