<p><strong>ಭೋಪಾಲ್(ಮಧ್ಯಪ್ರದೇಶ)</strong>: ಜನರ ಸಮಸ್ಯೆಗಳ ಬಗ್ಗೆ ಸರ್ಕಾರದ ಮೌನವನ್ನು ವಿರೋಧಿಸಿ ಮಂಗಳವಾರ ಕಾಂಗ್ರೆಸ್ ಶಾಸಕರು ವಿಧಾನಸಭಾ ಆವರಣದಲ್ಲಿ ಕೊಳಲು ನುಡಿಸಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.</p><p>ಸದನದ ಕಲಾಪ ಆರಂಭವಾಗುವ ಮುನ್ನ ವಿರೋಧ ಪಕ್ಷದ ನಾಯಕ ಉಮಾಂಗ್ ಸಿಂಘರ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸಿದ್ದಾರೆ.</p><p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಘರ್, ‘ಕೋಣದ ಮುಂದೆ ಕಿನ್ನರಿ ನುಡಿಸಿದಂತೆ’ ಎಂಬ ಗಾದೆ ಮಾತಿನಿಂದ ಪ್ರೇರಿತವಾಗಿ ಈ ಪ್ರತಿಭಟನೆಯನ್ನು ನಡೆಸಲಾಗಿದೆ’ ಎಂದು ಹೇಳಿದ್ದಾರೆ.</p><p>‘ಜನರ ಸಮಸ್ಯೆಗಳ ಬಗ್ಗೆ ಆಡಳಿತರೂಢ ಬಿಜೆಪಿ ಸರ್ಕಾರದ ಮೌನದ ವಿರುದ್ಧ ಈ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಸರ್ಕಾರವು ಕೋಣದ ಹಾಗೆ ಸಂವೇದನಾರಹಿತವಾಗಿದೆ. ಜನರ ಸಮಸ್ಯೆ ಕೇಳಲು ಮತ್ತು ಅರ್ಥ ಮಾಡಿಕೊಳ್ಳಲು ಸಿದ್ಧವಿಲ್ಲ’ ಎಂದು ತಿಳಿಸಿದ್ದಾರೆ.</p><p>‘ಹಣದುಬ್ಬರದಿಂದ ಜನರು ಬಸವಳಿದಿದ್ದಾರೆ. ಉದ್ಯೋಗವಿಲ್ಲದೇ ಯುವಕರು ಖಾಲಿ ಕುಳಿತಿದ್ದಾರೆ. ತಮ್ಮ ಹಕ್ಕುಗಳಿಗಾಗಿ ರೈತರು ಆಂದೋಲನ ನಡೆಸುತ್ತಿದ್ದಾರೆ. ಮೀಸಲಾತಿಗಾಗಿ ಒಬಿಸಿಗಳು ಹೋರಾಡುತ್ತಿದ್ದಾರೆ. ‘ಲಾಡ್ಲಿ ಬೆಹನ್’ ಯೋಜನೆಯಡಿ ಮಹಿಳೆಯರಿಗೆ ಮಾಸಿಕ ₹3 ಸಾವಿರ ಕೊಡುತ್ತೆವೆಂದು ಭರವಸೆ ನೀಡಿದ್ದ ಸರ್ಕಾರ ಅದನ್ನು ಈಡೇರಿಸಿಲ್ಲ. ಇದೆಲ್ಲದರ ಬಗ್ಗೆ ಸರ್ಕಾರ ಮೌನವಾಗಿದೆ’ ಎಂದು ಕಿಡಿಕಾರಿದ್ದಾರೆ.</p><p>‘ಮಲಗುತ್ತಿರುವ ಸರ್ಕಾರವನ್ನು ಎಬ್ಬಿಸಲು ‘ಮ್ಯೂಸಿಕ್’ ಪ್ರತಿಭಟನೆ ಮಾಡಲಾಯಿತು’ ಎಂದು ಶಾಸಕ ಸಚಿನ್ ಯಾದವ್ ಹೇಳಿದ್ದಾರೆ.</p><p>‘ಕೋಣದ ಹಾಗೆ ಸರ್ಕಾರ ಮಲಗಿದೆ. ಕೊಳಲು ನುಡಿಸಿ ಅದನ್ನು ಎಬ್ಬಿಸಲು ಪ್ರಯತ್ನಿಸಲಾಯಿತು’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್(ಮಧ್ಯಪ್ರದೇಶ)</strong>: ಜನರ ಸಮಸ್ಯೆಗಳ ಬಗ್ಗೆ ಸರ್ಕಾರದ ಮೌನವನ್ನು ವಿರೋಧಿಸಿ ಮಂಗಳವಾರ ಕಾಂಗ್ರೆಸ್ ಶಾಸಕರು ವಿಧಾನಸಭಾ ಆವರಣದಲ್ಲಿ ಕೊಳಲು ನುಡಿಸಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.</p><p>ಸದನದ ಕಲಾಪ ಆರಂಭವಾಗುವ ಮುನ್ನ ವಿರೋಧ ಪಕ್ಷದ ನಾಯಕ ಉಮಾಂಗ್ ಸಿಂಘರ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸಿದ್ದಾರೆ.</p><p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಘರ್, ‘ಕೋಣದ ಮುಂದೆ ಕಿನ್ನರಿ ನುಡಿಸಿದಂತೆ’ ಎಂಬ ಗಾದೆ ಮಾತಿನಿಂದ ಪ್ರೇರಿತವಾಗಿ ಈ ಪ್ರತಿಭಟನೆಯನ್ನು ನಡೆಸಲಾಗಿದೆ’ ಎಂದು ಹೇಳಿದ್ದಾರೆ.</p><p>‘ಜನರ ಸಮಸ್ಯೆಗಳ ಬಗ್ಗೆ ಆಡಳಿತರೂಢ ಬಿಜೆಪಿ ಸರ್ಕಾರದ ಮೌನದ ವಿರುದ್ಧ ಈ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಸರ್ಕಾರವು ಕೋಣದ ಹಾಗೆ ಸಂವೇದನಾರಹಿತವಾಗಿದೆ. ಜನರ ಸಮಸ್ಯೆ ಕೇಳಲು ಮತ್ತು ಅರ್ಥ ಮಾಡಿಕೊಳ್ಳಲು ಸಿದ್ಧವಿಲ್ಲ’ ಎಂದು ತಿಳಿಸಿದ್ದಾರೆ.</p><p>‘ಹಣದುಬ್ಬರದಿಂದ ಜನರು ಬಸವಳಿದಿದ್ದಾರೆ. ಉದ್ಯೋಗವಿಲ್ಲದೇ ಯುವಕರು ಖಾಲಿ ಕುಳಿತಿದ್ದಾರೆ. ತಮ್ಮ ಹಕ್ಕುಗಳಿಗಾಗಿ ರೈತರು ಆಂದೋಲನ ನಡೆಸುತ್ತಿದ್ದಾರೆ. ಮೀಸಲಾತಿಗಾಗಿ ಒಬಿಸಿಗಳು ಹೋರಾಡುತ್ತಿದ್ದಾರೆ. ‘ಲಾಡ್ಲಿ ಬೆಹನ್’ ಯೋಜನೆಯಡಿ ಮಹಿಳೆಯರಿಗೆ ಮಾಸಿಕ ₹3 ಸಾವಿರ ಕೊಡುತ್ತೆವೆಂದು ಭರವಸೆ ನೀಡಿದ್ದ ಸರ್ಕಾರ ಅದನ್ನು ಈಡೇರಿಸಿಲ್ಲ. ಇದೆಲ್ಲದರ ಬಗ್ಗೆ ಸರ್ಕಾರ ಮೌನವಾಗಿದೆ’ ಎಂದು ಕಿಡಿಕಾರಿದ್ದಾರೆ.</p><p>‘ಮಲಗುತ್ತಿರುವ ಸರ್ಕಾರವನ್ನು ಎಬ್ಬಿಸಲು ‘ಮ್ಯೂಸಿಕ್’ ಪ್ರತಿಭಟನೆ ಮಾಡಲಾಯಿತು’ ಎಂದು ಶಾಸಕ ಸಚಿನ್ ಯಾದವ್ ಹೇಳಿದ್ದಾರೆ.</p><p>‘ಕೋಣದ ಹಾಗೆ ಸರ್ಕಾರ ಮಲಗಿದೆ. ಕೊಳಲು ನುಡಿಸಿ ಅದನ್ನು ಎಬ್ಬಿಸಲು ಪ್ರಯತ್ನಿಸಲಾಯಿತು’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>