ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಪ್ರಧಾನಿ ಮೋದಿ ಭದ್ರತೆಗೆ ಅಳವಡಿಸಿದ್ದ ಹಗ್ಗ ಸಿಲುಕಿ ಬೈಕ್ ಸವಾರ ಸಾವು

Published 15 ಏಪ್ರಿಲ್ 2024, 6:07 IST
Last Updated 15 ಏಪ್ರಿಲ್ 2024, 6:07 IST
ಅಕ್ಷರ ಗಾತ್ರ

ಕೊಚ್ಚಿ: ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಹಿನ್ನೆಲೆ ಭದ್ರತೆಗಾಗಿ ಇಲ್ಲಿನ ರಸ್ತೆಯೊಂದರಲ್ಲಿ ಅಳವಡಿಸಿದ್ದ ಹಗ್ಗಕ್ಕೆ ಸಿಲುಕಿ ದ್ವಿಚಕ್ರ ವಾಹನ ಸವಾರನೊಬ್ಬ ದುರಂತ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಡುತಳಾ ನಿವಾಸಿ ಮನೋಜ್‌ ಉಣ್ಣಿ ಮೃತರು. ಭಾನುವಾರ ರಾತ್ರಿ 10.30ಕ್ಕೆ ಘಟನೆ ನಡೆದಿದೆ. ಅಪಘಾತ ನಡೆದ ಕೂಡಲೇ ಸಮೀಪದ ಆಸ್ಪತ್ರೆಗೆ ಉಣ್ಣಿ ಅವರನ್ನು ಕರೆದುಕೊಂಡು ಹೋದರೂ ಅವರು ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಯಾವುದೇ ಎಚ್ಚರಿಕೆ ಫಲಕಗಳು ಇಲ್ಲದೆ ರಸ್ತೆಗಳಲ್ಲಿ ಹಗ್ಗಗಳನ್ನು ಕಟ್ಟಲಾಗಿದ್ದು, ರಾತ್ರಿ ವೇಳೆ ಪತ್ತೆ ಹಚ್ಚುವುದು ಕಷ್ಟ ಎಂದು ಉಣ್ಣಿ ಅವರ ಕುಟುಂಬಸ್ಥರು ಹೇಳಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ಹಿನ್ನೆಲೆ ಭದ್ರತೆಗಾಗಿ ಹಗ್ಗಗಳನ್ನು ಕಟ್ಟಲಾಗಿದೆ. ರಾತ್ರಿಯಲ್ಲಿ ಅದು ಗೋಚರಿಸುವಂತೆ ಅಲ್ಲಿ ರಿಬ್ಬನ್ ಅಥವಾ ಯಾವುದೇ ಪ್ರತಿಫಲಿಸುವ ವಸ್ತುಗಳು ಇರಲಿಲ್ಲ’ ಎಂದು ಉಣ್ಣಿಯವರ ಸಂಬಂಧಿಯೊಬ್ಬರು ಮಾಧ್ಯಮದವರೊಂದಿಗೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT