<p><strong>ಭೋಪಾಲ್</strong>: ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮತ್ತು ಕೃಷ್ಣ ದೇವರ ಅವತಾರ ಎಂದು ಮಧ್ಯ ಪ್ರದೇಶದ ಕೃಷಿ ಸಚಿವ ಮತ್ತು ಬಿಜೆಪಿ ನಾಯಕ ಕಮಲ್ ಪಟೇಲ್ ಹೇಳಿದ್ದಾರೆ.</p>.<p>ಕಾಂಗ್ರೆಸ್ ಸೃಷ್ಟಿಸಿರುವ ಭ್ರಷ್ಟಾಚಾರ ಮತ್ತು ಅನಾಚಾರಗಳನ್ನು ತೊಲಗಿಸಲು ಪ್ರಧಾನಿ ಮೋದಿ ಅವತಾರವೆತ್ತಿ ಬಂದಿದ್ದಾರೆ ಎಂದು ಪಟೇಲ್ ತಿಳಿಸಿದ್ದಾರೆ.</p>.<p>ಹರ್ದಾದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಭಾರತ ವಿಶ್ವಗುರುವಾಗುತ್ತಿದೆ. ಭ್ರಷ್ಟಾಚಾರ ಕೊನೆಯಾಗುತ್ತಿದೆ. ಇಷ್ಟೊಂದು ಜನರ ಕಲ್ಯಾಣ ಓರ್ವ ಜನಸಾಮಾನ್ಯನಿಂದ ಸಾಧ್ಯವಿಲ್ಲ. ಪ್ರಧಾನಿ ಮೋದಿ ಅವರು ಅವತಾರ ತಾಳಿ ಬಂದಿದ್ದಾರೆ ಎಂದು ಹೇಳಿದ್ದಾರೆ.</p>.<p><a href="https://www.prajavani.net/india-news/this-is-best-time-to-invest-in-india-says-pm-at-world-economic-forum-902815.html" itemprop="url">ಭಾರತದಲ್ಲಿ ಹೂಡಿಕೆಗೆ ಇದು ಸೂಕ್ತ ಸಮಯ: ವಿಶ್ವ ಆರ್ಥಿಕ ವೇದಿಕೆಯಲ್ಲಿ ಮೋದಿ ಹೇಳಿಕೆ </a></p>.<p>ಭೂಮಿಯಲ್ಲಿ ಅನ್ಯಾಯ ಉಂಟಾದಾಗ, ರಾಮ ದೇವರು ಅವತಾರ ತಾಳಿ ಬಂದಿದ್ದರು. ರಾಕ್ಷಸ ಸಂಹಾರ ಮಾಡಿ ರಾಮರಾಜ್ಯ ಸ್ಥಾಪಿಸಿದ್ದರು. ಅದೇ ಮಾದರಿಯಲ್ಲಿ ಈಗ ಪ್ರಧಾನಿ ಮೋದಿ ಜನ್ಮತಾಳಿದ್ದು, ದೇಶದಲ್ಲಿ ನಡೆಯುತ್ತಿರುವ ಎಲ್ಲ ಭ್ರಷ್ಟಾಚಾರ, ಅನಾಚಾರವನ್ನು ಕೊನೆಗೊಳಿಸಲಿದ್ದಾರೆ ಎಂದು ಸಚಿವರು ಹೇಳಿಕೆ ನೀಡಿದ್ದಾರೆ.</p>.<p><a href="https://www.prajavani.net/india-news/supreme-court-lawyer-gets-threat-call-in-pm-narendra-modi-security-breach-case-902914.html" itemprop="url">ಪ್ರಧಾನಿ ಭದ್ರತಾ ಲೋಪ ಪ್ರಕರಣ: ಸುಪ್ರೀಂ ಕೋರ್ಟ್ ವಕೀಲರಿಗೆ ಮತ್ತೆ ಬೆದರಿಕೆ ಕರೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮತ್ತು ಕೃಷ್ಣ ದೇವರ ಅವತಾರ ಎಂದು ಮಧ್ಯ ಪ್ರದೇಶದ ಕೃಷಿ ಸಚಿವ ಮತ್ತು ಬಿಜೆಪಿ ನಾಯಕ ಕಮಲ್ ಪಟೇಲ್ ಹೇಳಿದ್ದಾರೆ.</p>.<p>ಕಾಂಗ್ರೆಸ್ ಸೃಷ್ಟಿಸಿರುವ ಭ್ರಷ್ಟಾಚಾರ ಮತ್ತು ಅನಾಚಾರಗಳನ್ನು ತೊಲಗಿಸಲು ಪ್ರಧಾನಿ ಮೋದಿ ಅವತಾರವೆತ್ತಿ ಬಂದಿದ್ದಾರೆ ಎಂದು ಪಟೇಲ್ ತಿಳಿಸಿದ್ದಾರೆ.</p>.<p>ಹರ್ದಾದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಭಾರತ ವಿಶ್ವಗುರುವಾಗುತ್ತಿದೆ. ಭ್ರಷ್ಟಾಚಾರ ಕೊನೆಯಾಗುತ್ತಿದೆ. ಇಷ್ಟೊಂದು ಜನರ ಕಲ್ಯಾಣ ಓರ್ವ ಜನಸಾಮಾನ್ಯನಿಂದ ಸಾಧ್ಯವಿಲ್ಲ. ಪ್ರಧಾನಿ ಮೋದಿ ಅವರು ಅವತಾರ ತಾಳಿ ಬಂದಿದ್ದಾರೆ ಎಂದು ಹೇಳಿದ್ದಾರೆ.</p>.<p><a href="https://www.prajavani.net/india-news/this-is-best-time-to-invest-in-india-says-pm-at-world-economic-forum-902815.html" itemprop="url">ಭಾರತದಲ್ಲಿ ಹೂಡಿಕೆಗೆ ಇದು ಸೂಕ್ತ ಸಮಯ: ವಿಶ್ವ ಆರ್ಥಿಕ ವೇದಿಕೆಯಲ್ಲಿ ಮೋದಿ ಹೇಳಿಕೆ </a></p>.<p>ಭೂಮಿಯಲ್ಲಿ ಅನ್ಯಾಯ ಉಂಟಾದಾಗ, ರಾಮ ದೇವರು ಅವತಾರ ತಾಳಿ ಬಂದಿದ್ದರು. ರಾಕ್ಷಸ ಸಂಹಾರ ಮಾಡಿ ರಾಮರಾಜ್ಯ ಸ್ಥಾಪಿಸಿದ್ದರು. ಅದೇ ಮಾದರಿಯಲ್ಲಿ ಈಗ ಪ್ರಧಾನಿ ಮೋದಿ ಜನ್ಮತಾಳಿದ್ದು, ದೇಶದಲ್ಲಿ ನಡೆಯುತ್ತಿರುವ ಎಲ್ಲ ಭ್ರಷ್ಟಾಚಾರ, ಅನಾಚಾರವನ್ನು ಕೊನೆಗೊಳಿಸಲಿದ್ದಾರೆ ಎಂದು ಸಚಿವರು ಹೇಳಿಕೆ ನೀಡಿದ್ದಾರೆ.</p>.<p><a href="https://www.prajavani.net/india-news/supreme-court-lawyer-gets-threat-call-in-pm-narendra-modi-security-breach-case-902914.html" itemprop="url">ಪ್ರಧಾನಿ ಭದ್ರತಾ ಲೋಪ ಪ್ರಕರಣ: ಸುಪ್ರೀಂ ಕೋರ್ಟ್ ವಕೀಲರಿಗೆ ಮತ್ತೆ ಬೆದರಿಕೆ ಕರೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>