<p><strong>ಭೋಪಾಲ್</strong>: ವಿಶ್ವವಿದ್ಯಾಲಯಗಳ ‘ಕುಲಪತಿ’ ಹುದ್ದೆಯನ್ನು ‘ಕುಲಗುರು’ ಎಂದು ಮರುನಾಮಕರಣ ಮಾಡಲು ಮಧ್ಯ ಪ್ರದೇಶ ಸಚಿವ ಸಂಪುಟ ಸೋಮವಾರ ಒಪ್ಪಿಗೆ ಸೂಚಿಸಿದೆ.</p>.<p>ಇದೇ ತಿಂಗಳಲ್ಲಿ ನಾವು ಗುರು ಪೂರ್ಣಿಮೆಯನ್ನು ಆಚರಿಸುವ ಹಿನ್ನೆಲೆಯಲ್ಲಿ, ನಮ್ಮ ಮೂಲ ಸಂಸ್ಕೃತಿಗೆ ಅನುಗುಣವಾಗಿ ಕುಲಪತಿಗಳನ್ನು ‘ಕುಲಗುರು’ ಎಂದು ಸಂಬೋಧಿಸುವ ಸರ್ಕಾರದ ಈ ನಿರ್ಧಾರ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಇನ್ನು ಮುಂದೆ ಮಧ್ಯ ಪ್ರದೇಶದಲ್ಲಿನ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ‘ಕುಲಗುರು’ ಎಂದೇ ಸಂಬೋಧಿಸಲಾಗುವುದು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.</p>.<p>ಸರ್ಕಾರದ ಈ ಪ್ರಸ್ತಾವನೆ ಬಗ್ಗೆ ಹಲವು ರಾಜ್ಯಗಳು ಆಸಕ್ತಿ ತೋರಿದ್ದು, ಪ್ರಸ್ತಾವನೆಯ ಪ್ರತಿಗಳನ್ನು ನೀಡುವಂತೆ ಮನವಿ ಮಾಡಿವೆ. ಇದುವರೆಗೆ ಚಾಲ್ತಿಯಲ್ಲಿದ್ದ ಕುಲಪತಿ ಶಬ್ದವು ಹಲವು ಸಂದರ್ಭದಲ್ಲಿ ಸಮಸ್ಯೆಗೆ ಕಾರಣವಾಗಿತ್ತು. ಅದರಲ್ಲಿಯೂ ಆ ಹುದ್ದೆಯಲ್ಲಿದ್ದ ಮಹಿಳೆಯರಿಗೆ ಮುಜುಗರ ಉಂಟು ಮಾಡುತ್ತಿತ್ತು ಎಂದು ಅವರು ಹೇಳಿದ್ದಾರೆ.</p>.<p>ಹಿಂದೆ ಶಿವರಾಜ್ ಸಿಂಗ್ ಚೌಹಾಣ್ ಅವರು ಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿಗೆ ಕುಲಪತಿ ಹುದ್ದೆಯ ಮರುನಾಮಕರಣ ಪ್ರಸ್ತಾವ ಬಂದಿತ್ತಾದರೂ, ಅನುಷ್ಠಾನವಾಗಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: ವಿಶ್ವವಿದ್ಯಾಲಯಗಳ ‘ಕುಲಪತಿ’ ಹುದ್ದೆಯನ್ನು ‘ಕುಲಗುರು’ ಎಂದು ಮರುನಾಮಕರಣ ಮಾಡಲು ಮಧ್ಯ ಪ್ರದೇಶ ಸಚಿವ ಸಂಪುಟ ಸೋಮವಾರ ಒಪ್ಪಿಗೆ ಸೂಚಿಸಿದೆ.</p>.<p>ಇದೇ ತಿಂಗಳಲ್ಲಿ ನಾವು ಗುರು ಪೂರ್ಣಿಮೆಯನ್ನು ಆಚರಿಸುವ ಹಿನ್ನೆಲೆಯಲ್ಲಿ, ನಮ್ಮ ಮೂಲ ಸಂಸ್ಕೃತಿಗೆ ಅನುಗುಣವಾಗಿ ಕುಲಪತಿಗಳನ್ನು ‘ಕುಲಗುರು’ ಎಂದು ಸಂಬೋಧಿಸುವ ಸರ್ಕಾರದ ಈ ನಿರ್ಧಾರ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಇನ್ನು ಮುಂದೆ ಮಧ್ಯ ಪ್ರದೇಶದಲ್ಲಿನ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ‘ಕುಲಗುರು’ ಎಂದೇ ಸಂಬೋಧಿಸಲಾಗುವುದು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.</p>.<p>ಸರ್ಕಾರದ ಈ ಪ್ರಸ್ತಾವನೆ ಬಗ್ಗೆ ಹಲವು ರಾಜ್ಯಗಳು ಆಸಕ್ತಿ ತೋರಿದ್ದು, ಪ್ರಸ್ತಾವನೆಯ ಪ್ರತಿಗಳನ್ನು ನೀಡುವಂತೆ ಮನವಿ ಮಾಡಿವೆ. ಇದುವರೆಗೆ ಚಾಲ್ತಿಯಲ್ಲಿದ್ದ ಕುಲಪತಿ ಶಬ್ದವು ಹಲವು ಸಂದರ್ಭದಲ್ಲಿ ಸಮಸ್ಯೆಗೆ ಕಾರಣವಾಗಿತ್ತು. ಅದರಲ್ಲಿಯೂ ಆ ಹುದ್ದೆಯಲ್ಲಿದ್ದ ಮಹಿಳೆಯರಿಗೆ ಮುಜುಗರ ಉಂಟು ಮಾಡುತ್ತಿತ್ತು ಎಂದು ಅವರು ಹೇಳಿದ್ದಾರೆ.</p>.<p>ಹಿಂದೆ ಶಿವರಾಜ್ ಸಿಂಗ್ ಚೌಹಾಣ್ ಅವರು ಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿಗೆ ಕುಲಪತಿ ಹುದ್ದೆಯ ಮರುನಾಮಕರಣ ಪ್ರಸ್ತಾವ ಬಂದಿತ್ತಾದರೂ, ಅನುಷ್ಠಾನವಾಗಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>