<p><strong>ದೇವಾಸ್:</strong> ಮಧ್ಯಪ್ರದೇಶದ ದೇವಾಸ್ ನಗರದ ಪ್ರಸಿದ್ಧ ಮಾತಾ ತೇಕ್ರಿ ದೇವಾಲಯಕ್ಕೆ ಜನರ ಗುಂಪೊಂದು ಬಲವಂತವಾಗಿ ಪ್ರವೇಶಿಸಿದ್ದು, ಅವರನ್ನು ತಡೆದ ಅರ್ಚಕರನ್ನು ಥಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಿಜೆಪಿ ಶಾಸಕರ ಪುತ್ರ ಗುಂಪಿನಲ್ಲಿದ್ದ ಎಂದು ವಿರೋಧ ಪಕ್ಷ ಕಾಂಗ್ರೆಸ್ ಹೇಳಿಕೊಂಡರೂ, ಪೊಲೀಸರು ಆರೋಪವನ್ನು ದೃಢಪಡಿಸಲಿಲ್ಲ.</p>.ಮಹಜರು ನಡೆಸಿ ಬರುವಾಗ ಪೊಲೀಸರ ಮೇಲೆ ಹಲ್ಲೆ: ಕೊಲೆ ಆರೋಪಿ ಕಾಲಿಗೆ ಗುಂಡು.<p>ಜಿತು ರಘುವಂಶಿ ಎಂಬಾಂತ ಶುಕ್ರವಾರ ತಡರಾತ್ರಿ ಗುಂಪು ಕಟ್ಟಿಕೊಂಡು 8–10 ಕಾರುಗಳಲ್ಲಿ ದೇವಾಲಯಕ್ಕೆ ಬಂದಿದ್ದಾರೆ ಎಂದು ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಅರ್ಚಕರು ದೂರು ನೀಡಿದ್ದಾರೆ. ಆತನಿಗೆ ಅಪರಾಧ ಹಿನ್ನೆಲೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಗುಂಪಿನ ಸದಸ್ಯರು ಗೇಟ್ ತೆರೆಯಲು ಅರ್ಚಕರಿಗೆ ಹೇಳಿದ್ದಾರೆ. ನಿರಾಕರಿಸಿದಾಗ, ಅವರನ್ನು ನಿಂದಿಸಿ ಥಳಿಸಿದ್ದಾರೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಅಗರ್ವಾಲ್ ಶನಿವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.ಹಲ್ಲೆ ಮಾಡಿ ಚಿನ್ನಾಭರಣ ಕಸಿದಿದ್ದ ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ.<p>ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಸುಮಾರು 50 ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು.</p><p>ಬಿಜೆಪಿ ನಾಯಕರೊಬ್ಬರ ಪುತ್ರ ಈ ಗುಂಪನ್ನು ಮುನ್ನಡೆಸಿದ್ದಾರೆಯೇ ಎನ್ನುವ ಪ್ರಶ್ನೆಗೆ, ‘ಪ್ರಕರಣ ತನಿಖೆ ಹಂತದಲ್ಲಿದೆ’ ಎಂದು ಅಗರ್ವಾಲ್ ವರದಿಗಾರರಿಗೆ ತಿಳಿಸಿದ್ದಾರೆ.</p><p>ಬೆಟ್ಟದ ತುದಿಯಲ್ಲಿರುವ ದೇವಾಲಯಕ್ಕೆ ಬಂದು ಎರಡು ಕಾರಿನ ಮೇಲೆ ಕೆಂಪು ದೀಪ ಇರುವ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ.</p><p>ಸನಾತನಿಯಾಗಿದ್ದರೂ ಇಂತಹ ಕೃತ್ಯ ಎಸಗಿದ ತನ್ನ ಮಗನ ಮೇಲೆ ಬಿಜೆಪಿ ಶಾಸಕರು ನಿಗಾ ಇಡಬೇಕು ಎಂದು ದೇವಾಸ್ ನಗರ ಕಾಂಗ್ರೆಸ್ ಅಧ್ಯಕ್ಷ ಮನೋಜ್ ರಜನಿ ಹೇಳಿದ್ದಾರೆ.</p> .ಚಿಕ್ಕಮಗಳೂರು | ವ್ಯಸನ ಮುಕ್ತಿ ಕೇಂದ್ರದಲ್ಲಿ ಹಲ್ಲೆ: ಕ್ರಮಕ್ಕೆ ಒತ್ತಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವಾಸ್:</strong> ಮಧ್ಯಪ್ರದೇಶದ ದೇವಾಸ್ ನಗರದ ಪ್ರಸಿದ್ಧ ಮಾತಾ ತೇಕ್ರಿ ದೇವಾಲಯಕ್ಕೆ ಜನರ ಗುಂಪೊಂದು ಬಲವಂತವಾಗಿ ಪ್ರವೇಶಿಸಿದ್ದು, ಅವರನ್ನು ತಡೆದ ಅರ್ಚಕರನ್ನು ಥಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಿಜೆಪಿ ಶಾಸಕರ ಪುತ್ರ ಗುಂಪಿನಲ್ಲಿದ್ದ ಎಂದು ವಿರೋಧ ಪಕ್ಷ ಕಾಂಗ್ರೆಸ್ ಹೇಳಿಕೊಂಡರೂ, ಪೊಲೀಸರು ಆರೋಪವನ್ನು ದೃಢಪಡಿಸಲಿಲ್ಲ.</p>.ಮಹಜರು ನಡೆಸಿ ಬರುವಾಗ ಪೊಲೀಸರ ಮೇಲೆ ಹಲ್ಲೆ: ಕೊಲೆ ಆರೋಪಿ ಕಾಲಿಗೆ ಗುಂಡು.<p>ಜಿತು ರಘುವಂಶಿ ಎಂಬಾಂತ ಶುಕ್ರವಾರ ತಡರಾತ್ರಿ ಗುಂಪು ಕಟ್ಟಿಕೊಂಡು 8–10 ಕಾರುಗಳಲ್ಲಿ ದೇವಾಲಯಕ್ಕೆ ಬಂದಿದ್ದಾರೆ ಎಂದು ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಅರ್ಚಕರು ದೂರು ನೀಡಿದ್ದಾರೆ. ಆತನಿಗೆ ಅಪರಾಧ ಹಿನ್ನೆಲೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಗುಂಪಿನ ಸದಸ್ಯರು ಗೇಟ್ ತೆರೆಯಲು ಅರ್ಚಕರಿಗೆ ಹೇಳಿದ್ದಾರೆ. ನಿರಾಕರಿಸಿದಾಗ, ಅವರನ್ನು ನಿಂದಿಸಿ ಥಳಿಸಿದ್ದಾರೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಅಗರ್ವಾಲ್ ಶನಿವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.ಹಲ್ಲೆ ಮಾಡಿ ಚಿನ್ನಾಭರಣ ಕಸಿದಿದ್ದ ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ.<p>ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಸುಮಾರು 50 ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು.</p><p>ಬಿಜೆಪಿ ನಾಯಕರೊಬ್ಬರ ಪುತ್ರ ಈ ಗುಂಪನ್ನು ಮುನ್ನಡೆಸಿದ್ದಾರೆಯೇ ಎನ್ನುವ ಪ್ರಶ್ನೆಗೆ, ‘ಪ್ರಕರಣ ತನಿಖೆ ಹಂತದಲ್ಲಿದೆ’ ಎಂದು ಅಗರ್ವಾಲ್ ವರದಿಗಾರರಿಗೆ ತಿಳಿಸಿದ್ದಾರೆ.</p><p>ಬೆಟ್ಟದ ತುದಿಯಲ್ಲಿರುವ ದೇವಾಲಯಕ್ಕೆ ಬಂದು ಎರಡು ಕಾರಿನ ಮೇಲೆ ಕೆಂಪು ದೀಪ ಇರುವ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ.</p><p>ಸನಾತನಿಯಾಗಿದ್ದರೂ ಇಂತಹ ಕೃತ್ಯ ಎಸಗಿದ ತನ್ನ ಮಗನ ಮೇಲೆ ಬಿಜೆಪಿ ಶಾಸಕರು ನಿಗಾ ಇಡಬೇಕು ಎಂದು ದೇವಾಸ್ ನಗರ ಕಾಂಗ್ರೆಸ್ ಅಧ್ಯಕ್ಷ ಮನೋಜ್ ರಜನಿ ಹೇಳಿದ್ದಾರೆ.</p> .ಚಿಕ್ಕಮಗಳೂರು | ವ್ಯಸನ ಮುಕ್ತಿ ಕೇಂದ್ರದಲ್ಲಿ ಹಲ್ಲೆ: ಕ್ರಮಕ್ಕೆ ಒತ್ತಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>