ಭೋಪಾಲ್ನಲ್ಲಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುವಾಗ ಈ ವಿಷಯ ಪ್ರಸ್ತಾಪಿಸಿದ ಮುಖ್ಯಮಂತ್ರಿ ಯಾದವ್, ‘ಉಪವಿಭಾಗಾಧಿಕಾರಿ ಚಿರಾವನ್ ಈ ಮೊದಲೇ ಗಾಯಗೊಂಡಿದ್ದರು. ಹೀಗಾಗಿ, ಅವರ ನೆರವಿಗೆ ಧಾವಿಸಿದ್ದ ಮಹಿಳಾ ಸಿಬ್ಬಂದಿ, ಅವರ ಶೂಲೇಸ್ ಕಟ್ಟಿದ್ದಾರೆ ಎಂದೂ ಗೊತ್ತಾಗಿದೆ. ಆದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿರುವ ಚಿತ್ರ ಒಳ್ಳೆಯ ಸಂದೇಶ ರವಾನಿಸುವುದಿಲ್ಲ’ ಎಂದಿದ್ದಾರೆ.