‘ಸ್ಥಳದಲ್ಲಿ ಗುಂಡಿನ ಚಕಮಕಿ ನಡೆದಿಲ್ಲ. ಮನೆಯೊಳಗಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಲಾಕರ್, ಗೋದಾಮು, ಸ್ಟೋರ್ ರೂಂ ಸುರಕ್ಷಿತವಾಗಿವೆ. ಸಿ.ಸಿ.ಟಿ.ವಿ ಕ್ಯಾಮೆರಾದ ಸ್ಕ್ರೀನ್ಗೆ ಹಾನಿಯಾಗಿದೆ. ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಭೇಟಿ ನೀಡಿ, ಪರೀಕ್ಷೆ ನಡೆಸಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಯಾವ ರೀತಿ ಹತ್ಯೆ ನಡೆದಿದೆ ಎಂಬುದು ಗೊತ್ತಾಗಲಿದೆ. ಪ್ರಕರಣದ ತನಿಖೆಗಾಗಿ ಎಸ್ಐಟಿ ರಚಿಸಲಾಗುವುದು’ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಶರ್ಮಾ ಹೇಳಿದ್ದಾರೆ.