ಗ್ವಾಲಿಯರ್ನಿಂದ ದಿನನಿತ್ಯದ ತರಬೇತಿ ಹಾರಾಟಕ್ಕೆ ತೆರಳಿದ್ದ ಯುದ್ಧ ವಿಮಾನಗಳು, ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಅವಘಡಕ್ಕೀಡಾಗಿತ್ತು. ಮಿರಾಜ್ ಯುದ್ಧವಿಮಾನದಲ್ಲಿದ್ದ ಪೈಲಟ್, ಬೆಳಗಾವಿಯ ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ಮೃತಪಟ್ಟಿದ್ದಾರೆ. ಸುಖೋಯ್ ಯುದ್ಧ ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಹೊರಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.