<p><strong>ಇಂದೋರ್</strong>: ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯದಿಂದಾಗಿ ಪರೀಕ್ಷೆಗೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಮಧ್ಯಪ್ರದೇಶದ ಹೈಕೋರ್ಟ್ನ ಇಂದೋರ್ ಪೀಠವು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ನೀಟ್ - ಯುಜಿ ಫಲಿತಾಂಶ ಘೋಷಣೆಗೆ ಮಧ್ಯಂತರ ತಡೆ ನೀಡಿದೆ.</p><p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಬೋಧ್ ಅಭ್ಯಂಕರ್, ವಿದ್ಯುತ್ ಕಡಿತದಿಂದಾಗಿ ವಿದ್ಯಾರ್ಥಿನಿ ಪರೀಕ್ಷೆ ಮೇಲೆ ಪರಿಣಾಮ ಬೀರಿದೆ. ಪರೀಕ್ಷೆಯ ಸಮಯದಲ್ಲಿ ಸರಿಯಾದ ವ್ಯವಸ್ಥೆಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.ಡೀಪ್ಫೇಕ್ಗೆ ಸಿಲುಕಿದ ಕರ್ನಲ್ ಖುರೇಷಿ: ಪಿಐಎಲ್ ವಿಚಾರಣೆಗೆ ‘ಸುಪ್ರೀಂ’ ನಕಾರ .ಚಿತ್ರಗಳಲ್ಲಿ ನೋಡಿ: ಮೈಸೂರಲ್ಲಿ ಬೃಹತ್ ತಿರಂಗ ಯಾತ್ರೆ– ಸಾವಿರಾರು ಜನರ ಭಾಗಿ. <p>ಮುಂದಿನ ವಿಚಾರಣೆ ನಡೆಯುವವರೆಗೂ ನೀಟ್-ಯುಜಿ ಫಲಿತಾಂಶವನ್ನು ಘೋಷಿಸಬಾರದು ಎಂದು ನಿರ್ದೇಶಿಸಿದ್ದಾರೆ.</p><p>ವಿದ್ಯಾರ್ಥಿನಿಯು ತನ್ನ ಅರ್ಜಿಯಲ್ಲಿ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಕೋರಿದ್ದಾರೆ ಎಂದು ತಿಳಿದು ಬಂದಿದೆ.</p><p>ಈ ಅರ್ಜಿಯ ಮುಂದಿನ ವಿಚಾರಣೆ ಜೂನ್ 30ರಂದು ನಡೆಯುವ ಸಾಧ್ಯತೆ ಇದೆ. ನ್ಯಾಯಾಲಯದ ನಿರ್ದೇಶನವು ದೇಶದ 21 ಲಕ್ಷ ಅಭ್ಯರ್ಥಿಗಳ ಮೇಲೆ ಪರಿಣಾಮ ಬೀರಬಹುದು.|</p>. ಕಾಂಗ್ರೆಸ್ ಸೇನೆಯ ಬಗ್ಗೆ ಟೀಕೆ ಮಾಡಿಲ್ಲ: ದಿನೇಶ್ ಗುಂಡೂರಾವ್.IPL ನಾಳೆ ಪುನರಾರಂಭ: ಬ್ಯಾಟಿಂಗ್, ಬೌಲಿಂಗ್ನಲ್ಲಿ ಮಿಂಚಿದವರ ಪಟ್ಟಿ ಇಲ್ಲಿದೆ. <p>ಮೇ 4 ರಂದು ನಡೆದ ಮೂರು ಗಂಟೆಗಳ ನೀಟ್ - ಯುಜಿಯ ಪರೀಕ್ಷೆಯ ಸಮಯದಲ್ಲಿ ಇಂದೋರ್ನ ಅನೇಕ ಕೇಂದ್ರಗಳಲ್ಲಿ ಒಂದರಿಂದ ಎರಡು ಗಂಟೆಗಳ ಕಾಲ ವಿದ್ಯುತ್ ಕಡಿತಗೊಂಡಿತ್ತು. ಇದು ವಿದ್ಯಾರ್ಥಿಗಳ ಪರೀಕ್ಷೆ ಮೇಲೆ ಪರಿಣಾಮ ಬೀರಿದೆ ಎಂದು ಅರ್ಜಿದಾರೆ ಪರ ವಕೀಲ ಮೃದುಲ್ ಭಟ್ನಾಗರ್ ಸುದ್ದಿಸಂಸ್ಥೆ ‘ಪಿಟಿಐ‘ಗೆ ತಿಳಿಸಿದ್ದಾರೆ.</p><p>ಮೇ 4 ರಂದು ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ. ವಿದ್ಯುತ್ ವ್ಯತ್ಯಯದಿಂದಾಗಿ ಕೆಲವು ಕೇಂದ್ರಗಳಲ್ಲಿ ಮೇಣದಬತ್ತಿಯ ಬೆಳಕಿನಲ್ಲಿ ಪ್ರವೇಶ ಪರೀಕ್ಷೆ ನಡೆಸಲಾಯಿತು ಎಂದು ಭಟ್ನಾಗರ್ ಹೇಳಿದ್ದಾರೆ.</p> .ಮುಸ್ಸಂಜೆ ಮಾತು ಸಿನಿಮಾ ಬಿಡುಗಡೆಯಾಗಿ 17 ವರ್ಷ: ವಿಶೇಷ ವಿಡಿಯೊ ಹಂಚಿಕೊಂಡ ಸುದೀಪ್.‘ಮಿಸ್ ವರ್ಲ್ಡ್’ ಸ್ಪರ್ಧೆಯಿಂದ ಜಾಗತಿಕ ಹೂಡಿಕೆ ಆಕರ್ಷಣೆ: ತೆಲಂಗಾಣದ ನಿರೀಕ್ಷೆ.ನಾಳೆಯಿಂದ ಐಪಿಎಲ್|ಆರ್ಸಿಬಿ vs ಕೆಕೆಆರ್ ಹಣಾಹಣಿ: ಕೊಹ್ಲಿ ಮೇಲೆ ಎಲ್ಲರ ಕಣ್ಣು .ಮೌಂಟ್ ಎವರೆಸ್ಟ್ ಏರಿ ಭಾರತೀಯನ ಸಂಭ್ರಮ; ಇಳಿಯುವ ಹಾದಿಯಲ್ಲಿ ಮರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್</strong>: ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯದಿಂದಾಗಿ ಪರೀಕ್ಷೆಗೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಮಧ್ಯಪ್ರದೇಶದ ಹೈಕೋರ್ಟ್ನ ಇಂದೋರ್ ಪೀಠವು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ನೀಟ್ - ಯುಜಿ ಫಲಿತಾಂಶ ಘೋಷಣೆಗೆ ಮಧ್ಯಂತರ ತಡೆ ನೀಡಿದೆ.</p><p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಬೋಧ್ ಅಭ್ಯಂಕರ್, ವಿದ್ಯುತ್ ಕಡಿತದಿಂದಾಗಿ ವಿದ್ಯಾರ್ಥಿನಿ ಪರೀಕ್ಷೆ ಮೇಲೆ ಪರಿಣಾಮ ಬೀರಿದೆ. ಪರೀಕ್ಷೆಯ ಸಮಯದಲ್ಲಿ ಸರಿಯಾದ ವ್ಯವಸ್ಥೆಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.ಡೀಪ್ಫೇಕ್ಗೆ ಸಿಲುಕಿದ ಕರ್ನಲ್ ಖುರೇಷಿ: ಪಿಐಎಲ್ ವಿಚಾರಣೆಗೆ ‘ಸುಪ್ರೀಂ’ ನಕಾರ .ಚಿತ್ರಗಳಲ್ಲಿ ನೋಡಿ: ಮೈಸೂರಲ್ಲಿ ಬೃಹತ್ ತಿರಂಗ ಯಾತ್ರೆ– ಸಾವಿರಾರು ಜನರ ಭಾಗಿ. <p>ಮುಂದಿನ ವಿಚಾರಣೆ ನಡೆಯುವವರೆಗೂ ನೀಟ್-ಯುಜಿ ಫಲಿತಾಂಶವನ್ನು ಘೋಷಿಸಬಾರದು ಎಂದು ನಿರ್ದೇಶಿಸಿದ್ದಾರೆ.</p><p>ವಿದ್ಯಾರ್ಥಿನಿಯು ತನ್ನ ಅರ್ಜಿಯಲ್ಲಿ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಕೋರಿದ್ದಾರೆ ಎಂದು ತಿಳಿದು ಬಂದಿದೆ.</p><p>ಈ ಅರ್ಜಿಯ ಮುಂದಿನ ವಿಚಾರಣೆ ಜೂನ್ 30ರಂದು ನಡೆಯುವ ಸಾಧ್ಯತೆ ಇದೆ. ನ್ಯಾಯಾಲಯದ ನಿರ್ದೇಶನವು ದೇಶದ 21 ಲಕ್ಷ ಅಭ್ಯರ್ಥಿಗಳ ಮೇಲೆ ಪರಿಣಾಮ ಬೀರಬಹುದು.|</p>. ಕಾಂಗ್ರೆಸ್ ಸೇನೆಯ ಬಗ್ಗೆ ಟೀಕೆ ಮಾಡಿಲ್ಲ: ದಿನೇಶ್ ಗುಂಡೂರಾವ್.IPL ನಾಳೆ ಪುನರಾರಂಭ: ಬ್ಯಾಟಿಂಗ್, ಬೌಲಿಂಗ್ನಲ್ಲಿ ಮಿಂಚಿದವರ ಪಟ್ಟಿ ಇಲ್ಲಿದೆ. <p>ಮೇ 4 ರಂದು ನಡೆದ ಮೂರು ಗಂಟೆಗಳ ನೀಟ್ - ಯುಜಿಯ ಪರೀಕ್ಷೆಯ ಸಮಯದಲ್ಲಿ ಇಂದೋರ್ನ ಅನೇಕ ಕೇಂದ್ರಗಳಲ್ಲಿ ಒಂದರಿಂದ ಎರಡು ಗಂಟೆಗಳ ಕಾಲ ವಿದ್ಯುತ್ ಕಡಿತಗೊಂಡಿತ್ತು. ಇದು ವಿದ್ಯಾರ್ಥಿಗಳ ಪರೀಕ್ಷೆ ಮೇಲೆ ಪರಿಣಾಮ ಬೀರಿದೆ ಎಂದು ಅರ್ಜಿದಾರೆ ಪರ ವಕೀಲ ಮೃದುಲ್ ಭಟ್ನಾಗರ್ ಸುದ್ದಿಸಂಸ್ಥೆ ‘ಪಿಟಿಐ‘ಗೆ ತಿಳಿಸಿದ್ದಾರೆ.</p><p>ಮೇ 4 ರಂದು ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ. ವಿದ್ಯುತ್ ವ್ಯತ್ಯಯದಿಂದಾಗಿ ಕೆಲವು ಕೇಂದ್ರಗಳಲ್ಲಿ ಮೇಣದಬತ್ತಿಯ ಬೆಳಕಿನಲ್ಲಿ ಪ್ರವೇಶ ಪರೀಕ್ಷೆ ನಡೆಸಲಾಯಿತು ಎಂದು ಭಟ್ನಾಗರ್ ಹೇಳಿದ್ದಾರೆ.</p> .ಮುಸ್ಸಂಜೆ ಮಾತು ಸಿನಿಮಾ ಬಿಡುಗಡೆಯಾಗಿ 17 ವರ್ಷ: ವಿಶೇಷ ವಿಡಿಯೊ ಹಂಚಿಕೊಂಡ ಸುದೀಪ್.‘ಮಿಸ್ ವರ್ಲ್ಡ್’ ಸ್ಪರ್ಧೆಯಿಂದ ಜಾಗತಿಕ ಹೂಡಿಕೆ ಆಕರ್ಷಣೆ: ತೆಲಂಗಾಣದ ನಿರೀಕ್ಷೆ.ನಾಳೆಯಿಂದ ಐಪಿಎಲ್|ಆರ್ಸಿಬಿ vs ಕೆಕೆಆರ್ ಹಣಾಹಣಿ: ಕೊಹ್ಲಿ ಮೇಲೆ ಎಲ್ಲರ ಕಣ್ಣು .ಮೌಂಟ್ ಎವರೆಸ್ಟ್ ಏರಿ ಭಾರತೀಯನ ಸಂಭ್ರಮ; ಇಳಿಯುವ ಹಾದಿಯಲ್ಲಿ ಮರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>