<p><strong>ಭೋಪಾಲ್</strong>: ಮಹಿಳಾ ಸಬಲೀಕರಣ ಮತ್ತು ಕಲ್ಯಾಣ ಕಾರ್ಯಕ್ರಮಗಳಿಗಾಗಿ ₹1.27 ಲಕ್ಷ ಕೋಟಿ ಮೀಸಲಿಟ್ಟಿರುವ, ಹೊಸ ತೆರಿಗೆ ಹೊರೆ ಇಲ್ಲದ ಒಟ್ಟು ₹4.38 ಲಕ್ಷ ಕೋಟಿ ವೆಚ್ಚದ 2026–27ನೇ ಸಾಲಿನ ಬಜೆಟ್ ಅನ್ನು ಬುಧವಾರ ಮಧ್ಯಪ್ರದೇಶದ ಹಣಕಾಸು ಸಚಿವ ಜಗದೀಶ್ ದೇವ್ಡಾ ಮಂಡಿಸಿದರು. </p>.<p>‘ರಾಜ್ಯದ ಜನರ ಮೇಲೆ ಸಾಲದ ಹೊರೆ ವರ್ಷದಿಂದ ವರ್ಷಕ್ಕೆ ಏರುತ್ತಲೇ ಇದೆ’ ಎಂದು ವಿರೋಧ ಪಕ್ಷದ ಮುಖಂಡರು ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.</p>.<p>ಒಟ್ಟಾರೆ ಬಜೆಟ್ ಅನ್ನು ‘ಜ್ಞಾನಿ’ (ಜಿವೈಎಎನ್ಐಐ) ಮಾದರಿಯಲ್ಲಿ ಸಿದ್ಧಪಡಿಸಲಾಗಿದೆ. ಜಿ–ಗರೀಬ್ ಕಲ್ಯಾಣ್, ವೈ–ಯುವ ಶಕ್ತಿ, ಎ–ಅನ್ನದಾತ, ಎನ್–ನಾರಿಶಕ್ತಿ ಮತ್ತು ಐಐ– ಇಂಡಸ್ಟ್ರಿ ಮತ್ತು ಇನ್ಫ್ರಾಸ್ಟ್ರಕ್ಚರ್ ಕ್ಷೇತ್ರಗಳಿಗೆ ಆದ್ಯತೆ ನೀಡಿ, ಪ್ರತಿ ಕ್ಷೇತ್ರಕ್ಕೂ ₹3 ಲಕ್ಷ ಕೋಟಿ ಅನುದಾನ ಮೀಸಲಿಡಲಾಗಿದೆ. </p>.<p class="bodytext">ಒಟ್ಟು 15 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಟೆಟ್ರಾ ಪ್ಯಾಕ್ಗಳಲ್ಲಿ ಹಾಲು ವಿತರಿಸಲಾಗುವುದು, ನಗರದಲ್ಲಿ ಕೆಲಸ ಮಾಡುವ ಮಹಿಳೆಯರಿಗಾಗಿ 5,700 ವಸತಿನಿಲಯಗಳನ್ನು ಪ್ರಾರಂಭಿಸಲಾಗುವುದು ಎಂದು ದೇವ್ಡಾ ಬಜೆಟ್ ಭಾಷಣದಲ್ಲಿ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: ಮಹಿಳಾ ಸಬಲೀಕರಣ ಮತ್ತು ಕಲ್ಯಾಣ ಕಾರ್ಯಕ್ರಮಗಳಿಗಾಗಿ ₹1.27 ಲಕ್ಷ ಕೋಟಿ ಮೀಸಲಿಟ್ಟಿರುವ, ಹೊಸ ತೆರಿಗೆ ಹೊರೆ ಇಲ್ಲದ ಒಟ್ಟು ₹4.38 ಲಕ್ಷ ಕೋಟಿ ವೆಚ್ಚದ 2026–27ನೇ ಸಾಲಿನ ಬಜೆಟ್ ಅನ್ನು ಬುಧವಾರ ಮಧ್ಯಪ್ರದೇಶದ ಹಣಕಾಸು ಸಚಿವ ಜಗದೀಶ್ ದೇವ್ಡಾ ಮಂಡಿಸಿದರು. </p>.<p>‘ರಾಜ್ಯದ ಜನರ ಮೇಲೆ ಸಾಲದ ಹೊರೆ ವರ್ಷದಿಂದ ವರ್ಷಕ್ಕೆ ಏರುತ್ತಲೇ ಇದೆ’ ಎಂದು ವಿರೋಧ ಪಕ್ಷದ ಮುಖಂಡರು ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.</p>.<p>ಒಟ್ಟಾರೆ ಬಜೆಟ್ ಅನ್ನು ‘ಜ್ಞಾನಿ’ (ಜಿವೈಎಎನ್ಐಐ) ಮಾದರಿಯಲ್ಲಿ ಸಿದ್ಧಪಡಿಸಲಾಗಿದೆ. ಜಿ–ಗರೀಬ್ ಕಲ್ಯಾಣ್, ವೈ–ಯುವ ಶಕ್ತಿ, ಎ–ಅನ್ನದಾತ, ಎನ್–ನಾರಿಶಕ್ತಿ ಮತ್ತು ಐಐ– ಇಂಡಸ್ಟ್ರಿ ಮತ್ತು ಇನ್ಫ್ರಾಸ್ಟ್ರಕ್ಚರ್ ಕ್ಷೇತ್ರಗಳಿಗೆ ಆದ್ಯತೆ ನೀಡಿ, ಪ್ರತಿ ಕ್ಷೇತ್ರಕ್ಕೂ ₹3 ಲಕ್ಷ ಕೋಟಿ ಅನುದಾನ ಮೀಸಲಿಡಲಾಗಿದೆ. </p>.<p class="bodytext">ಒಟ್ಟು 15 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಟೆಟ್ರಾ ಪ್ಯಾಕ್ಗಳಲ್ಲಿ ಹಾಲು ವಿತರಿಸಲಾಗುವುದು, ನಗರದಲ್ಲಿ ಕೆಲಸ ಮಾಡುವ ಮಹಿಳೆಯರಿಗಾಗಿ 5,700 ವಸತಿನಿಲಯಗಳನ್ನು ಪ್ರಾರಂಭಿಸಲಾಗುವುದು ಎಂದು ದೇವ್ಡಾ ಬಜೆಟ್ ಭಾಷಣದಲ್ಲಿ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>