ಮರಾಠಾ ಸಮುದಾಯದವರಿಗೆ ನೀಡಿದ್ದ ಮಿಸಲಾತಿಯನ್ನು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ರದ್ದುಪಡಿಸಿತ್ತು. ಅಲ್ಲದೆ ಹಿಂದುಳಿದ ವರ್ಗಗಳನ್ನು ಗುರುತಿಸುವ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಪೀಠ ಭಿನ್ನ ತೀರ್ಪು ನೀಡಿತ್ತು. ಮೂವರು ನ್ಯಾಯಮೂರ್ತಿಗಳು ರಾಜ್ಯಗಳಿಗೆ ಈ ಅಧಿಕಾರ ಇಲ್ಲ ಎಂದು ಹೇಳಿದ್ದರೆ, ಇಬ್ಬರು ನ್ಯಾಯಮೂರ್ತಿಗಳು ರಾಜ್ಯಗಳಿಗೆ ಈ ಅಧಿಕಾರ ಇದೆ ಎಂದು ಹೇಳಿದ್ದರು.