ರಾಜ್ಯಾದ್ಯಂತ ನರ್ಸಿಂಗ್ ಕಾಲೇಜುಗಳು ನಿಗದಿತ ಮಾನದಂಡಗಳನ್ನು ಪಾಲಿಸುತ್ತಿವೆಯೇ ಮತ್ತು ಮೂಲಸೌಕರ್ಯಗಳು ಹಾಗೂ ಅಧ್ಯಾಪಕರ ವಿಷಯದಲ್ಲಿ ಗುಣಮಟ್ಟ ಕಾಪಾಡಿಕೊಂಡಿವೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ಹೈಕೋರ್ಟ್, ತಪಾಸಣೆ ನಡೆಸುವಂತೆ ಆದೇಶ ನೀಡಿತ್ತು. ಹೈಕೋರ್ಟ್ ಆದೇಶದ ಮೇರೆಗೆ ರಚಿಸಲಾಗಿದ್ದ ಸಿಬಿಐ ತನಿಖಾ ತಂಡಗಳಲ್ಲಿರುವ ಅಧಿಕಾರಿಗಳೇ ಭ್ರಷ್ಟಾಚಾರಾದಲ್ಲಿ ಶಾಮೀಲಾಗಿರುವುದಾಗಿ ತನ್ನ ಆಂತರಿಕ ಜಾಗೃತ ದಳ ನೀಡಿದ ಮಾಹಿತಿ ಆಧರಿಸಿ ಸಿಬಿಐ ಪ್ರಕರಣ ದಾಖಲಿಸಿ, ಆರೋಪಿಗಳನ್ನು ಬಂಧಿಸಿದೆ.