ವಡುತಳಾ ನಿವಾಸಿ ಮನೋಜ್ ಉಣ್ಣಿ ಮೃತರು. ಭಾನುವಾರ ರಾತ್ರಿ 10.30ಕ್ಕೆ ಘಟನೆ ನಡೆದಿದೆ. ಅಪಘಾತ ನಡೆದ ಕೂಡಲೇ ಸಮೀಪದ ಆಸ್ಪತ್ರೆಗೆ ಉಣ್ಣಿ ಅವರನ್ನು ಕರೆದುಕೊಂಡು ಹೋದರೂ ಅವರು ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಯಾವುದೇ ಎಚ್ಚರಿಕೆ ಫಲಕಗಳು ಇಲ್ಲದೆ ರಸ್ತೆಗಳಲ್ಲಿ ಹಗ್ಗಗಳನ್ನು ಕಟ್ಟಲಾಗಿದ್ದು, ರಾತ್ರಿ ವೇಳೆ ಪತ್ತೆ ಹಚ್ಚುವುದು ಕಷ್ಟ ಎಂದು ಉಣ್ಣಿ ಅವರ ಕುಟುಂಬಸ್ಥರು ಹೇಳಿದ್ದಾರೆ.